ಕ್ಸಿ-ಮೋದಿ ಮಾತುಕತೆ ಫಲಪ್ರದ: ಚೀನಾ ಸಚಿವ 
ವಿದೇಶ

ಕ್ಸಿ-ಮೋದಿ ಮಾತುಕತೆ ಫಲಪ್ರದ: ಚೀನಾ ಸಚಿವ

ಚೀನಾದ ಅಧ್ಯಕ್ಷ ಕ್ಸಿ ಜಿನ್;ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಅನೌಪಚಾರಿಕ ಶೃಂಗಸಭೆ ಫಲಪ್ರದ ಫಲಿತಾಂಶವನ್ನು ಸಾಧಿಸಿದೆ ಎಂದು ಚೀನಾದ ಉಪ-ವಿದೇಶಾಂಗ ಸಚಿವ ಲುವೋ ಝಹೋಯಿ ಹೇಳಿದ್ದಾರೆ.

ನವದೆಹಲಿ: ಚೀನಾದ ಅಧ್ಯಕ್ಷ ಕ್ಸಿ ಜಿನ್;ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಅನೌಪಚಾರಿಕ ಶೃಂಗಸಭೆ ಫಲಪ್ರದ ಫಲಿತಾಂಶವನ್ನು ಸಾಧಿಸಿದೆ ಎಂದು ಚೀನಾದ ಉಪ-ವಿದೇಶಾಂಗ ಸಚಿವ ಲುವೋ ಝಹೋಯಿ ಹೇಳಿದ್ದಾರೆ.

ದೀರ್ಘ ಸಂಪ್ರದಾಯಗಳನ್ನು ಹೊಂದಿರುವ ಚೀನಾ ಮತ್ತು ಭಾರತ ಎರಡೂ ಪರಸ್ಪರ ಸಹಕಾರ ಹೆಚ್ಚಿಸಲು ಮತ್ತು ವಿವಿಧ ಸಂಸ್ಕೃತಿಗಳು ಮತ್ತು ನಾಗರಿಕತೆಗಳ ವಿನಿಮಯಕ್ಕೆ ಜಂಟಿಯಾಗಿ ಉತ್ತೇಜಿಸಬೇಕು ಎಂದು ಉಭಯ ನಾಯಕರು ಒಪ್ಪಿಕೊಂಡರು ಎಂದು ಅವರು  ತಿಳಿಸಿದರು.

ದಕ್ಷಿಣ ಭಾರತದ ಮಹಾಬಲಿಪುರಂನಲ್ಲಿ ನಡೆದ ಎರಡು ದಿನಗಳ ಅನೌಪಚಾರಿಕ ಸಭೆಯಲ್ಲಿ, ಮೋದಿ ಮತ್ತು ಅಧ್ಯಕ್ಷ ಕ್ಸಿ ಅವರು ಜಾಗತಿಕ ಮತ್ತು ಪ್ರಾದೇಶಿಕ ಪ್ರಾಮುಖ್ಯತೆಯ ದೀರ್ಘಕಾಲೀನ ಮತ್ತು ಕಾರ್ಯತಂತ್ರದ ವಿಷಯಗಳ ಬಗ್ಗೆ ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಉಭಯ ದೇಶಗಳ ಅಭಿವೃದ್ಧಿಯ ಸಹಭಾಗಿತ್ವವನ್ನು ಹೆಚ್ಚಿಸಲು ಎರಡೂ ಕಡೆಯವರು ಒಪ್ಪಿದ್ದಾರೆ ಎಂದು ಲುವೋ ಹೇಳಿದರು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಅಭಿವೃದ್ಧಿಯ ಬಗ್ಗೆ ಹೆಚ್ಚು ಮಾತನಾಡಿದರು, ರಾಜ್ಯ ಆಡಳಿತದ ಅನುಭವದಲ್ಲಿ ಸಂವಹನವನ್ನು ಹೆಚ್ಚಿಸಲು ಮತ್ತು ಅಭಿವೃದ್ಧಿ ಕಾರ್ಯತಂತ್ರಗಳ ಬಲಪಡಿಸಲು ಒಪ್ಪಿಕೊಂಡರು, ಮತ್ತು ದ್ವಿಪಕ್ಷೀಯ ವಿನಿಮಯವನ್ನು ಹೇಗೆ ಗಾಢವಾಗಿಸಬೇಕು ಎಂಬುದರ ಕುರಿತು ಚರ್ಚಿಸಿದರು ಎಂದು ಅವರು ತಿಳಿಸಿದರು.

ಉಭಯ ದೇಶಗಳು ಭಯೋತ್ಪಾದನೆಯನ್ನು ಎಲ್ಲಾ ರೀತಿಯಲ್ಲೂ ಎದುರಿಸಲು ಬದ್ಧವಾಗಿವೆ ಎಂದು ಉಭಯ ನಾಯಕರು ಹೇಳಿದ್ದಾರೆ ಮತ್ತು ಭಯೋತ್ಪಾದನೆ ನಿಗ್ರಹದ ಸಹಕಾರವನ್ನು ಬಲಪಡಿಸಲು ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ ಎಂದು ಲುವೋ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!