ಸಂಗ್ರಹ ಚಿತ್ರ 
ವಿದೇಶ

'ಫತ್ಫ್' ಮುಜುಗರ ತಪ್ಪಿಸಿಕೊಳ್ಳಲು ಜೆಯುಡಿ, ಲಷ್ಕರ್ ಉಗ್ರರ ಬಂಧಿಸಿದ ಪಾಕಿಸ್ತಾನ!

ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (FATF) ಸಾಮಾನ್ಯಸಭೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಲಷ್ಕರ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಪ್ರಮುಖ ಉಗ್ರರನ್ನು ಬಂಧಿಸಿದೆ.

ಇಸ್ಲಾಮಾಬಾದ್​: ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (FATF) ಸಾಮಾನ್ಯಸಭೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಲಷ್ಕರ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಪ್ರಮುಖ ಉಗ್ರರನ್ನು ಬಂಧಿಸಿದೆ.

ಮೂಲಗಳ ಪ್ರಕಾರ ಉಗ್ರವಾದಕ್ಕೆ ಆರ್ಥಿಕ ನೆರವು ನೀಡಿದ ಆರೋಪದಡಿ ನಿಷೇಧಿತ ಸಂಘಟನೆಗಳ ನಾಲ್ವರು ಉಗ್ರ ನಾಯಕರನ್ನು ಪಾಕಿಸ್ತಾನದ ಲಾ ಎನ್​ಪೋರ್ಸ್​​ಮೆಂಟ್​ ಏಜೆನ್ಸಿಗಳು ಗುರುವಾರ ಬಂಧಿಸಿವೆ.  ನಿಷೇಧಿತ ಎಲ್​ಇಟಿ ಅಥವಾ ಜೆಯುಡಿ ಸಂಘಟನೆಗೆ ಹಣಕಾಸಿನ ನೆರವು ನೀಡಿದ ಪ್ರೊ. ಜಾಫರ್​ ಇಬ್ಕಾಲ್​, ಯಹ್ಯಾ ಅಜೀಜ್​, ಮೊಹಮ್ಮದ್​ ಅಶ್ರಫ್​​ ಹಾಗೂ ಅಬ್ದುಲ್ ಸಲಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಫ್ರಾನ್ಸ್ ರಾಜಧಾನಿ ಪ್ಯಾರಿಸ್ ​ನಲ್ಲಿ ಇದೇ ಅಕ್ಟೋಬರ್​ 12ರಿಂದ 15ರವೆರೆಗೆ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್​ ಫೋರ್ಸ್​ (ಎಫ್​​ಎಟಿಎಫ್​)ನ ಸಭೆ ನಡೆಯುತ್ತಿರುವ ಹಿನ್ನೆಲೆ ಇಂತಹದೊಂದು ಕ್ರಮಕ್ಕೆ ಪಾಕಿಸ್ತಾನ ಮುಂದಾಗಿದೆ ಎನ್ನಲಾಗಿದೆ. ಈ ಹಿಂದೆ ಉಗ್ರವಾದವನ್ನು ಹತ್ತಿಕ್ಕುವ ಸಂಬಂಧ ಫತ್ಫ್​ ವಿಧಿಸಿದ್ದ ನಿಮಯಗಳನ್ನು ಪಾಲಿಸದೆ ಪಾಕಿಸ್ತಾನ ಈ ಉಗ್ರರನ್ನು ಗ್ರೇ ಪಟ್ಟಿ ಸೇರಿಸಿತ್ತು. 2019ರ ಅಕ್ಟೋಬರೊಳಗೆ ಪಾಕ್ ಎಚ್ಚೆತ್ತುಕೊಳ್ಳದಿದ್ದರೆ ಕಪ್ಪುಪಟ್ಟಿಗೆ ಸೇರಿಸುವುದಾಗಿ ಸಹ ಎಚ್ಚರಿಕೆ ನೀಡಿತ್ತು. ಇದರಿಂದ ಆತಂಕಕ್ಕೆ ಒಳಗಾಗಿದ್ದ ಪಾಕ್ ಕೆಲವು ಉಗ್ರ ನಾಯಕರನ್ನು ಬಂಧಿಸಿದೆ ಎನ್ನಲಾಗಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ಉಗ್ರ ನಿಗ್ರಹ ದಳದ ಅಧಿಕಾರಿಗಳು, ಉಗ್ರ ನಿಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕ್ರಿಯಾ ಯೋಜನೆಯಡಿಯಲ್ಲಿನ ನಿರ್ಧಾರಗಳನ್ನು ಪರಿಣಾಮಕಾರಿಯಾಗಿ ಜಾರಿಮಾಡಲಾಗುತ್ತಿದೆ. ಜೆಯುಡಿ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯ್ಯೀದ್ ನನ್ನು ಈಗಾಗಲೇ ಗೃಹ ಬಂಧನದಲ್ಲಿರಿಸಲಾಗಿದೆ. ಈ ಪ್ರಕರಣ ಕೂಡ ವಿಚಾರಣೆಯಲ್ಲಿದೆ. ಇನ್ನೂ ಸಾಕಷ್ಟು ಕ್ರಮಗಳನ್ನು ಪಾಕಿಸ್ತಾನ ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT