ಸಂಗ್ರಹ ಚಿತ್ರ 
ವಿದೇಶ

ಮತ್ತೆ ಪಾಕ್ ಉದ್ಧಟತನ: ರಾಷ್ಟ್ರಪತಿ ಕೋವಿಂದ್ ಗೂ ವಾಯುಗಡಿ ಬಳಕೆ ನಿರಾಕರಣೆ!

ಭಾರತದ ವಿರುದ್ಧ ಕಾಲು ಕೆರೆದು ಜಗಳಕ್ಕೆ ನಿಂತಿರುವ ಪಾಕಿಸ್ತಾನ ಮತ್ತೆ ಉದ್ಧಟತನ ತೋರಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೂ ತನ್ನ ವಾಯುಗಡಿ ಬಳಕೆ ಮಾಡಲು ಅನುಮತಿ ನಿರಾಕರಿಸಿದೆ.

ನವದೆಹಲಿ: ಭಾರತದ ವಿರುದ್ಧ ಕಾಲು ಕೆರೆದು ಜಗಳಕ್ಕೆ ನಿಂತಿರುವ ಪಾಕಿಸ್ತಾನ ಮತ್ತೆ ಉದ್ಧಟತನ ತೋರಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೂ ತನ್ನ ವಾಯುಗಡಿ ಬಳಕೆ ಮಾಡಲು ಅನುಮತಿ ನಿರಾಕರಿಸಿದೆ.

ಕೋವಿಂದ್ ಅವರು ಮೂರು ರಾಷ್ಟ್ರಗಳ ಪ್ರವಾಸಕ್ಕೆ ತೆರಳಲಿದ್ದು, ಐಸ್ ಲೆಂಡ್, ಸ್ವಿಟ್ಜರ್ಲೆಂಡ್ ಮತ್ತು ಸ್ಲೊವೇನಿಯಾದಲ್ಲಿ ಉನ್ನತ ಮಟ್ಟದ ನಾಯಕರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಹೀಗಾಗಿ ಅವರ ವಿಮಾನ ಪ್ರಯಾಣಕ್ಕಾಗಿ ಭಾರತ ಸರ್ಕಾರ ಪಾಕಿಸ್ತಾನದ ವಾಯುಗಡಿ ಬಳಕೆ ಮಾಡಲು ಅನುಮತಿ ಕೇಳಿತ್ತು. ಇದಕ್ಕೆ ಪಾಕಿಸ್ತಾನ ಸರ್ಕಾರ ನಿರಾಕರಿಸಿದ್ದು, ಭಾರತದ ಇತ್ತೀಚಿಗಿನ ನಡೆಯಿಂದಾಗಿ ತಾವು ಕೋವಿಂದ್ ಅವರಿಗೆ ವಾಯುಗಡಿ ಬಳಕೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಖಾರವಾಗಿ ಹೇಳಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅವರು, ಭಾರತದ ಇತ್ತೀಚೆಗಿನ ನಡೆ ಅತ್ಯಂತ ಹೇಯವಾದದ್ದು. ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ ಇಂತಹ ನಡೆ ಸಹಿಸಲಸಾಧ್ಯ. ಹೀಗಾಗಿ ಭಾರತಕ್ಕೆ ನಮ್ಮ ವಾಯುಗಡಿಯನ್ನು ಮುಚ್ಚಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆ ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ನಡೆಸಿದ್ದ ಬಾಲಾಕೋಟ್ ವಾಯುದಾಳಿ ಬೆನ್ನಲ್ಲೇ ಪಾಕಿಸ್ತಾನ ತನ್ನ ವಾಯುಗಡಿಯನ್ನು ನಿರ್ಬಂಧಿಸಿತ್ತು.  ಆ ಬಳಿಕ ಮಾರ್ಚ್ ತಿಂಗಳಲ್ಲಿ ವಾಯುಗಡಿಯನ್ನು ಬಳಕೆಗೆ ನೀಡಿ್ತಾದರೂ, ಭಾರತದ ವಾಣಿಜ್ಯ ವಿಮಾನಗಳನ್ನು ನಿರ್ಬಂಧಿಸಿತ್ತು. ಇದೀಗ ಮತ್ತೆ ವಾಯುಗಡಿಯನ್ನು ಭಾರತಕ್ಕೆ ಸಂಪೂರ್ಣ ನಿಷೇಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT