ಡೇವಿಡ್ ಕ್ಯಾಮರೂನ್ - ಮನಮೋಹನ್ ಸಿಂಗ್ 
ವಿದೇಶ

'ಸಾಧು' ಮನಮೋಹನ್ ಸಿಂಗ್ ಸಹ ಪಾಕ್ ಮೇಲೆ ಯುದ್ಧಕ್ಕೆ ಮುಂದಾಗಿದ್ದರು: ಬ್ರಿಟನ್ ಮಾಜಿ ಪ್ರಧಾನಿ ಕ್ಯಾಮರೂನ್

ಬ್ರಿಟಿಷ್ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರು ಗುರುವಾರ ತಮ್ಮ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಸಾಧು ಮನುಷ್ಯ, ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹ ಪಾಕಿಸ್ತಾನದ....

ಲಂಡನ್: ಬ್ರಿಟಿಷ್ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರು ಗುರುವಾರ ತಮ್ಮ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಸಾಧು ಮನುಷ್ಯ, ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹ ಪಾಕಿಸ್ತಾನದ ಮೇಲೆ ಯುದ್ಧ ಮಾಡಲು ಮುಂದಾಗಿದ್ದರು ಎಂದು ಹೇಳಿದ್ದಾರೆ.

'ಫಾರ್ ದಿ ರೆಕಾರ್ಡ್' ಎಂಬ ಆತ್ಮಚರಿತ್ರೆಯಲ್ಲಿ 52 ವರ್ಷದ ಕ್ಯಾಮರೂನ್ ಅವರು ತಮ್ಮ ವೈಯಕ್ತಿಕ ಮತ್ತು ವೃತ್ತಿ ಜೀವನದ, ಅದರಲ್ಲೂ ವಿಶೇಷವಾಗಿ 2010ರಿಂದ 2016ರ ವರೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.

ಪ್ರಧಾನಿಯಾಗಿದ್ದ ವೇಳೆ 2010-2016ರ ಅವಧಿಯಲ್ಲಿ ಕ್ಯಾಮರಾನ್ ಅವರು ಮೂರು ಬಾರಿ ಭಾರತಕ್ಕೆ ಭೇಟಿ ನೀಡಿದ್ದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಅವರು ಒಬ್ಬ ಸಾಧು ಮನುಷ್ಯ. ಆದರೆ ಭಾರತ ಎದುರಿಸುವ ಬೆದರಿಕೆಗಳ ಬಗ್ಗೆ ಅವರು ತುಂಬಾ ಕಠಿಣವಾಗಿದ್ದರು. ಒಂದು ಸಲ ಭಾರತದಲ್ಲಿ ಅವರನ್ನು ಭೇಟಿ ಮಾಡಿದಾಗ, ಮುಂಬೈ ದಾಳಿಯಂತಹ ಮತ್ತೊಂದು ಉಗ್ರ ದಾಳಿ ನಡೆದರೆ, ಭಾರತ, ಪಾಕಿಸ್ತಾನದ ವಿರುದ್ಧ ಸೇನಾ ಕಾರ್ಯಾಚಾರಣೆ ಕೈಗೊಳ್ಳಲಿದೆ ಎಂದು ಹೇಳಿರುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಉಲ್ಲೇಖಿಸಿದ್ದಾರೆ. 

ಭಾರತದ ವಿಚಾರ ಬಂದಾಗ, ನಮಗೆ ಆಧುನಿಕ ಸಹಭಾಗಿತ್ವದ ಅಗತ್ಯವಿದೆ ಎಂದೇ ನಾನು ಪ್ರತಿಪಾದಿಸಿದ್ದೇನೆ. ಇದು ವಸಾಹತುಶಾಹಿ ಕಾಲದ ತಪ್ಪಿತಸ್ಥ ಮನೋಭಾವವನ್ನು ಹೊಂದಿರಬಾರದು. ಆದರೆ ಜಗತ್ತಿನ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಮತ್ತು ಅತಿ ದೊಡ್ಡ ಪ್ರಜಾಪ್ರಭುತ್ವಗಳ ನಡುವಿನ ಎಲ್ಲ ಸಾಧ್ಯತೆಗಳನ್ನು ಜೀವಂತಗೊಳಿಸಬೇಕು' ಎಂದು ಕ್ಯಾಮರೂನ್ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT