ಕೆನಡಾದಲ್ಲಿ ಅಪಘಾತ 
ವಿದೇಶ

ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ದುರ್ಮರಣ

ಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 

ಜಲಂಧರ್: ಕೆನಡಾದಲ್ಲಿ ಸಂಭವಿಸಿದ Ykರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 

ಮೃತಪಟ್ಟವರನ್ನು ಪಂಜಾಬ್‌ನ ಗುರುದಾಸ್‌ಪುರ್, ಜಲಂಧರ್ ಜಿಲ್ಲೆಗಳಿಗೆ ಸೇರಿದ ತನ್ವೀರ್ ಸಿಂಗ್, ಗುರ‍್ವಿಂದರ್ ಸಿಂಗ್ ಮತ್ತು ಗುರುದಾಸ್‌ಪುರದ ಹರ್ಪ್ರೀತ್ ಕೌರ್ ಎಂದು ಗುರುತಿಸಲಾಗಿದೆ.

ಉನ್ನತ ವ್ಯಾಸಂಗ ನಡೆಸಲು ಕೆನಡಾಕ್ಕೆ ತೆರಳಿದ್ದ ಈ ಮೂವರು ವಿದ್ಯಾರ್ಥಿಗಳು ಶುಕ್ರವಾರ ಮಧ್ಯರಾತ್ರಿ ಕಾರಿನಲ್ಲಿ ತೆರಳುತ್ತಿದ್ದರು. ಆದರೆ, ಅವರ ಕಾರು ಒಂಟಾರಿಯೊದಲ್ಲಿರುವ ಅಯಾಲ್ ಹೆರಿಟೇಜ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ಸುದ್ದಿ ಕೇಳಿ ವಿದ್ಯಾರ್ಥಿಗಳ ಕುಟುಂಬಗಳಲ್ಲಿ ಶೋಕಮಡುಗಟ್ಟಿದೆ. ತನ್ವೀರ್ ಸಿಂಗ್ ಈ ವರ್ಷದ ಆರಂಭದಲ್ಲಿ ಕೆನಡಾಕ್ಕೆ ಪ್ರಯಾಣ ಬೆಳೆಸಿದ್ದ ಇತರ ಇಬ್ಬರು ಏಪ್ರಿಲ್‌ನಲ್ಲಿ ಅಲ್ಲಿಗೆ ತೆರಳಿದ್ದರು ಕುಟುಂಬ ಸದಸ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT