ಕ್ರಿಸ್ಟಲಿನಾ ಜಾರ್ಜೀವಾ 
ವಿದೇಶ

ಭಾರತ  ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ: ಆದರೆ, ಸಮಸ್ಯೆಗಳನ್ನು ಬಗೆಹರಿಸಬೇಕು-ಐಎಂಎಫ್  ಎಂಡಿ

ಭಾರತ ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ ಆದರೆ, ಧೀರ್ಘಕಾಲಿನ ಆರ್ಥಿಕ ಬೆಳವಣಿಗೆ ಸೇರಿದಂತೆ  ಮತ್ತಿತರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.

ವಾಷಿಂಗ್ಟನ್ : ಭಾರತ ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ ಆದರೆ, ಧೀರ್ಘಕಾಲಿನ ಆರ್ಥಿಕ ಬೆಳವಣಿಗೆ ಸೇರಿದಂತೆ  ಮತ್ತಿತರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.

ಆರ್ಥಿಕತೆಯ ಮೂಲಭೂತ ವಿಷಯಗಳಲ್ಲಿ ಭಾರತ ಕೆಲಸ ಮಾಡಿದೆ. ಆದರೆ, ಹಣಕಾಸು ಕ್ಷೇತ್ರದಲ್ಲಿ ಸಮಸ್ಯೆಗಳಿವೆ ವಿಶೇಷವಾಗಿ  ಬ್ಯಾಂಕೇತರ ಸಂಸ್ಥೆಗಳಲ್ಲಿ ಇದು ಹೆಚ್ಚಾಗಿದೆ. ಬ್ಯಾಂಕುಗಳನ್ನು ಕ್ರೊಢೀಕರಿಸಲು ಈಗ ಕ್ರಮ ಕೈಗೊಳ್ಳಬೇಕಾಗಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಅವರು ಸಹಾಯ ಮಾಡಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಮ್ಯಾನೇಜಿಂಗ್ ಡೈರೆಕ್ಟರ್ ಕ್ರಿಸ್ಟಲಿನಾ ಜಾರ್ಜೀವಾ  ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಆರ್ಥಿಕ ಬೆಳವಣಿಗೆ ಧೀರ್ಘಕಾಲೀನ ಕ್ರಮ ಕೈಗೊಳ್ಳಬೇಕಾಗಿದೆ. ಮಾನವ ಬಂಡವಾಳ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಮಹಿಳಾ ಕಾರ್ಮಿಕ ಪಡೆಯನ್ನು ಇದರೊಂದಿಗೆ ಮುಂದುವರೆಸಬೇಕಾಗಿದೆ. ಭಾರತದಲ್ಲಿ ಪ್ರತಿಭಾವಂತ ಮಹಿಳೆಯರಿದ್ದಾರೆ ಆದರೆ, ಅವರು ಮನೆಯಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ಸದೃಢ ಆರ್ಥಿಕ ಬೆಳವಣಿಗೆ ಅಂದುಕೊಂಡಿದ್ದ ಭಾರತದ ಆರ್ಥಿಕತೆ  ಈ ಬಾರಿ ಶೇ. 6 ಕ್ಕೆ ಕುಸಿಯುವ ಸಾಧ್ಯತೆ ಇದೆ. ಭಾರತ ರಚನಾತ್ಮಕ ಸುಧಾರಣಾ ಕ್ರಮಗಳಿಗೆ ಆದ್ಯತೆ ನೀಡಬೇಕಾಗಿದೆ. ಇಂತಹ ಸುಧಾರಣಾ ಕ್ರಮಗಳನ್ನು ಮುಂದುವರೆಸಲಿದೆ ಎಂಬ ನಿರೀಕ್ಷೆ ಹೊಂದಿರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT