ರಫೆಲ್ ವಿಮಾನದಲ್ಲಿ ಹಾರಾಟ ನಡೆಸಿದ ರಾಜನಾಥ್ ಸಿಂಗ್ 
ವಿದೇಶ

ಅದ್ಭುತ ಅನುಭವ, ಅತ್ಯಂತ ಆರಾಮದಾಯಕ: ರಫೆಲ್ ವಿಮಾನದಲ್ಲಿ ಹಾರಾಟ ನಡೆಸಿದ ರಾಜನಾಥ್ ಸಿಂಗ್

ಫ್ರಾನ್ಸ್ ನಿರ್ಮಿತ ರಫೆಲ್ ಯುದ್ಧ ವಿಮಾನದಲ್ಲಿನ ಹಾರಾಟ ಅದ್ಭುತ ಅನುಭವ ಮತ್ತು ಅತ್ಯಂತ ಆರಾಮದಾಯಕ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬೋರ್ಡಾಕ್ಸ್​: ಫ್ರಾನ್ಸ್ ನಿರ್ಮಿತ ರಫೆಲ್ ಯುದ್ಧ ವಿಮಾನದಲ್ಲಿನ ಹಾರಾಟ ಅದ್ಭುತ ಅನುಭವ ಮತ್ತು ಅತ್ಯಂತ ಆರಾಮದಾಯಕ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಭಾರತದ ಬಹು ನಿರೀಕ್ಷಿತ ಡಸ್ಸಾಲ್ಟ್ ಏವಿಯೇಷನ್ ಸಂಸ್ಥೆ ನಿರ್ಮಿಕ ರಫೆಲ್ ಫೈಟರ್ ಜೆಟ್ ಯುದ್ಧ ವಿಮಾನದ ಹಸ್ತಾಂತರ ಬಳಿಕ ರಾಜನಾಥ್ ಸಿಂಗ್ ರಫೆಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ರಫೇಲ್‌ ಯುದ್ಧ ವಿಮಾನವನ್ನು ಯುದ್ಧ ವಿಮಾನ ತಯಾರಕ ಸಂಸ್ಥೆ ಡಸಾಲ್ಟ್‌ ಏವಿಯೇಷನ್‌ನ ಮುಖ್ಯ ಪೈಲಟ್‌ ಫಿಲಿಪ್ ಡುಚಾಟೊ ಚಲಾಯಿಸಿದರು. 

ವಿಮಾನ ಹಾರಾಟದ ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ವಿಮಾನದಲ್ಲಿ ಹಾರಾಟ ಬಹಳ ಮುದ ನೀಡಿದ್ದು, ಉತ್ತಮ ವಿಮಾನಲವಾಗಿದೆ. ಇದು ಸ್ಮರಣೀಯ ಕ್ಷಣವಾಗಿದ್ದು, ಈ ರೀತಿ ಸೂಪರ್ ಸಾನಿಕ್ ವೇಗದ ಯುದ್ಧ ವಿಮಾನದಲ್ಲಿ ಹೀಗೆ ಕುಳಿತು ಹಾರಾಟ ನಡೆಸುವ ಅವಕಾಶ ನನ್ನದಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ. ರಫೇಲ್‌ನಲ್ಲಿನ ಹಾರಾಟ ಅದ್ಭುತ ಅನುಭವ. ಅತ್ಯಂತ ಆರಾಮದಾಯಕವೆನಿಸುವ ಹಾರಾಟ. ಅತಿವೇಗವಾಗಿ ಹಾರುವ ವಿಮಾನವೊಂದರಲ್ಲಿ ನಾನೂ ಮುಂದೊಂದು ದಿನ ಹಾರಾಟ ನಡೆಸುತ್ತೇನೆ ಎಂದು ನೆನೆಸಿರಲಿಲ್ಲ  ಎಂದು ಹೇಳಿದರು.

ಅಂತೆಯೇ '2021ರ ವೇಳೆಗೆ 18 ವಿಮಾನಗಳು ಭಾರತಕ್ಕೆ ಲಭ್ಯವಾಗಲಿವೆ. 2022ರ ಏಪ್ರಿಲ್‌–ಮೇ ಹೊತ್ತಿಗೆ ಉಳಿದ ರಫೇಲ್‌ ವಿಮಾನಗಳು ಹಸ್ತಾಂತರಗೊಳ್ಳಲಿವೆ. ಇದು ನಮ್ಮ ರಕ್ಷಣೆಗಾಗಿಯೇ ಹೊರತು, ಯಾರಾದ್ದೋ ವಿರುದ್ಧ ಆಕ್ರಮಣಕ್ಕಲ್ಲ. ಇದು ರಕ್ಷಕ ವಿಮಾನ, ಎಂದೂ ರಾಜನಾಥ್‌ ಸಿಂಗ್‌ ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು ಫ್ರಾನ್ಸ್‌ನ ಬೊರಾಡೆಕ್ಸ್‌ ಸಮೀಪದ ಮೆರಿಗ್ನ್ಯಾಕ್‌ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಫೇಲ್ ಯುದ್ಧವಿಮಾನವನ್ನು ಭಾರತದ ಪರವಾಗಿ ಸ್ವೀಕರಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್