ಮಹಿಂದಾ ರಾಜಪಕ್ಸೆ - ಗೋಟಬಯ ರಾಜಪಕ್ಸೆ 
ವಿದೇಶ

ಸಹೋದರ ಮಹಿಂದಾ ರಾಜಪಕ್ಸೆಯನ್ನು ಲಂಕಾ ಪ್ರಧಾನಿಯಾಗಿ ಆಯ್ಕೆ ಮಾಡಿದ ಶ್ರೀಲಂಕಾ ಅಧ್ಯಕ್ಷ

ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಬುಧವಾರ ರಾಜೀನಾಮೆ ನೀಡಲಿದ್ದು, ರಾಜೀನಾಮೆ ಬೆನ್ನಲ್ಲೇ ನೂತನ ಅಧ್ಯಕ್ಷ ಗೊಟಬಾಯ ರಾಜಪಕ್ಸ್ ಅವರು ತಮ್ಮ ಹಿರಿಯ ಸಹೋದರ ಮಹಿಂದಾ ರಾಜಪಕ್ಸೆ ಅವರನ್ನು...

ಕೊಲಂಬೋ: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಬುಧವಾರ ರಾಜೀನಾಮೆ ನೀಡಲಿದ್ದು, ರಾಜೀನಾಮೆ ಬೆನ್ನಲ್ಲೇ ನೂತನ ಅಧ್ಯಕ್ಷ ಗೊಟಬಾಯ ರಾಜಪಕ್ಸ್ ಅವರು ತಮ್ಮ ಹಿರಿಯ ಸಹೋದರ ಮಹಿಂದಾ ರಾಜಪಕ್ಸೆ ಅವರನ್ನು ನೂತನ ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ.

ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯ ಸಾಧಿಸಿದ್ದ ಗೋಟಬಯ ರಾಜಪಕ್ಸೆ ಅವರು ನಿರೀಕ್ಷೆಯಂತೆ ಇಂದು ಶ್ರೀಲಂಕಾದ ಮಾಜಿ ಅಧ್ಯಕ್ಷ, ತಮ್ಮ ಹಿರಿಯ ಅಣ್ಣ ಮಹಿಂದಾಾ ರಾಜಪಕ್ಸೆಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಸದ್ಯ ಪ್ರತಿಪಕ್ಷದ ನಾಯಕರಾಗಿರುವ ಮಹಿಂದಾ ರಾಜಪಕ್ಸೆ ಅವರು ಶೀಘ್ರದಲ್ಲೇ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಎಎಫ್ ಪಿ ವರದಿ ಮಾಡಿದೆ.

ಶಕಗಳ ಹಿಂದೆ ಶ್ರೀಲಂಕಾದ ನಾಗರಿಕರ ಯುದ್ಧ, ತಮಿಳ್ ಟೈಗರ್ಸ್ ಅನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಅಂದು ಶ್ರೀಲಂಕಾದ ಅಧ್ಯಕ್ಷರಾಗಿದ್ದ ಮಹೀಂದಾ ರಾಜಪಕ್ಸೆ, ಕಿರಿಯ ಸಹೋದರ ಗೋಟಬಯ ಅವರನ್ನು ಸೇನೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದರು. ನಂತರ ಲಂಕಾ ಸೇನಾ ಪಡೆ ಎಲ್ ಟಿಟಿ ಇ ಪ್ರಭಾಕರ್ ಹಾಗೂ ಪಡೆಯನ್ನು ಹೊಡೆದುರುಳಿಸುವ ಮೂಲಕ ತಮಿಳ್ ಟೈಗರ್ಸ್ ಅಟ್ಟಹಾಸವನ್ನು ಹೆಡೆಮುರಿಕಟ್ಟಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT