ಸಂಗ್ರಹ ಚಿತ್ರ 
ವಿದೇಶ

ಬಲದೇವ್ ಕುಮಾರ್ ತಮಗೆ ಬೇಕಾದ ಕಡೆ ಹೋಗಿ ನೆಲೆಸಲಿ: ಪಿಟಿಐ

ಪಾಕಿಸ್ತಾನದಲ್ಲಿ ಹಿಂದೂ, ಸಿಖ್ ಸಮುದಾಯದವರಿಗೆ ರಕ್ಷಣೆ ಇಲ್ಲ ಎಂದು ಹೇಳಿರುವ ಬಲದೇವ್ ಕುಮಾರ್ ಅವರು ತಮಗೆ ಯಾವ ದೇಶ ಸುರಕ್ಷಿತವೋ ಅಲ್ಲಿಗೆ ಹೋಗಿ ನೆಲಸಲು ಸ್ವತಂತ್ರರು ಎಂದು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ ಹೇಳಿದೆ.

ಪಾಕ್ ನಲ್ಲಿ ಮುಸ್ಲಿಮರೇ ಸುರಕ್ಷಿತವಾಗಿಲ್ಲ, ಇನ್ನು ಹಿಂದೂ, ಸಿಖ್ಖರು ಹೇಗೆ ಸುರಕ್ಷಿತವಾಗಿರುತ್ತಾರೆ ಎಂದಿದ್ದ ಬಲದೇವ್ ಕುಮಾರ್

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ, ಸಿಖ್ ಸಮುದಾಯದವರಿಗೆ ರಕ್ಷಣೆ ಇಲ್ಲ ಎಂದು ಹೇಳಿರುವ ಬಲದೇವ್ ಕುಮಾರ್ ಅವರು ತಮಗೆ ಯಾವ ದೇಶ ಸುರಕ್ಷಿತವೋ ಅಲ್ಲಿಗೆ ಹೋಗಿ ನೆಲಸಲು ಸ್ವತಂತ್ರರು ಎಂದು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ ಹೇಳಿದೆ.

ತಮ್ಮದೇ ಪಕ್ಷದ ಸದಸ್ಯರಾಗಿರುವ ಬಲದೇವ್ ಕುಮಾರ್, ಪಾಕ್ ನಲ್ಲಿ ಮುಸ್ಲಿಮರೇ ಸುರಕ್ಷಿತವಾಗಿಲ್ಲ, ಇನ್ನು ಹಿಂದೂ, ಸಿಖ್ಖರು ಹೇಗೆ ಸುರಕ್ಷಿತವಾಗಿರುತ್ತಾರೆ ಎಂದಿದ್ದರು. ಅವರ ಈ ಹೇಳಿಕೆ ಪಾಕಿಸ್ತಾನದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸ್ವತಃ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ.

ಬಲದೇವ್ ಕುಮಾರ್ ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಪತ್ರಿಕಾ ಹೇಳಿಕೆ ನೀಡಿರುವ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ, ಬಲದೇವ್ ಕುಮಾರ್ ಅವರು ತಮಗೆ ಯಾವ ದೇಶ ಸುರಕ್ಷಿತವೋ ಅಲ್ಲಿಗೆ ಹೋಗಿ ನೆಲಸಲು ಸ್ವತಂತ್ರರು ಎಂದು ಹೇಳಿದೆ.

ಇದೇ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಖೈಬರ್ ಪುಕ್ತುಂಕ್ವಾದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಶೌಕತ್ ಅಲಿ ಯೂಸುಫ್ ಝೈ ಅವರು, ಪಾಕಿಸ್ತಾನದಲ್ಲಿ ಬಲದೇವ್ ಕುಮಾರ್ ಅವರಿಗೆ ಅತಂಕವಿದ್ದರೆ ಅವರು ತಮಗೆ ಎಲ್ಲಿ ಸುರಕ್ಷಿತವೋ ಆ ದೇಶಕ್ಕೆ ಹೋಗಿ ನೆಲೆಸಲು ಸ್ವತಂತ್ರರು ಎಂದು ಹೇಳಿದ್ದಾರೆ. ಅಂತೆಯೇ ಬಲದೇವ್ ಕುಮಾರ್ ಅವರಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರ ಸದಸ್ಯತ್ವವನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT