ವಿಜಯ್ ಠಾಕೂರ್ ಸಿಂಗ್ 
ವಿದೇಶ

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದಿಂದ ಸುಳ್ಳಿನ ಆರೋಪ-ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಪದೇ ಪದೇ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ  ಕಪೋಲ ಕಲ್ಪಿತ  ಸುಳ್ಳಿನ ಆರೋಪ ಮಾಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ. 

ಜಿನಿವಾ: ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಪದೇ ಪದೇ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ  ಕಪೋಲ ಕಲ್ಪಿತ  ಸುಳ್ಳಿನ ಆರೋಪ ಮಾಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ. 

 ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ 42ನೇ ಅಧಿವೇಶವನ್ನುದ್ದೇಶಿಸಿ ಮಾತನಾಡಿದ  ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಜಯ್ ಠಾಕೂರ್ ಸಿಂಗ್, ಕಣಿವೆ ರಾಜ್ಯ  ಜಮ್ಮು- ಕಾಶ್ಮೀರದಲ್ಲಿನ ತಾರತಮ್ಯ ತೊಡೆದುಹಾಕಲು ಸಂವಿಧಾನದ ಕಲಂ 370ನೇ ವಿಧಿಯನ್ನು ರದ್ದುಗೊಳಿಸಿರುವುದು ಸಂಸತ್ತಿನ ನಿರ್ಧಾರವಾಗಿದೆ ಎಂದರು.

ಕಲಂ 370ನೇ ವಿಧಿ ರದ್ದತಿ  ಭಾರತೀಯ ಸಂವಿಧಾನದ ಚೌಕಟ್ಟಿನೊಳಗೆ  ಕೈಗೊಂಡ ನಿರ್ಧಾರವಾಗಿದೆ ಎಂದು ವಿಜಯ್ ಠಾಕೂರ್ ತಿಳಿಸಿದರು. 

ಇದಕ್ಕೂ ಮುನ್ನ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಶಿ, ಮೂಲ   ಸೌಲಭ್ಯಗಳನ್ನೂ ಜನತೆಗೆ ನಿರಾಕರಿಸಲಾಗುತ್ತಿದ್ದು, ಜಮ್ಮು-ಕಾಶ್ಮೀರವನ್ನು ಅತಿ ದೊಡ್ಡ ಜೈಲನ್ನಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT