ಸಂಗ್ರಹ ಚಿತ್ರ 
ವಿದೇಶ

ಬಲದೇವ್ ಕುಮಾರ್ ತಮಗೆ ಬೇಕಾದ ಕಡೆ ಹೋಗಿ ನೆಲೆಸಲಿ: ಪಿಟಿಐ

ಪಾಕಿಸ್ತಾನದಲ್ಲಿ ಹಿಂದೂ, ಸಿಖ್ ಸಮುದಾಯದವರಿಗೆ ರಕ್ಷಣೆ ಇಲ್ಲ ಎಂದು ಹೇಳಿರುವ ಬಲದೇವ್ ಕುಮಾರ್ ಅವರು ತಮಗೆ ಯಾವ ದೇಶ ಸುರಕ್ಷಿತವೋ ಅಲ್ಲಿಗೆ ಹೋಗಿ ನೆಲಸಲು ಸ್ವತಂತ್ರರು ಎಂದು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ ಹೇಳಿದೆ.

ಪಾಕ್ ನಲ್ಲಿ ಮುಸ್ಲಿಮರೇ ಸುರಕ್ಷಿತವಾಗಿಲ್ಲ, ಇನ್ನು ಹಿಂದೂ, ಸಿಖ್ಖರು ಹೇಗೆ ಸುರಕ್ಷಿತವಾಗಿರುತ್ತಾರೆ ಎಂದಿದ್ದ ಬಲದೇವ್ ಕುಮಾರ್

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ, ಸಿಖ್ ಸಮುದಾಯದವರಿಗೆ ರಕ್ಷಣೆ ಇಲ್ಲ ಎಂದು ಹೇಳಿರುವ ಬಲದೇವ್ ಕುಮಾರ್ ಅವರು ತಮಗೆ ಯಾವ ದೇಶ ಸುರಕ್ಷಿತವೋ ಅಲ್ಲಿಗೆ ಹೋಗಿ ನೆಲಸಲು ಸ್ವತಂತ್ರರು ಎಂದು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ ಹೇಳಿದೆ.

ತಮ್ಮದೇ ಪಕ್ಷದ ಸದಸ್ಯರಾಗಿರುವ ಬಲದೇವ್ ಕುಮಾರ್, ಪಾಕ್ ನಲ್ಲಿ ಮುಸ್ಲಿಮರೇ ಸುರಕ್ಷಿತವಾಗಿಲ್ಲ, ಇನ್ನು ಹಿಂದೂ, ಸಿಖ್ಖರು ಹೇಗೆ ಸುರಕ್ಷಿತವಾಗಿರುತ್ತಾರೆ ಎಂದಿದ್ದರು. ಅವರ ಈ ಹೇಳಿಕೆ ಪಾಕಿಸ್ತಾನದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸ್ವತಃ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ.

ಬಲದೇವ್ ಕುಮಾರ್ ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಪತ್ರಿಕಾ ಹೇಳಿಕೆ ನೀಡಿರುವ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ, ಬಲದೇವ್ ಕುಮಾರ್ ಅವರು ತಮಗೆ ಯಾವ ದೇಶ ಸುರಕ್ಷಿತವೋ ಅಲ್ಲಿಗೆ ಹೋಗಿ ನೆಲಸಲು ಸ್ವತಂತ್ರರು ಎಂದು ಹೇಳಿದೆ.

ಇದೇ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಖೈಬರ್ ಪುಕ್ತುಂಕ್ವಾದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಶೌಕತ್ ಅಲಿ ಯೂಸುಫ್ ಝೈ ಅವರು, ಪಾಕಿಸ್ತಾನದಲ್ಲಿ ಬಲದೇವ್ ಕುಮಾರ್ ಅವರಿಗೆ ಅತಂಕವಿದ್ದರೆ ಅವರು ತಮಗೆ ಎಲ್ಲಿ ಸುರಕ್ಷಿತವೋ ಆ ದೇಶಕ್ಕೆ ಹೋಗಿ ನೆಲೆಸಲು ಸ್ವತಂತ್ರರು ಎಂದು ಹೇಳಿದ್ದಾರೆ. ಅಂತೆಯೇ ಬಲದೇವ್ ಕುಮಾರ್ ಅವರಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರ ಸದಸ್ಯತ್ವವನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT