ನರೇಂದ್ರ ಮೋದಿ 
ವಿದೇಶ

ನಾವು ವಿಶ್ವದ ಕ್ಷೇಮಕ್ಕಾಗಿ ದುಡಿಯುತ್ತಿದ್ದೇವೆ: ಪ್ರಧಾನಿ ಮೋದಿ

"ನಾನು ಇಲ್ಲಿಗೆ ಬರುತ್ತಿರುವಾಗ, ನಾನು ವಿಶ್ವಸಂಸ್ಥೆಯ ಗೋಡೆಗಳ ಮೇಲೆ ಇನ್ನು ಮುಂದೆ ಏಕಬಳಕೆಯ ಪ್ಲ್ಯಾಸ್ಟಿಕ್ ಬಳಕೆ ಇಲ್ಲ ಎಂದು ಓದಿದೆ.ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತವಾಗಿಸಲು ನಾವು ಭಾರತದಲ್ಲಿ ದೊಡ್ಡ ಅಭಿಯಾನವನ್ನು ನಡೆಸುತ್ತಿದ್ದೇವೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ."

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡುತ್ತಿದ್ದು "ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ನನ್ನ ಸರ್ಕಾರ ಮತ್ತು ನನಗೆ ಮತ ಹಾಕಿದೆ. ನಾವು ಹೆಚ್ಚಿನ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದೆವು ಮತ್ತು ಆ ಜನಾದೇಶದಿಂದಾಗಿ ನಾನು ಇಂದು ಇಲ್ಲಿದ್ದೇನೆ: ಎಂದಿದ್ದಾರೆ.

ಪ್ರಧಾನಿ ಭಾಷಣದ ಕೆಲವು ಪ್ರಮುಖ ಅಂಶಗಳು ಹೀಗಿದೆ- 

"ನಾನು ಇಲ್ಲಿಗೆ ಬರುತ್ತಿರುವಾಗ, ನಾನು ವಿಶ್ವಸಂಸ್ಥೆಯ ಗೋಡೆಗಳ ಮೇಲೆ ಇನ್ನು ಮುಂದೆ ಏಕಬಳಕೆಯ ಪ್ಲ್ಯಾಸ್ಟಿಕ್ ಬಳಕೆ ಇಲ್ಲ ಎಂದು ಓದಿದೆ.ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತವಾಗಿಸಲು ನಾವು ಭಾರತದಲ್ಲಿ ದೊಡ್ಡ ಅಭಿಯಾನವನ್ನು ನಡೆಸುತ್ತಿದ್ದೇವೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ."

"ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ  ವಿಶ್ವದ ಅತಿದೊಡ್ಡ ನೈರ್ಮಲ್ಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ್ದು ಕೇವಲ ಐದು ವರ್ಷಗಳಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಿದ್ದೇವೆ. , ಅದು ಜಗತ್ತಿಗೆ ಸ್ಫೂರ್ತಿ ಸಂದೇಶವನ್ನು ರವಾನಿಸುತ್ತದೆ. ವಿಶ್ವದ ಆರೋಗ್ಯ ಭರವಸೆ ಯೋಜನೆಡಿ  50 ಕೋಟಿ ಜನರನ್ನು ಒಳಗೊಂಡಿದ್ದು  ಅದು ಜಗತ್ತಿಗೆ ಹೊಸ ದಿಕ್ಕನ್ನು ತೋರಿಸುತ್ತದೆ ವಿಶ್ವದ ಅತಿದೊಡ್ಡ ಆರ್ಥಿಕ ಸೇರ್ಪಡೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ್ದು ಅದು ವಿಶ್ವದ ಎಲ್ಲ ಬಡವರಿಗೆ ಭರವಸೆ ಮೂಡಿಸುತ್ತದೆ. ವಿಶ್ವದ ಅತಿದೊಡ್ಡ ಡಿಜಿಟಲ್ ಗುರುತಿನ ಕಾರ್ಯಕ್ರಮವನ್ನು ನಡೆಸುತ್ತಿದ್ದು  ಅವರ ಹಕ್ಕುಗಳನ್ನು ಖಾತ್ರಿಪಡಿಸಿದ್ದಾರೆ. ಇದಲ್ಲದೆ ಈ ಜನವರ್ಗ ಇದುವರೆಗೆ ಸುಮಾರು 20 ಬಿಲಿಯನ್ ರು. ಉಳಿತಾಯ ಂಆಡಿದೆ.ಅದು ಜಗತ್ತಿಗೆ ಹೊಸ ಭರವಸೆಯನ್ನು ನೀಡುತ್ತದೆ

"ನಾವು ಬೃಹತ್ ನೀರಿನ ಸಂರಕ್ಷಣಾ ಅಭಿಯಾನವನ್ನು ನಡೆಸುತ್ತಿದ್ದೇವೆ. 2022 ರಲ್ಲಿ, ಭಾರತವು 75ನೇ ಸ್ವಾತಂತ್ರ ದಿನಾಚರಣೆ ಆಚರಿಸುವ ವೇಳೆ  ನಾವು ಬಡವರಿಗೆ 2 ಕೋಟಿ ಮನೆಗಳನ್ನು ನಿರ್ಮಿಸುತ್ತೇವೆ

"ನಾವು ಇದನ್ನು ಹೇಗೆ ಮಾಡಲು ಸಾಧ್ಯವಾಗುತ್ತದೆ? ಭಾರತ ಎಷ್ಟು ವೇಗವಾಗಿ ಬದಲಾಗುತ್ತಿದೆ? ಭಾರತವು ಸಾವಿರಾರು ವರ್ಷಗಳಷ್ಟು ಹಳೆಯ ನಾಗರಿಕತೆ ಹೊಂದಿದ ರಾಷ್ಟ್ರ. . ನಾವು ಕೆಲಸ ಮಾಡುತ್ತಿರುವುದು ನಮ್ಮ ಜನರ ಕಲ್ಯಾಣಕ್ಕಾಗಿ ಮಾತ್ರವಲ್ಲ, ವಿಶ್ವದ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿಯೇ ನಮ್ಮ ಧ್ಯೇಯವಾಕ್ಯ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್

"ನಾವು ಕೆಲಸ ಮಾಡುತ್ತಿದ್ದೇವೆ. ಇದರ  ಪ್ರಯತ್ನಗಳು ನಮ್ಮದಾಗಬಹುದು ಆದರೆ ಫಲಿತಾಂಶಗಳು ಇಡೀ ಜಗತ್ತಿಗೆ ಸಿಗುತ್ತಿದೆ. ಇತರ ಅಭಿವೃದ್ಧಿಶೀಲ ರಾಷ್ಟ್ರಗಳು ನಮ್ಮಿಂದ ಕಲಿಯುತ್ತಿವೆ.  ಇದು ನನ್ನ ದೇಶದ ಪ್ರಗತಿಗೆ ಹೆಚ್ಚು ಕೆಲಸ ಮಾಡುವ ಸಂಕಲ್ಪವನ್ನು ಬಲಪಡಿಸುತ್ತದೆ"

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT