ನನ್ನ ದೇಶಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ: ಇಮ್ರಾನ್ ಖಾನ್ 
ವಿದೇಶ

ನನ್ನ ದೇಶಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ: ಇಮ್ರಾನ್ ಖಾನ್ 

ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿಶ್ವಸಂಸ್ಥೆ ಸಾಮಾನ್ಯ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಪಾಕಿಸ್ತಾನಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. 

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿಶ್ವಸಂಸ್ಥೆ ಸಾಮಾನ್ಯ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಪಾಕಿಸ್ತಾನಕ್ಕಿಂತ ಹೆಚ್ಚು ಭಾರತದ ಬಗ್ಗೆ ಆತಂಕಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. 

ಪಾಕಿಸ್ತಾನಕ್ಕಿಂತ ಹೆಚ್ಚು ಭಾರತದಲ್ಲಿರುವ ಈಗಿನ ಪರಿಸ್ಥಿತಿಯ ಬಗ್ಗೆ ಆತಂಕಗೊಂಡಿದ್ದೇನೆ,  ಭಾರತ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ, ಪರಿಸ್ಥಿತಿ ಕೈಮೀರುವುದಕ್ಕೂ ಮುನ್ನ ವಿಶ್ವಸಮುದಾಯ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕೆಂದು ಇಮ್ರಾನ್ ಖಾನ್ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಪ್ರಸ್ತಾಪಿಸದೇ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಾಕ್ ಪ್ರಧಾನಿ,  ಕಳೆದ 6 ವರ್ಷಗಳಿಂದ ಭಾರತದಲ್ಲಿನ ಬೆಳವಣಿಗೆಗಳು ಭಯಾನಕವಾಗಿದೆ. ಇದು ನನಗೆ ತಿಳಿದಿರುವ ಮಹಾತ್ಮಾ ಗಾಂಧಿ ಹಾಗೂ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಭಾರತವಲ್ಲ ಎಂದು ಹೇಳಿದ್ದಾರೆ. 

ಭಾರತವನ್ನು ಹಿಂದು ಸರ್ವೋಚ್ಛ ಸಿದ್ಧಾಂತ ಆಕ್ರಮಿಸಿಕೊಂಡಿದೆ. ಸರ್ವೋಚ್ಛವಾಗಿರುವುದಕ್ಕೆ ಮತ್ತೊಬ್ಬರನ್ನು ದ್ವೇಷಿಸಬೇಕಾಗುತ್ತದೆ. ಇದೇ ಸಿದ್ಧಾಂತವೇ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. 

ಈ ಹಿಂದೆ ಚರಿತ್ರೆಯಲ್ಲಿ ಮೂರು ಬಾರಿ ಯಾವ ಸಿದ್ಧಾಂತವನ್ನು ನಿಷೇಧಿಸಲಾಗಿತ್ತೋ ಅದೇ ಸಿದ್ಧಾಂತವೇ ಈಗ ಭಾರತ ದೇಶವನ್ನು ಆಳುತ್ತಿದೆ ಎಂದು ಇಮ್ರಾನ್ ಖಾನ್ ಭಾರತದ ಆಂತರಿಕ ವಿಷಯದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT