ವಿಶ್ವಸಂಸ್ಥೆಯಲ್ಲಿ ವಿಶ್ವನಾಯಕರನ್ನೇ ತರಾಟೆಗೆ ತೆಗೆದುಕೊಂಡ ಹವಾಮಾನ ಕಾರ್ಯಕರ್ತೆ! 
ವಿದೇಶ

ವಿಶ್ವಸಂಸ್ಥೆಯಲ್ಲಿ ವಿಶ್ವನಾಯಕರನ್ನೇ ತರಾಟೆಗೆ ತೆಗೆದುಕೊಂಡ ಹವಾಮಾನ ಕಾರ್ಯಕರ್ತೆ! 

ವಿಶ್ವಸಂಸ್ಥೆ ಹವಾಮಾನ ಶೃಂಗದಲ್ಲಿ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ವಿಶ್ವನಾಯಕರನ್ನೇ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. 

ವಿಶ್ವಸಂಸ್ಥೆ ಹವಾಮಾನ ಶೃಂಗದಲ್ಲಿ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ವಿಶ್ವನಾಯಕರನ್ನೇ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. 

ಜಾಗತಿಕ ತಾಪಮಾನ ನಿಯಂತ್ರಣ, ಹಸಿರುಮನೆ ಅನಿಲ ಹೊರಸೂಸುವಿಕೆ ನಿಯಂತ್ರಣ ಮಾಡಲು ವಿಫಲರಾಗಿರುವ ವಿಶ್ವನಾಯಕರು ನನ್ನ ಪೀಳಿಗೆಗೆ ದ್ರೋಹ ಮಾಡಿದ್ದಾರೆ, ನಿಮಗೆ ಎಷ್ಟು ಧೈರ್ಯ ಎಂದು ಹಿಗ್ಗಾ-ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾಳೆ.

ವಿಶ್ವನಾಯಕರನ್ನು ತರಾಟೆಗೆ ತೆಗೆದುಕೊಂಡು ಸುದ್ದಿಯಾಗಿರುವ ಈ ಯುವತಿ ಸ್ವೀಡನ್ ನವಳಾಗಿದ್ದು, ಹವಾಮಾನ ಬದಲಾವಣೆಗೆ ಸಂಬಂಧಿಸಿದ ಚಳುವಳಿ ಮೂಲಕ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದಳು. 

ಇವೆಲ್ಲವೂ ನಡೆಯುತ್ತಿರುವುದು ತಪ್ಪು, ನಾನು ಇಲ್ಲಿರಬಾರದಿತ್ತು, ಶಾಲೆಗೆ ಹೋಗಬೇಕು, ನೀವು ವಿಶ್ವಾಸಕ್ಕಾಗಿ ಯುವಪೀಳಿಗೆಯವರತ್ತ ನೋಡುತ್ತಿದ್ದೀರಿ, ಖಾಲಿ ಮಾತುಗಳಿಂದ ನನ್ನ ಕನಸುಗಳನ್ನು, ಬಾಲ್ಯವನ್ನು ಕಸಿದುಕೊಂಡಿದ್ದೀರಿ, ನಿಮಗೆಷ್ಟು ಧೈರ್ಯ? ಇಷ್ಟೆಲ್ಲಾ ಆದರೂ ನಾನು ಅದೃಷ್ಟವಂತರ ಪೈಕಿ ಒಬ್ಬಳು, ಆದರೆ ಜನರು ನರಳುತ್ತಿದ್ದಾರೆ, ಸಾಯುತ್ತಿದ್ದಾರೆ. ಇಡೀ ಪರಿಸರ ವ್ಯವಸ್ಥೆ ಹಾಳಾಗುತ್ತಿದೆ. 

ನಾವು ಸಾಮೂಹಿಕ ಅಳಿವಿನತ್ತ ಹೆಜ್ಜೆ ಹಾಕುವುದಕ್ಕೆ ಪ್ರಾರಂಭಿಸಿದ್ದೇವೆ, ಆದರೂ ನೀವೆಲ್ಲಾ ಹಣ, ಬಾಹ್ಯ ಆರ್ಥಿಕ ಬೆಳವಣಿಗೆ ಬಗ್ಗೆ ಕಥೆ ಹೇಳುತ್ತೀರಿ ನಿಮಗೆ ಎಷ್ಟು ಧೈರ್ಯ ಎಂದು ಗ್ರೆಟಾ ಥನ್ಬರ್ಗ್ ಪ್ರಶ್ನಿಸಿದ್ದಾಳೆ 

ಯುವ ಜನತೆಯ ಕೂಗನ್ನು ಹಾಗೂ ತುರ್ತನ್ನು ಅರ್ಥ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳುತ್ತಿದ್ದೀರ, ಆದರೆ ನಿಜವಾಗಿಯೂ ನಿಮಗೆ ಪರಿಸ್ಥಿತಿ ಅರ್ಥವಾಗಿಯೂ ಯಾವುದೇ ಕ್ರಮ ಕೈಗೊಳ್ಳದೇ ಇದ್ದರೆ ನಿಮ್ಮನ್ನು ನಂಬುವುದು ಹೇಗೆ ಎಂದು ಪ್ರಶ್ನಿಸಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT