ಕಾಶ್ಮೀರದ ಯುವತಿ ಬಗ್ಗೆ ಮಾತನಾಡಲು ಹೋಗಿ ನಗೆಪಾಟಲಿಗೀಡಾದ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲ! 
ವಿದೇಶ

ಕಾಶ್ಮೀರದ ಯುವತಿ ಬಗ್ಗೆ ಮಾತನಾಡಲು ಹೋಗಿ ನಗೆಪಾಟಲಿಗೀಡಾದ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲ! 

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಯೂಸುಫ್ ಝಾಯಿ ಕಾಶ್ಮೀರದ ಮಕ್ಕಳ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಈಗ ಇದೆ ವಿಷಯವಾಗಿ ಟ್ವಿಟರ್ ನ ತಪರಾಕಿಗೆ ಮಲಾಲ ಗುರಿಯಾಗಿದ್ದಾರೆ. 

ಇಸ್ಲಾಮಾಬಾದ್: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಯೂಸುಫ್ ಝಾಯಿ ಕಾಶ್ಮೀರದ ಮಕ್ಕಳ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಈಗ ಇದೆ ವಿಷಯವಾಗಿ ಟ್ವಿಟರ್ ನ ತಪರಾಕಿಗೆ ಮಲಾಲ ಗುರಿಯಾಗಿದ್ದಾರೆ. 

ಆ.12 ರಂದು ಪರೀಕ್ಷೆಗೆ ತೆರಳಲು ಸಾಧ್ಯವಾಗಲಿಲ್ಲ. ನನ್ನ ಭವಿಷ್ಯದ ಬಗ್ಗೆ ಅಭದ್ರತೆ ಕಾಡುತ್ತಿದೆ. ನಾನು ಬರಹಗಾರ್ತಿಯಾಗಿ, ಸ್ವಾವಲಂಬಿ ಕಾಶ್ಮೀರಿ ಮಹಿಳೆಯಾಗಬೇಕೆಂದು ಬಯಸಿದ್ದೆ, ಈಗ ಉದ್ದೇಶರಹಿತ ಮತ್ತು ಖಿನ್ನತೆಯ ಭಾವನೆ ಕಾಡುತ್ತಿದೆ. ಪರಿಸ್ಥಿತಿ ಇದೇ ರೀತಿ ಇದ್ದರೆ ಸ್ವಾವಲಂಬಿ ಮಹಿಳೇಯಾಗುವುದು ಕಷ್ಟ ಎಂದು ಕಾಶ್ಮೀರದ ಯುವತಿಯೊಬ್ಬಳು ಹೇಳಿಕೊಂಡಿದ್ದಾಳೆಂದು ಹೇಳಿದ್ದನ್ನು ಮಲಾಲ ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. 

ತಕ್ಷಣವೇ ಜಾಗೃತಗೊಂಡ ಟ್ವಿಟರ್ ಬಳಕೆದಾರರು, ಆ.12 ರಂದು ಈದ್ ಹಬ್ಬ ಇತ್ತು. ಈ ದಿನದಂದು ಭಾರತದಾದ್ಯಂತ ಶಾಲೆಗಳಿಗೆ ರಜೆ ಇತ್ತು. ಆ ದಿನ ರಜೆ ಇರುವ ಸಾಧ್ಯತೆ ಇಮ್ರಾನ್ ಖಾನ್ ವಿವೇಚನೆಯಿಂದ ಮಾತನಾಡುವ ಸಾಧ್ಯತೆ ಇರುವಷ್ಟೇಯೇ ಎಂದು ಟ್ವೀಟಿಗರು ಮಲಾಲ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ. ಆರ್ಟಿಕಲ್ 370 ರದ್ದುಗೊಳಿಸಿದ್ದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಎಲ್ಲಾ ಶಾಲೆಗಳಿಗೂ ಕಾಶ್ಮೀರದಲ್ಲಿ ರಜೆ ಘೋಷಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT