ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಖಂಡಿಸಲು ಭಾರತೀಯ ರಾಯಭಾರಿಗೆ ಪಾಕಿಸ್ತಾನದಿಂದ ಸಮನ್ಸ್ 
ವಿದೇಶ

ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಖಂಡಿಸಲು ಭಾರತೀಯ ರಾಯಭಾರಿಗೆ ಪಾಕಿಸ್ತಾನದಿಂದ ಸಮನ್ಸ್

ಪಾಕಿಸ್ತಾನದ ವಿದೇಶಾಂಗ ಕಚೇರಿ ಶುಕ್ರವಾರ ಭಾರತೀಯ ರಾಯಭಾರಿ ಕಚೇರಿಯ ಉಪ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಅವರನ್ನು ಕರೆದು ಗಡಿ ನಿಯಂತ್ರಣದ ರೇಖೆಯಲ್ಲಿ ಭಾರತೀಯ ಸೇನೆ 'ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ' ಮಾಡುತ್ತಿದೆ ಎಂದು ಖಂಡಿಸಿದೆ.

ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಕಚೇರಿ ಶುಕ್ರವಾರ ಭಾರತೀಯ ರಾಯಭಾರಿ ಕಚೇರಿಯ ಉಪ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಅವರನ್ನು ಕರೆದು ಗಡಿ ನಿಯಂತ್ರಣದ ರೇಖೆಯಲ್ಲಿ ಭಾರತೀಯ ಸೇನೆ 'ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ' ಮಾಡುತ್ತಿದೆ ಎಂದು ಖಂಡಿಸಿದೆ.

ಭಾರತೀಯ ಸೇನೆ ಗುರುವಾರ ನಡೆಸಿದ ನಿರ್ದಾಕ್ಷಿಣ್ಯ ಮತ್ತು ಅಪ್ರಚೋದಿತ ಗುಂಡಿನ ದಾಳಿಯಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದು, ನಾಲ್ಕು ವರ್ಷದ ಮಗುವಿಗೆ ಗಾಯವಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ. 
ಭಾರತದ ಕದನ ವಿರಾಮ ಉಲ್ಲಂಘನೆಯು ಪ್ರಾದೇಶಿಕ ಶಾಂತಿ ಮತ್ತು ಭದ್ರತೆಗೆ ಅಪಾಯವಾಗಿದೆ. ಅಲ್ಲದೆ, ಇದು ಕಾರ್ಯತಂತ್ರದ ತಪ್ಪು ಲೆಕ್ಕಾಚಾರಕ್ಕೆ ಕಾರಣವಾಗಬಹುದು ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ತಿಳಿಸಿದೆ. 2003 ರ ಒಪ್ಪಂದವನ್ನು ಗೌರವಿಸಬೇಕು. ಕದನ ವಿರಾಮ ಉಲ್ಲಂಘನೆಯ ಇತರ ಘಟನೆಗಳ ಬಗ್ಗೆ ತನಿಖೆ ನಡೆಸಬೇಕು. ಒಪ್ಪಂದವನ್ನು ಗೌರವಿಸುವಂತೆ ಭಾರತೀಯ ಪಡೆಗಳಿಗೆ ಸೂಚಿಸಬೇಕು ಎಂದು ಪಾಕಿಸ್ತಾನ ಅಧಿಕಾರಿಗಳು ಅಹ್ಲುವಾಲಿಯಾ ಅವರೊಂದಿಗಿನ ಸಭೆಯಲ್ಲಿ ಒತ್ತಾಯಿಸಿದ್ದಾರೆ.

ಈ ವಾರದ ಆರಂಭದಲ್ಲಿ ಪಾಕಿಸ್ತಾನದ ವಸತಿ ವಸಾಹತುಗಳ ಮೇಲೆ ಭಾರತೀಯ ಪಡೆಗಳು ಗುಂಡು ಹಾರಿಸಿದ ನಂತರ ಉಂಟಾದ ಘರ್ಷಣೆಯಲ್ಲಿ ಸೈನಿಕ ಸೇರಿದಂತೆ ನಾಲ್ವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪಾಕ್‍ ಸೇನೆಯ ವಕ್ತಾರರು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT