ಸಂಗ್ರಹ ಚಿತ್ರ 
ವಿದೇಶ

ಮೊದಲು ಅಣ್ವಸ್ತ್ರ ಬಳಕೆ ಮಾಡಲ್ಲ ಎಂಬ ನಿಯಮವೇನೂ ಇಲ್ಲ: ಪಾಕ್ ಸೇನೆಯ ಉದ್ಧಟತನ

ಪಾಕಿಸ್ತಾನ ಮೊದಲು ಅಣ್ವಸ್ತ್ರ ಬಳಕೆ ಮಾಡುವುದಿಲ್ಲ ಎಂಬ ನಿಯಮವೇನೂ ಇಲ್ಲ. ಎದುರಾಳಿಗಳ ದಾಳಿ ಸಾಧ್ಯತೆ ಅರಿಯುತ್ತಲೇ ನಾವೇ ಮೊದಲು ಅಣ್ವಸ್ತ್ರಗಳನ್ನು ಪ್ರಯೋಗ ಮಾಡಬಹುದು ಎಂದು ಪಾಕಿಸ್ತಾನ ಸೇನೆ ಉದ್ಧಟತನದ ಹೇಳಿಕೆ ನೀಡಿದೆ.

ಇಸ್ಲಾಮಾಬಾದ್: ಪಾಕಿಸ್ತಾನ ಮೊದಲು ಅಣ್ವಸ್ತ್ರ ಬಳಕೆ ಮಾಡುವುದಿಲ್ಲ ಎಂಬ ನಿಯಮವೇನೂ ಇಲ್ಲ. ಎದುರಾಳಿಗಳ ದಾಳಿ ಸಾಧ್ಯತೆ ಅರಿಯುತ್ತಲೇ ನಾವೇ ಮೊದಲು ಅಣ್ವಸ್ತ್ರಗಳನ್ನು ಪ್ರಯೋಗ ಮಾಡಬಹುದು ಎಂದು ಪಾಕಿಸ್ತಾನ ಸೇನೆ ಉದ್ಧಟತನದ ಹೇಳಿಕೆ ನೀಡಿದೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪಾಕಿಸ್ತಾನ ಸೇನಾ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್, ಪಾಕಿಸ್ತಾನ ಮೊದಲು ಅಣ್ವಸ್ತ್ರ ಬಳಕೆ ಮಾಡುವುದಿಲ್ಲ ಎಂಬ ನಿಯಮವೇನೂ ಇಲ್ಲ. ಎದುರಾಳಿಗಳ ದಾಳಿ ಸಾಧ್ಯತೆ ಅರಿಯುತ್ತಲೇ ನಾವೇ ಮೊದಲು ಅಣ್ವಸ್ತ್ರಗಳನ್ನು ಪ್ರಯೋಗ ಮಾಡಬಹುದು ಎಂದು ಹೇಳಿದ್ದಾರೆ.

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಣ್ವಸ್ತ್ರ ಮೊದಲು ಬಳಕೆ ಮಾಡುವುದಿಲ್ಲ ಎಂಬ ಭಾರತದ ನಿಯಮವನ್ನು ನಾವು ಮರು ಪರಿಶೀಲಿಸಬೇಕಾಗುತ್ತದೆ ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ನಮಗೆ ಯಾವ ನಿಯಮವೂ ಇಲ್ಲ. ಇದು ಭಾರತಕ್ಕೆ ಬಿಟ್ಟ ವಿಚಾರ. ನಾವು ಅಣ್ವಸ್ತ್ರ ಬಳಕೆ ಮಾಡಬೇಕೆ ಅಥವಾ ಇಲ್ಲವೇ ಎಂಬುದು ಆ ದೇಶ ಕೈಗೊಳ್ಳುವ ನಿರ್ಣಯಗಳ ಮೇಲೆ ಆಧಾರಿತವಾಗಿರುತ್ತದೆ. ದೇಶದ ಅಸ್ತಿತ್ನಕ್ಕೆ ಧಕ್ಕೆಯಾಗುವ ಯಾವುದೇ ಹುಚ್ಚು ಸಾಹಸಕ್ಕೆ ಭಾರತ ಕೈ ಹಾಕಿದರೆ, ನಾವು ಅಣ್ವಸ್ತ್ರಗಳಿಗೆ ಕೈಹಾಕಬೇಕಾಗುತ್ತದೆ ಎಂದು ಗಫೂರ್ ಎಚ್ಚರಿಕೆ ನೀಡಿದ್ದಾರೆ.

ಇನ್ನು ಈ ಹಿಂದೆಯೂ ಕೂಡ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಕೂಡ ಭಾರತದ ವಿರುದ್ಧ ಅಣ್ವಸ್ತ್ಪ ಪ್ರಯೋಗಿಸುವ ಮಾತನಾಡಿದ್ದರು. ಇದರ ಬೆನ್ನಲ್ಲೇ ಪಾಕ್ ಸೇನೆಯ ಈ ಹೇಳಿಕೆ ಅವರ ಯುದ್ಧೋನ್ಮಾದದ ಪ್ರದರ್ಶನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT