ಭದ್ರತಾ ಸಿಬ್ಬಂದಿ 
ವಿದೇಶ

ಕಾಶ್ಮೀರ ಭೇಟಿಗೆ ಅಮೆರಿಕಾ ಸೆನೆಟರ್ ಗೆ ಪ್ರವೇಶ ನಿರಾಕರಣೆ

ಕಾಶ್ಮೀರದಲ್ಲಿನ ವಾಸ್ತವ ಪರಿಸ್ಥಿತಿ ಅರಿಯಲು ತಮ್ಮ ಭೇಟಿಗೆ ಭಾರತೀಯ ಆಡಳಿತದಿಂದ ಪ್ರವೇಶ ನಿರಾಕರಿಸಲಾಗಿದೆ ಎಂದು ಡೆಮಾಕ್ರಟಿಕ್ ಪಕ್ಷದ ಅಮೆರಿಕಾದ ಸೆನೆಟರ್ ಹೇಳಿದ್ದಾರೆ.

ವಾಷಿಂಗ್ಟನ್ : ಕಾಶ್ಮೀರದಲ್ಲಿನ ವಾಸ್ತವ ಪರಿಸ್ಥಿತಿ ಅರಿಯಲು ತಮ್ಮ ಭೇಟಿಗೆ ಭಾರತೀಯ ಆಡಳಿತದಿಂದ ಪ್ರವೇಶ ನಿರಾಕರಿಸಲಾಗಿದೆ ಎಂದು ಡೆಮಾಕ್ರಟಿಕ್ ಪಕ್ಷದ ಅಮೆರಿಕಾದ ಸೆನೆಟರ್ ಹೇಳಿದ್ದಾರೆ.

ಕಣಿವೆ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅರಿಯಲು ಕಾಶ್ಮೀರಕ್ಕೆ ಭೇಟಿ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಇದಕ್ಕೆ ಭಾರತೀಯ ಸರ್ಕಾರದಿಂದ ಅನುಮತಿ ದೊರೆಯಲಿಲ್ಲ, ಕಾಶ್ಮೀರ ಭೇಟಿಗೆ ಇದು ಸೂಕ್ತ ಸಮಯವಲ್ಲ ಎಂದು ಭಾರತ ಸರ್ಕಾರದಿಂದ ತಿಳಿಸಲಾಗಿದೆ ಎಂದು ಅಮೆರಿಕಾದ ಸೆನೆಟರ್ ಕ್ರಿಸ್ ವ್ಯಾನ್ ಹೊಲೆನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 

 ಸಂವಹನ ಜಾಲ ನಿರ್ಬಂಧಿಸಿರುವ ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ನೋಡಬೇಕಾಗಿತ್ತು. ಆದರೆ, ಇದಕ್ಕೆ ಭಾರತ ಸರ್ಕಾರ ಅವಕಾಶ ಮಾಡಿಕೊಡಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಒಂದು ವೇಳೆ ಯಾವುದನ್ನೂ ಬಚ್ಚಿಡುತ್ತಿಲ್ಲ ಎನ್ನುವುದಾದರೆ ಭಯವೇಕೆ? ಕಾಶ್ಮೀರ ಭೇಟಿಗೆ ಅವಕಾಶ ನೀಡಲಿ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. 

ಭಾರತ ಹಾಗೂ ಅಮೆರಿಕಾ ವಿಶ್ವದ ಅತಿದೊಡ್ಡ ಪ್ರಜಾಸತಾತ್ಮಕ ರಾಷ್ಟ್ರಗಳಾಗಿವೆ. ತಮ್ಮ ಮೌಲ್ಯಗಳ ಬಗ್ಗೆ ಹಂಚಿಕೊಂಡಿವೆ. ಈ ಸಂದರ್ಭದಲ್ಲಿ ಪಾರದರ್ಶಕತೆ ಪ್ರಮುಖವಾಗಿರುತ್ತದೆ ಎಂದು ಹೊಲೆನ್ ಹೇಳಿದ್ದಾರೆ. ಹೊಲೆನ್ ಹೇಳಿಕೆಗೆ ಸಂಬಂಧಿಸಿದಂತೆ ಭಾರತದ ಆಡಳಿತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.  

ಇದಕ್ಕೂ ಮುನ್ನ ಕಾಶ್ಮೀರದಲ್ಲಿನ ನಿರ್ಬಂಧಕ್ಕೆ ಸಂಬಂಧಿಸಿದಂತೆ ಅಮೆರಿಕಾ ಸೆನೆಟ್ ಸಮಿತಿಯಲ್ಲಿ ಭಾರತದ ವಿರುದ್ಧ ಮಸೂದೆ ಮಸೂದೆಯೊಂದನ್ನು ಪ್ರಸ್ತಾಪಿಸಲಾಯಿತು. ಈ ಮಸೂದೆ ಪ್ರಸ್ತಾಪಿಸಿದ ಅಮೆರಿಕಾ ಸೆನೆಟರ್ ವ್ಯಾನ್ ಹೊಲೆನ್,  ಭಾರತ- ಅಮೆರಿಕಾ ನಡುವಣ ಒಪ್ಪಂದಗಳು ಮಹತ್ವದಾಗಿವೆ. ಆದರೆ, ಕಾಶ್ಮೀರದಲ್ಲಿನ ಪ್ರಸ್ತುತ ಮಾನವ ಹಕ್ಕುಗಳ ಉಲ್ಲಂಘನೆ ಕಡೆಗೆ ಗಮನ ಹರಿಸಬೇಕಾಗಿದೆ. ಸಂವಹನ ಜಾಲವನ್ನು ಮರುಸ್ಥಾಪಿಸಬೇಕಾಗಿದೆ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT