ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ 
ವಿದೇಶ

ಇಡೀ ಜಗತ್ತು ಬೆಂಬಲಿಸದಿದ್ದರೂ ಪಾಕಿಸ್ತಾನ ಮಾತ್ರ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೆ, ಇದು ಜಿಹಾದ್: ಇಮ್ರಾನ್ ಖಾನ್ 

ಕಾಶ್ಮೀರಿಗಳ ಪರವಾಗಿ ನಿಲ್ಲುವವರು ಜಿಹಾದ್ (ಪವಿತ್ರ ಯುದ್ಧ)ನಲ್ಲಿ ತೊಡಗಿರುವವರು. ಇಡೀ ವಿಶ್ವವೇ ಬೆಂಬಲ ನೀಡದಿದ್ದರೂ ಕೂಡ ಪಾಕಿಸ್ತಾನ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. 

ಇಸ್ಲಾಮಾಬಾದ್: ಕಾಶ್ಮೀರಿಗಳ ಪರವಾಗಿ ನಿಲ್ಲುವವರು ಜಿಹಾದ್ (ಪವಿತ್ರ ಯುದ್ಧ)ನಲ್ಲಿ ತೊಡಗಿರುವವರು. ಇಡೀ ವಿಶ್ವವೇ ಬೆಂಬಲ ನೀಡದಿದ್ದರೂ ಕೂಡ ಪಾಕಿಸ್ತಾನ ಮಾತ್ರ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೆ ಎಂದು ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.


ಪ್ರಧಾನಿಯಾದ ಬಳಿಕ ಮೊನ್ನೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಇಮ್ರಾನ್ ಖಾನ್ ಕಾಶ್ಮೀರ ಸಮಸ್ಯೆ ಬಗ್ಗೆಯೇ ಭಾಷಣದಲ್ಲಿ ಹೆಚ್ಚು ಮಾತನಾಡಿದ್ದರು. ನಿನ್ನೆ ವಿಶ್ವಸಂಸ್ಥೆ ಪ್ರವಾಸದಿಂದ ಇಸ್ಲಾಮಾಬಾದಿಗೆ ಬಂದಿಳಿದ ಅವರು, ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಇಡೀ ವಿಶ್ವ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೊ, ಬಿಡುತ್ತದೊ ಆದರೆ ನಾವು ಮಾತ್ರ ಅವರ ಪರವಾಗಿ ನಿಲ್ಲೋಣ ಎಂದರು.


ಕಾಶ್ಮೀರಿಗಳ ಪರವಾಗಿ ನಿಲ್ಲುವುದು ಜಿಹಾದ್ ಆಗಿದೆ. ಅಲ್ಹಾ ದೇವರಿಗೆ ಖುಷಿಯಾಗಬೇಕು ಹೀಗಾಗಿ ನಾವು ಕಾಶ್ಮೀರ ಜನತೆಯ ಪರವಾಗಿಯೇ ನಿಲ್ಲೋಣ ಎಂದರು. ಇದು ಹೋರಾಟವಾಗಿದ್ದು ಸಮಯ ಸರಿಯಿಲ್ಲದಿರುವ ಈ ಸಂದರ್ಭದಲ್ಲಿ ಆಶಾವಾದ ಕಳೆದುಕೊಳ್ಳಬೇಡಿ. ನಾವು ಅವರ ಜತೆಗಿದ್ದೇವೆ ಎಂದು ಕಾಶ್ಮೀರಿಗಳು ಬಯಸುತ್ತಿದ್ದಾರೆ, ಹೀಗಾಗಿ ನಾವು ನಿರಾಶೆಯಾಗುವುದು ಮತ್ತು ಅವರನ್ನು ನಿರಾಶೆಪಡಿಸುವುದು ಬೇಡ, ನಾವು ಕಾಶ್ಮೀರ ಜನತೆಯ ಪರವಾಗಿದ್ದರೆ ಅವರು ಈ ಹೋರಾಟದಲ್ಲಿ ಖಂಡಿತ ಗೆಲ್ಲುತ್ತಾರೆ ಎಂದರು.


ಕಳೆದ ಶುಕ್ರವಾರ ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಮಾತನಾಡುತ್ತಾ, ಕಾಶ್ಮೀರದ ಮೇಲೆ ವಿಧಿಸಿರುವ ಅಮಾನವೀಯ ಕರ್ಫ್ಯೂವನ್ನು ಭಾರತ ತೆಗೆದುಹಾಕಿ ಎಲ್ಲಾ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಅವರ ಸುಮಾರು 50 ನಿಮಿಷಗಳ ಭಾಷಣದಲ್ಲಿ ಅರ್ಧಕ್ಕಿಂತ ಹೆಚ್ಚು ಹೊತ್ತು ಕಾಶ್ಮೀರ ಸಮಸ್ಯೆ ಬಗ್ಗೆಯೇ ಮಾತನಾಡಿದರು. ವಿಶ್ವದ ಎರಡು ಪರಮಾಣು ಸಜ್ಜಿತ ದೇಶಗಳು ಯುದ್ಧ ಸಾರಿದರೆ ಅದರ ಪರಿಣಾಮ ಭೀಕರವಾಗಬಹುದು ಎಂದು ಕೂಡ ಎಚ್ಚರಿಕೆ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT