ಸಂಗ್ರಹ ಚಿತ್ರ 
ವಿದೇಶ

'ಫತ್ಫ್' ಮುಜುಗರ ತಪ್ಪಿಸಿಕೊಳ್ಳಲು ಜೆಯುಡಿ, ಲಷ್ಕರ್ ಉಗ್ರರ ಬಂಧಿಸಿದ ಪಾಕಿಸ್ತಾನ!

ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (FATF) ಸಾಮಾನ್ಯಸಭೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಲಷ್ಕರ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಪ್ರಮುಖ ಉಗ್ರರನ್ನು ಬಂಧಿಸಿದೆ.

ಇಸ್ಲಾಮಾಬಾದ್​: ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (FATF) ಸಾಮಾನ್ಯಸಭೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಲಷ್ಕರ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಪ್ರಮುಖ ಉಗ್ರರನ್ನು ಬಂಧಿಸಿದೆ.

ಮೂಲಗಳ ಪ್ರಕಾರ ಉಗ್ರವಾದಕ್ಕೆ ಆರ್ಥಿಕ ನೆರವು ನೀಡಿದ ಆರೋಪದಡಿ ನಿಷೇಧಿತ ಸಂಘಟನೆಗಳ ನಾಲ್ವರು ಉಗ್ರ ನಾಯಕರನ್ನು ಪಾಕಿಸ್ತಾನದ ಲಾ ಎನ್​ಪೋರ್ಸ್​​ಮೆಂಟ್​ ಏಜೆನ್ಸಿಗಳು ಗುರುವಾರ ಬಂಧಿಸಿವೆ.  ನಿಷೇಧಿತ ಎಲ್​ಇಟಿ ಅಥವಾ ಜೆಯುಡಿ ಸಂಘಟನೆಗೆ ಹಣಕಾಸಿನ ನೆರವು ನೀಡಿದ ಪ್ರೊ. ಜಾಫರ್​ ಇಬ್ಕಾಲ್​, ಯಹ್ಯಾ ಅಜೀಜ್​, ಮೊಹಮ್ಮದ್​ ಅಶ್ರಫ್​​ ಹಾಗೂ ಅಬ್ದುಲ್ ಸಲಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಫ್ರಾನ್ಸ್ ರಾಜಧಾನಿ ಪ್ಯಾರಿಸ್ ​ನಲ್ಲಿ ಇದೇ ಅಕ್ಟೋಬರ್​ 12ರಿಂದ 15ರವೆರೆಗೆ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್​ ಫೋರ್ಸ್​ (ಎಫ್​​ಎಟಿಎಫ್​)ನ ಸಭೆ ನಡೆಯುತ್ತಿರುವ ಹಿನ್ನೆಲೆ ಇಂತಹದೊಂದು ಕ್ರಮಕ್ಕೆ ಪಾಕಿಸ್ತಾನ ಮುಂದಾಗಿದೆ ಎನ್ನಲಾಗಿದೆ. ಈ ಹಿಂದೆ ಉಗ್ರವಾದವನ್ನು ಹತ್ತಿಕ್ಕುವ ಸಂಬಂಧ ಫತ್ಫ್​ ವಿಧಿಸಿದ್ದ ನಿಮಯಗಳನ್ನು ಪಾಲಿಸದೆ ಪಾಕಿಸ್ತಾನ ಈ ಉಗ್ರರನ್ನು ಗ್ರೇ ಪಟ್ಟಿ ಸೇರಿಸಿತ್ತು. 2019ರ ಅಕ್ಟೋಬರೊಳಗೆ ಪಾಕ್ ಎಚ್ಚೆತ್ತುಕೊಳ್ಳದಿದ್ದರೆ ಕಪ್ಪುಪಟ್ಟಿಗೆ ಸೇರಿಸುವುದಾಗಿ ಸಹ ಎಚ್ಚರಿಕೆ ನೀಡಿತ್ತು. ಇದರಿಂದ ಆತಂಕಕ್ಕೆ ಒಳಗಾಗಿದ್ದ ಪಾಕ್ ಕೆಲವು ಉಗ್ರ ನಾಯಕರನ್ನು ಬಂಧಿಸಿದೆ ಎನ್ನಲಾಗಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನದ ಉಗ್ರ ನಿಗ್ರಹ ದಳದ ಅಧಿಕಾರಿಗಳು, ಉಗ್ರ ನಿಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕ್ರಿಯಾ ಯೋಜನೆಯಡಿಯಲ್ಲಿನ ನಿರ್ಧಾರಗಳನ್ನು ಪರಿಣಾಮಕಾರಿಯಾಗಿ ಜಾರಿಮಾಡಲಾಗುತ್ತಿದೆ. ಜೆಯುಡಿ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯ್ಯೀದ್ ನನ್ನು ಈಗಾಗಲೇ ಗೃಹ ಬಂಧನದಲ್ಲಿರಿಸಲಾಗಿದೆ. ಈ ಪ್ರಕರಣ ಕೂಡ ವಿಚಾರಣೆಯಲ್ಲಿದೆ. ಇನ್ನೂ ಸಾಕಷ್ಟು ಕ್ರಮಗಳನ್ನು ಪಾಕಿಸ್ತಾನ ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

SCROLL FOR NEXT