ಸಂಗ್ರಹ ಚಿತ್ರ 
ವಿದೇಶ

ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಆಹ್ವಾನ: ಇಮ್ರಾನ್ ಖಾನ್ ಗೂಗ್ಲಿ ಬಗ್ಗು ಬಡಿದ ಮನಮೋಹನ್ ಸಿಂಗ್

ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಿ ಭಾರತಕ್ಕೆ ಮುಜುಗರ ಉಂಟು ಮಾಡಲು ಯತ್ನಿಸಿದ್ದ ಪಾಕಿಸ್ತಾನಕ್ಕೆ ಮನಮೋಹನ್ ಸಿಂಗ್ ಖಡಕ್ ತಿರಗೇಟು ನೀಡಿದ್ದು, ಪಾಕಿಸ್ತಾನ ಸರ್ಕಾರದ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಪಾಕಿಸ್ತಾನದ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ನವದೆಹಲಿ: ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಿ ಭಾರತಕ್ಕೆ ಮುಜುಗರ ಉಂಟು ಮಾಡಲು ಯತ್ನಿಸಿದ್ದ ಪಾಕಿಸ್ತಾನಕ್ಕೆ ಮನಮೋಹನ್ ಸಿಂಗ್ ಖಡಕ್ ತಿರಗೇಟು ನೀಡಿದ್ದು, ಪಾಕಿಸ್ತಾನ ಸರ್ಕಾರದ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಪಾಕಿಸ್ತಾನದ ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಗಾಗಿ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಆಹ್ವಾನವನ್ನು ನೀಡಲು ಪಾಕಿಸ್ತಾನ ನಿರ್ಧರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಮಹಮೂದ್ ಖುರೇಷಿ ಸೋಮವಾರ ಹೇಳಿದ್ದರು. ಅಲ್ಲದೆ ಈ ಕುರಿತಂತೆ ಮಾಧ್ಯಮಗಳ ಮೂಲಕ ಖುರೇಷಿ ಆಹ್ವಾನ ನೀಡಿದ್ದರು. ಆದರೆ ಈ ಆಹ್ವಾನವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಯವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಮನಮೋಹನ್ ಸಿಂಗ್ ಅವರ ಕಚೇರಿ ಸ್ಪಷ್ಟನೆ ನೀಡಿದ್ದು, ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ತಮಗೆ ಈ ವರೆಗೂ ಅಧಿಕೃತ ಆಹ್ವಾನ ಬಂದಿಲ್ಲ. ಈ ಕುರಿಂತೆ ಪಾಕಿಸ್ತಾನ ಸರ್ಕಾರದಿಂದ ಯಾರೂ ಕೂಡ ತಮ್ಮನ್ನು ಸಂಪರ್ಕಿಸಿಲ್ಲ. ಅಲ್ಲದೆ ಈ ಕುರಿತಂತೆ ಮನಮೋಹನ್ ಸಿಂಗ್ ಅವರಾಗಲೀ ಅಥವಾ ಅವರ ಕಾರ್ಯಾಲಯದೊಂದಿಗೆ ಯಾರೂ ಮೌಖಿಕವಾಗಿಯೂ ಮಾತನಾಡಿಲ್ಲ. ಒಂದು ವೇಳೆ ಅಂತಹ ಮೌಖಿಕ ಆಹ್ವಾನ ಬಂದರೂ, ಈ ಕುರಿತಂತೆ ಶಿಷ್ಟಾಚಾರದಂತೆ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡುತ್ತದೆ. ಅಲ್ಲದೆ ವಿದೇಶಾಂಗ ಇಲಾಖೆಯ ಅನುಮತಿ ದೊರೆತ ಬಳಿಕವಷ್ಚೇ ಈ ಕುರಿತು ನಿರ್ಣಯ ಕೈಗೊಳ್ಳಲಾಗುತ್ತದೆ ಮನಮೋಹನ್ ಸಿಂಗ್ ಅವರ ಕಾರ್ಯಾಲಯ ಸ್ಪಷ್ಟಪಡಿಸಿದೆ.

ಇನ್ನು ಈ ಹಿಂದೆ ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅವರು ಅಧಿಕಾರ ಸ್ವೀಕರಿಸುವಾಗ ನವಜೋತ್ ಸಿಂಗ್ ಸಿಧು ಅವರನ್ನು ಆಹ್ವಾನಿಸಿತ್ತು. ಸಿಧು ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ತೆರಳಿದ್ದರಾದರೂ ಬಳಿಕ ಭಾರತದಲ್ಲಿ ತೀವ್ರ ವಿರೋಧ ಎದುರಿಸಿದ್ದರು. ಆದರೆ ಇದೇ ಪ್ರಮಾದವನ್ನು ಮನಮೋಹನ್ ಸಿಂಗ್ ಮಾಡದೇ ಕಾದು ನೋಡುವ ತಂತ್ರ ಅನುಸರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT