ಸಂಗ್ರಹ ಚಿತ್ರ 
ವಿದೇಶ

ಯುದ್ಧೋನ್ಮಾದ ಬಿಟ್ಟು, ತಾಳ್ಮೆಯಿಂದ ಭಾರತದೊಂದಿಗೆ ಮಾತುಕತೆ ನಡೆಸಿ: ಮುಸ್ಲಿಂ ರಾಷ್ಟ್ರಗಳಿಂದ ಪಾಕ್'ಗೆ ತಪರಾಕಿ!

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ.

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ.

ಭಾರತದ ವಿರುದ್ಧ ಯುದ್ಧೋನ್ಮಾದ ಪ್ರದರ್ಶಿಸುವ ಬದಲು ತಾಳ್ಮೆಯಿಂದ ವರ್ತಿಸಿ ಎಂದು ಪ್ರಮುಖ ಮುಸ್ಲಿಂ ರಾಷ್ಟ್ರಗಳ ನಾಯಕರು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್'ಗೆ ಸಲಹೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ. 

ಇದರೊಂದಿಗೆ ಕಾಶ್ಮೀರ ವಿಚಾರದಲ್ಲಿ ಮುಸ್ಲಿಂ ರಾಷ್ಟ್ರಗಳ ಬೆಂಬಲ ಪಡೆಯಲು ವಿಫಲವಾದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. 

ಸೆ.3ರಂದು ಸೌದಿ ಅರೇಬಿಯಾದ ವಿದೇಶಾಂಗ ಖಾತೆ ರಾಜ್ಯ ಸಚಿವ ಆದಿಲ್ ಅಲ್ ಜುಬೈಲ್, ಯುಎಇ ವಿದೇಶಾಂಗ ಸಚಿವ ಅಬ್ದುಲ್ಲಾ ಬಿನ್ ಅಲ್ ನಹ್ಯಾನ್ ಪಾಕಿಸ್ತಾನಕ್ಕೆ ಆಗಮಿಸಿದ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಶಾ.ಮೊಹಮ್ಮದ್ ಖುರೇಷಿ, ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾ ಜೊತೆಗೆ ಮಾತುಕತೆ ನಡೆಸಿದ್ದರು. 

ಈ ವೇಳೆ ಭಾರತದೊಂದಿಗೆ ಸಂಘರ್ಷ ನಡೆಸುವುದನ್ನು ಬಿಟ್ಟು ತಾಳ್ಮೆ ಪ್ರದರ್ಶಿಸಬೇಕು. ಸದ್ಯ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭಾರತದ ಜೊತೆ ಹಿಂಬಾಗಿಲ ರಾಜತಾಂತ್ರಿಕ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡೀದ್ದಾರೆಂದು ವರದಿಗಳು ತಿಳಿಸಿವೆ. 

ಅಲ್ಲದೆ, ತಾವು ಕೇಲವ ಸೌದಿ ಮತ್ತು ಯುಎಇ ಪರವಾಗ ಮಾತ್ರ ಇಲ್ಲಿಗೆ ಆಗಮಿಸಿಲ್ಲ, ಬದಲಾಗಿ ಇತರೆ ಮುಸ್ಲಿಂ ದೇಶಗಳ ಪ್ರತಿನಿಧಿಗಳಾಗಿಯೂ ಆಗಮಿಸಿದ್ದು, ಅವುಗಳ ಅಭಿಪ್ರಾಯವೂ ಇದೇ ಆಗಿದೆ ಎಂದು ಉಭಯ ನಾಯಕರು ಪಾಕಿಸ್ತಾನಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆನ್ನಲಾಗಿದೆ. ಹಿಂಬಾಗಿಲ ಮಾತುಕತೆಗೆ ಸೂಕ್ತ ವೇದಿಕೆ ಒದಗಿಸಿಕೊಡಲೂ ತಾವು ಸಿದ್ಧ ಎಂಬ ಸಂದೇಶವನ್ನೂ ಪಾಕಿಸ್ತನಕ್ಕೆ ರವಾಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ