ಸಂಗ್ರಹ ಚಿತ್ರ 
ವಿದೇಶ

ಕೊಲಂಬಿಯಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: ಕನಿಷ್ಠ 11 ಸಾವು, ನಾಲ್ವರಿಗೆ ಗಾಯ

ಕೊಲಂಬಿಯಾದ ಕುಡಿನಾಮರ್ಕಾದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಸ್ಫೋಟಿಸಿ ಸಮೀಪದ ಮೂರು ಗಣಿಗಳಿಗೆ ಹಾನಿಯಾಗಿದೆ. ಒಂದು ಗಣಿ ಕುಸಿದಿದ್ದು ಹನ್ನೊಂದು ಜನರು ಸಾವನ್ನಪ್ಪಿದ್ದು ನಾಲ್ವರಿಗೆ ಗಾಯಗಳಾಗಿವೆ.

ಮೆಕ್ಸಿಕೋ: ಕೊಲಂಬಿಯಾದ ಕುಡಿನಾಮರ್ಕಾದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಸ್ಫೋಟಿಸಿ ಸಮೀಪದ ಮೂರು ಗಣಿಗಳಿಗೆ ಹಾನಿಯಾಗಿದೆ. ಒಂದು ಗಣಿ ಕುಸಿದಿದ್ದು ಹನ್ನೊಂದು ಜನರು ಸಾವನ್ನಪ್ಪಿದ್ದು ನಾಲ್ವರಿಗೆ ಗಾಯಗಳಾಗಿವೆ.

ಕೊಲಂಬಿಯಾದ ಬಗೋಟಾ ಸಮೀಪದ ಕುಕುನುಬಾ ಗಣಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು, ಮೃತ ದೇಹಗಳನ್ನು ತಾಂತ್ರಿಕ ತನಿಖಾ ತಂಡದ ಸಿಬ್ಬಂದಿ ಹೊರತೆಗೆದಿದ್ದಾರೆ. ಮೀಥೇನ್ ಅನಿಲ ಮತ್ತು ಕಲ್ಲಿದ್ದಲು ಧೂಳಿನಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ  ವರದಿಯಿಂದ ತಿಳಿದುಬಂದಿದೆ. 

ಕೊಲಂಬಿಯಾದಲ್ಲೂ ಕೊರೋನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇಡೀ ಕೊಲಂಬಿಯಾವನ್ನು ಲಾಕ್ ಡೌನ್ ಮಾಡಲಾಗಿದೆ. ಆದರೆ ಈ ಲಾಕ್ ಡೌನ್ ನಿಂದ ದೇಶದ ಪ್ರಮುಖ ಕ್ಷೇತ್ರಗಳಾದ ಗಣಿಗಾರಿಕೆಯಂತಹ ಕ್ಷೇತ್ರಗಳನ್ನು ಹೊರತುಪಡಿಸಲಾಗಿದೆ. ಹೀಗಾಗಿ ಇಲ್ಲಿ ಗಣಿ ಕಾರ್ಯ ಮುಂದುವರೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Waqf Amendment Act: ಕೆಲವೊಂದು ಅಂಶಗಳಿಗೆ ತಡೆ ನೀಡಿ ಸುಪ್ರೀಂ ಕೋರ್ಟ್ 'ಮಧ್ಯಂತರ ಆದೇಶ' ಪ್ರಕಟ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: PIL ವಜಾಗೊಳಿಸಿದ ಹೈಕೋರ್ಟ್; ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ!

ಭಾರತ vs ಪಾಕ್ ಪಂದ್ಯದ ವೇಳೆ ₹1.5 ಲಕ್ಷ ಕೋಟಿ ಜೂಜಾಟ; ಹ್ಯಾಂಡ್‌ಶೇಕ್ ನಿರಾಕರಣೆ ಒಂದು ಪ್ರಹಸನ; ಸಂಜಯ್ ರಾವುತ್

ಬೆಂಗಳೂರು: ವೇಶ್ಯಾವಾಟಿಕೆಗೆ ತಳ್ಳಲು ಮಹಿಳೆಯರ ಅನೈತಿಕ ಸಾಗಣೆಯಲ್ಲಿ ಗಣನೀಯ ಏರಿಕೆ!

Asia Cup 2025: ಭಾರತ vs ಪಾಕಿಸ್ತಾನ ಪಂದ್ಯ ಮತ್ತೆ ಯಾವಾಗ? ಇಲ್ಲಿದೆ ಲೆಕ್ಕಾಚಾರ...

SCROLL FOR NEXT