ಕುಲಭೂಷಣ್ ಜಾಧವ್‌ 
ವಿದೇಶ

ಆರೋಪ ಒಪ್ಪಿಕೊಳ್ಳುವಂತೆ ಕುಲಭೂಷಣ್ ಜಾಧವ್‌ಗೆ ಪಾಕ್‌ನಿಂದ ಒತ್ತಡ: ಭೇಟಿ ಬಳಿಕ ಭಾರತ ಆಕ್ರೋಶ

ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಕುಲಭೂಷಣ್ ಜಾದವ್ ಮೇಲೆ ತೀವ್ರ ಒತ್ತಡ ಹೇರುತ್ತಿದೆ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ: ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಕುಲಭೂಷಣ್ ಜಾದವ್ ಮೇಲೆ ತೀವ್ರ ಒತ್ತಡ ಹೇರುತ್ತಿದೆ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ.

ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ನಿವೃತ್ತ ನೌಕಾ ಅಧಿಕಾರಿ ಕುಲಭೂಷಣ್​ ಜಾಧವ್‌ ರನ್ನು ಭಾರತೀಯ ರಾಯಭಾರಿ ಗೌರವ್ ಅಹ್ಲುವಾಲಿಯಾ ನಿನ್ನೆ ಭೇಟಿ ಮಾಡಿದ್ದರು. ಭೇಟಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಲಭೂಷಣ್ ಜಾದವ್ ಮೇಲೆ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿದೆ. ಅಲ್ಲದೆ ಅವರು ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ತೀವ್ರ ಒತ್ತಡ ಹೇರುತ್ತಿದೆ. ಈ ಹಿಂದೆ ಕುಲಭೂಷಣ್ ಜಾದವ್ ನೀಡಿದ್ದ ಹೇಳಿಕೆ ಕೂಡ ಪಾಕಿಸ್ತಾನದ ನಿರ್ದೇಶನದಂತೆ ಬಂದ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.

'ಕುಲಭೂಷಣ್ ಜಾಧವ್‌ ಗೆ ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಒತ್ತಡ ಹೇರಿದೆ. ಜಾಧವ್‌ ರಿಂದ ಪಾಕಿಸ್ತಾನ ಗಿಳಿಪಾಠ ಹೇಳಿಸಿದ್ದು, ಇದರಿಂದಾಗಿ ಅವರು ಬಹಳ ಒತ್ತಡದಲ್ಲಿ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪಾಕಿಸ್ತಾನ ಜಾಧವ್ ಭೇಟಿಗೆ ಅವಕಾಶ ನೀಡಿತ್ತು. ಈ ವೇಳೆ ಪಾಕಿಸ್ತಾನ ಇಲ್ಲ ಸಲ್ಲದ ಆರೋಪಗಳನ್ನು ಗಿಳಿ ಪಾಠದಂತೆ ಒಪ್ಪಿಸಲು ಜಾಧವ್‌ ಮೇಲೆ ತೀವ್ರ ಒತ್ತಡವನ್ನು ಹೇರಿದೆ. ನಾವು ಸಮಗ್ರ ವರದಿಗಾಗಿ ಕಾಯುತ್ತಿದ್ದೇವೆ ಅಂತಾ ವಿದೇಶಾಂಗ ಇಲಾಖೆ ತಿಳಿಸಿದೆ. ಅಲ್ಲದೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಾಧವ್ ತಾಯಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ.

ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಕುಲಭೂಷಣ್ ಜಾಧವ್‌ ರನ್ನು ಪಾಕಿಸ್ತಾನ ಬಂಧಿಸಿತ್ತು. ಅಲ್ಲದೇ ಅಲ್ಲಿನ ಮಿಲಿಟರಿ ನ್ಯಾಯಾಲಯ ಅವರಿಗೆ ಮರಣ ದಂಡನೆ ಶಿಕ್ಷೆ ಕೂಡ ವಿಧಿಸಿತ್ತು. ಬಳಿಕ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿ  ಮರಣದಂಡನೆಗೆ ತಡೆಯಾಜ್ಞೆ ನೀಡುವಂತೆ ಮಾಡಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT