ಎಸ್.ಜೈಶಂಕರ್ 
ವಿದೇಶ

ಮೋದಿ ಸರ್ಕಾರ ಈಶಾನ್ಯ ಭಾರತದಲ್ಲಿ ಅಭಿವೃದ್ಧಿ ಕೆಲಸ ಮಾಡಿದೆ: ಜೈಶಂಕರ್

ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದ ಸನ್ನಿವೇಶಗಳ ನಡುವೆ ಹೋಲಿಕೆ ಮಾಡಲು ಪ್ರಯತ್ನಿಸುತ್ತಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಅವರು, ಈಶಾನ್ಯ ಭಾರತ ಇಂದು "ಬಹುಮಟ್ಟಿಗೆ....

ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದ ಸನ್ನಿವೇಶಗಳ ನಡುವೆ ಹೋಲಿಕೆ ಮಾಡಲು ಪ್ರಯತ್ನಿಸುತ್ತಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಅವರು, ಈಶಾನ್ಯ ಭಾರತ ಇಂದು "ಬಹುಮಟ್ಟಿಗೆ ಶಾಂತಿಯುತವಾಗಿದೆ". ಅದಕ್ಕೆ ಕಾರಣ ಅಭಿವೃದ್ಧಿ. ಹಾಗೆಯೇ ಕಾಶ್ಮೀರ ಕೂಡ ಮುಂದೊಂದು ದಿನ ಶಾಂತಿಯುತವಾಗಲಿದೆ ಎಂದು ಬುಧವಾರ ಹೇಳಿದ್ದಾರೆ.

"ಈಶಾನ್ಯ ಪ್ರದೇಶದಲ್ಲೂ, ಭಾರತವು ತುಂಬಾ ಕಷ್ಟಕರವಾದ ಪರಿಸ್ಥಿತಿಯನ್ನು ನಿಭಾಯಿಸಿದೆ. ಇಂದು ನೀವು ಈಶಾನ್ಯವನ್ನು ನೋಡಿದರೆ ಅದು ಬಹುಮಟ್ಟಿಗೆ ಶಾಂತಿಯುತವಾಗಿದೆ" ಎಂದು ಡಾ. ಜೈಶಂಕರ್ ಅವರು ಅಮೆರಿಕದ ಹೆಸರಾಂತ ಕೇಂದ್ರದ ಸ್ಟ್ರಾಟೆಜಿಕ್ ಮತ್ತು ಇಂಟರ್ನ್ಯಾಷನಲ್ ಸ್ಟಡೀಸ್ ಭಾಷಣದ ನಂತರ ಪ್ರಶ್ನೆಗಳಿಗೆ ಉತ್ತರಿಸಿದರು.

ಈಶಾನ್ಯ ಪ್ರದೇಶದ ಜನರು 'ಲಾಭದಾಯಕ ಜೀವನೋಪಾಯ'ದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರು "ಭದ್ರತಾ ಪಡೆಗಳ ಮೇಲೆ ಕಲ್ಲು ಎಸೆಯುವುದಿಲ್ಲ" ಎಂದು ಅವರು ಹೇಳಿದರು.

"ಅಭಿವೃದ್ಧಿ ವಾಸ್ತವವಾಗಿ ಈಶಾನ್ಯದಲ್ಲಿ ಕೆಲಸ ಮಾಡಿದೆ. ರಾಷ್ಟ್ರೀಯ ಪಕ್ಷಗಳು ಇಂದು ಸಾಕಷ್ಟು ಬೆಂಬಲವನ್ನು ಹೊಂದಿರುವುದರಿಂದ ರಾಜಕೀಯ ಮುಖ್ಯವಾಹಿನಿಯಲ್ಲೂ ಇದು ಬಹಳ ಬಲವಾಗಿ ಕೆಲಸ ಮಾಡಿದೆ" ಎಂದರು.

"ನಾವು (ಭಾರತ ಸರ್ಕಾರ) ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ಮಾಡಲು ಯತ್ನಿಸುತ್ತಿದ್ದೇವೆ. ಇದು ಸಾಧ್ಯವಾದರೆ ಕಳೆದ 70 ವರ್ಷಗಳಲ್ಲಿ ಪಾಕಿಸ್ತಾನಿಗಳು ಯೋಜಿಸಿರುವ ಎಲ್ಲ ತಂತ್ರಗಳು ವ್ಯರ್ಥವಾಗಲಿವೆ ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಜೈಶಂಕರ್‌ ತಿಳಿಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ..!

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ, ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!

ಈ ವರ್ಷ ಇಲ್ಲಿಯವರೆಗೆ 255 ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದ BSF

ಉತ್ತಮ ಜನಪ್ರತಿನಿಧಿಗಳನ್ನು ತಯಾರು ಮಾಡಲು ಒಂದು ವರ್ಷದ ಕೋರ್ಸ್ ಆರಂಭಿಸಲು ಚಿಂತನೆ : ಸಭಾಧ್ಯಕ್ಷ ಯು.ಟಿ. ಖಾದರ್

SCROLL FOR NEXT