ಕ್ಸಿ-ಮೋದಿ ಮಾತುಕತೆ ಫಲಪ್ರದ: ಚೀನಾ ಸಚಿವ 
ವಿದೇಶ

ಕ್ಸಿ-ಮೋದಿ ಮಾತುಕತೆ ಫಲಪ್ರದ: ಚೀನಾ ಸಚಿವ

ಚೀನಾದ ಅಧ್ಯಕ್ಷ ಕ್ಸಿ ಜಿನ್;ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಅನೌಪಚಾರಿಕ ಶೃಂಗಸಭೆ ಫಲಪ್ರದ ಫಲಿತಾಂಶವನ್ನು ಸಾಧಿಸಿದೆ ಎಂದು ಚೀನಾದ ಉಪ-ವಿದೇಶಾಂಗ ಸಚಿವ ಲುವೋ ಝಹೋಯಿ ಹೇಳಿದ್ದಾರೆ.

ನವದೆಹಲಿ: ಚೀನಾದ ಅಧ್ಯಕ್ಷ ಕ್ಸಿ ಜಿನ್;ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಅನೌಪಚಾರಿಕ ಶೃಂಗಸಭೆ ಫಲಪ್ರದ ಫಲಿತಾಂಶವನ್ನು ಸಾಧಿಸಿದೆ ಎಂದು ಚೀನಾದ ಉಪ-ವಿದೇಶಾಂಗ ಸಚಿವ ಲುವೋ ಝಹೋಯಿ ಹೇಳಿದ್ದಾರೆ.

ದೀರ್ಘ ಸಂಪ್ರದಾಯಗಳನ್ನು ಹೊಂದಿರುವ ಚೀನಾ ಮತ್ತು ಭಾರತ ಎರಡೂ ಪರಸ್ಪರ ಸಹಕಾರ ಹೆಚ್ಚಿಸಲು ಮತ್ತು ವಿವಿಧ ಸಂಸ್ಕೃತಿಗಳು ಮತ್ತು ನಾಗರಿಕತೆಗಳ ವಿನಿಮಯಕ್ಕೆ ಜಂಟಿಯಾಗಿ ಉತ್ತೇಜಿಸಬೇಕು ಎಂದು ಉಭಯ ನಾಯಕರು ಒಪ್ಪಿಕೊಂಡರು ಎಂದು ಅವರು  ತಿಳಿಸಿದರು.

ದಕ್ಷಿಣ ಭಾರತದ ಮಹಾಬಲಿಪುರಂನಲ್ಲಿ ನಡೆದ ಎರಡು ದಿನಗಳ ಅನೌಪಚಾರಿಕ ಸಭೆಯಲ್ಲಿ, ಮೋದಿ ಮತ್ತು ಅಧ್ಯಕ್ಷ ಕ್ಸಿ ಅವರು ಜಾಗತಿಕ ಮತ್ತು ಪ್ರಾದೇಶಿಕ ಪ್ರಾಮುಖ್ಯತೆಯ ದೀರ್ಘಕಾಲೀನ ಮತ್ತು ಕಾರ್ಯತಂತ್ರದ ವಿಷಯಗಳ ಬಗ್ಗೆ ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಉಭಯ ದೇಶಗಳ ಅಭಿವೃದ್ಧಿಯ ಸಹಭಾಗಿತ್ವವನ್ನು ಹೆಚ್ಚಿಸಲು ಎರಡೂ ಕಡೆಯವರು ಒಪ್ಪಿದ್ದಾರೆ ಎಂದು ಲುವೋ ಹೇಳಿದರು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಅಭಿವೃದ್ಧಿಯ ಬಗ್ಗೆ ಹೆಚ್ಚು ಮಾತನಾಡಿದರು, ರಾಜ್ಯ ಆಡಳಿತದ ಅನುಭವದಲ್ಲಿ ಸಂವಹನವನ್ನು ಹೆಚ್ಚಿಸಲು ಮತ್ತು ಅಭಿವೃದ್ಧಿ ಕಾರ್ಯತಂತ್ರಗಳ ಬಲಪಡಿಸಲು ಒಪ್ಪಿಕೊಂಡರು, ಮತ್ತು ದ್ವಿಪಕ್ಷೀಯ ವಿನಿಮಯವನ್ನು ಹೇಗೆ ಗಾಢವಾಗಿಸಬೇಕು ಎಂಬುದರ ಕುರಿತು ಚರ್ಚಿಸಿದರು ಎಂದು ಅವರು ತಿಳಿಸಿದರು.

ಉಭಯ ದೇಶಗಳು ಭಯೋತ್ಪಾದನೆಯನ್ನು ಎಲ್ಲಾ ರೀತಿಯಲ್ಲೂ ಎದುರಿಸಲು ಬದ್ಧವಾಗಿವೆ ಎಂದು ಉಭಯ ನಾಯಕರು ಹೇಳಿದ್ದಾರೆ ಮತ್ತು ಭಯೋತ್ಪಾದನೆ ನಿಗ್ರಹದ ಸಹಕಾರವನ್ನು ಬಲಪಡಿಸಲು ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ ಎಂದು ಲುವೋ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT