ಸಾಂದರ್ಭಿಕ ಚಿತ್ರ 
ವಿದೇಶ

ಮೃಗಾಲಯದಲ್ಲಿದ್ದ ಹುಲಿಗೂ ಕೊರೋನಾ ವೈರಸ್ ಸೋಂಕು, ಇತರೆ 6 ಹುಲಿ, ಸಿಂಹಗಳಿಗೂ ಅನಾರೋಗ್ಯ

ಅಮೆರಿಕದಲ್ಲಿ ಕೊರೋನಾ ವೈರಸ್ ಆರ್ಭಟ ಹೇಗಿದೆಯೆಂದರೆ ಮೃಗಾಲಯದಲ್ಲಿರುವ ಕಾಡು ಪ್ರಾಣಿಗಳಲ್ಲೂ ಸೋಂಕು ದೃಢವಾಗಿದೆ.

ನ್ಯೂಯಾರ್ಕ್: ಅಮೆರಿಕದಲ್ಲಿ ಕೊರೋನಾ ವೈರಸ್ ಆರ್ಭಟ ಹೇಗಿದೆಯೆಂದರೆ ಮೃಗಾಲಯದಲ್ಲಿರುವ ಕಾಡು ಪ್ರಾಣಿಗಳಲ್ಲೂ ಸೋಂಕು ದೃಢವಾಗಿದೆ.

ಹೌದು ನ್ಯೂಯಾರ್ಕ್ ನ ಬ್ರಾಂಕ್ಸ್ ಮೃಗಾಲಯದಲ್ಲಿರುವ 4 ವರ್ಷ ಪ್ರಾಯದ ಒಂದು ಹಿಮಾಲಯನ್ ಹುಲಿಗೆ ಸೋಂಕು ತಗುಲಿದ್ದು, ಇತ್ತೀಚೆಗೆ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಇದು ದೃಢವಾಗಿದೆ. ಅಂತೆಯೇ ಈ ಒಂದು ಹುಲಿ ಮಾತ್ರವಲ್ಲದೇ ಈ ಹುಲಿ ಜೊತೆಗಿದ್ದ ಇತರೆ 6 ಹುಲಿಗಳು  ಹಾಗೂ ಸಿಂಹಗಳೂ ಅನಾರೋಗ್ಯಕ್ಕೆ ತುತ್ತಾಗಿದೆ. ಆ ಮೂಲಕ ಅಮೆರಿಕದಲ್ಲಿ ವೈರಸ್ ಕಾಣಿಸಿಕೊಂಡ ಬಳಿಕ ಮೊದಲ ಬಾರಿಗೆ ಪ್ರಾಣಿಗಳಲ್ಲಿ ವೈರಸ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಅಮೆರಿಕ ಮಾತ್ರವಲ್ಲದೇ ವಿಶ್ವಾದ್ಯಂತ ಕಾಡು ಪ್ರಾಣಿಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಮೊದಲ  ಪ್ರಸಂಗ ಇದಾಗಿದೆ.

ಈ ಬಗ್ಗೆ ಮಾತನಾಡಿರುವ ಅಮೆರಿಕದ ಕೃಷಿ ಇಲಾಖೆ ಅಧಿಕಾರಿಗಳು, ಮಾರ್ಚ್ 27ರಂದು ಹುಲಿ ತೀವ್ರ ಜ್ವರಕ್ಕೆ ತುತ್ತಾಗಿತ್ತು. ಅಲ್ಲದೆ ವೈರಸ್ ಸಂಬಂಧಿತ ಲಕ್ಷಣಗಳೂ ಗೋಚರವಾಗುತ್ತಿತ್ತು. ಇದೇ ಕಾರಣಕ್ಕೆ ಹುಲಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿತ್ತು. ಇದೀಗ ಹುಲಿಯಲ್ಲಿ  ಸೋಂಕು ದೃಢಪಟ್ಟಿದ್ದು, ಇತರೆ ಹುಲಿಗಳಿಗೂ ಈ ಸೋಂಕು ತಗುಲಿರುವ ಶಂಕೆ ಇದೆ. ಹೀಗಾಗಿ ಎಲ್ಲ ಹುಲಿಗಳನ್ನೂ ಪ್ರತ್ಯೇಕವಾಗಿರಿಸಲಾಗಿದ್ದು, ಇತರೆ ಹುಲಿಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗುತ್ತಿದೆ.

ಇನ್ನು ಮೃಗಾಲಯಕ್ಕೆ ಬರುವ ಜನರಿಂದ ಹುಲಿಗಳಿದೆ ಸೋಂಕು ತಗುಲಿರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಧಿಕಾರಿಗಳು ಮಾರ್ಚ್ 16ರಿಂದಲೇ ಮೃಗಾಲಯವನ್ನು ಮುಚ್ಚಲಾಗಿದ್ದು, ಯಾವುದೇ ರೀತಿಯ ಸಾರ್ವಜನಿಕ ಪ್ರವೇಶಕ್ಕೆ ಅನುಮತಿ ನೀಡುತ್ತಿಲ್ಲ. ಹೀಗಾಗಿ ಬಹುಶಃ  ಮೃಗಾಲಯದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡು ಅವರಿಂದ ಹುಲಿಗೂ ಹಬ್ಬಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇನ್ನು ಪ್ರಾಣಿಗಳಿಂದಲೂ ಸೋಂಕು ಪ್ರಸರಣವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮೃಗಾಲಯದ ವೈದ್ಯಾಧಿಕಾರಿ ಡಾ.ಜೇನ್ ರೂನಿ  ಅವರು, ಈ ವರೆಗೂ ಅಮೆರಿಕದಲ್ಲಿ ಪ್ರಾಣಿಗಳಲ್ಲಿ ಅಥವಾ ಪ್ರಾಣಿಗಳಿಂದ ಸೋಂಕು ಹರಡಿರುವ ಪ್ರಕರಣಗಳು ದಾಖಲಾಗಿಲ್ಲ. ನಾವು ಕಂಡಂತೆ ಸೋಂಕು ವ್ಯಕ್ತಿಯಿಂದ ವ್ಯಕ್ತಿಯಿಂದ ಹರಡುತ್ತಿದೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಸಂಶೋಧನೆ ನಡೆಸುತ್ತಿರುವ ಹಾಂಕಾಂಗ್ ವಿಜ್ಞಾನಿಗಳು ಮನೆಯಲ್ಲಿ ಸಾಕುವ ಪ್ರಾಣಿಗಳಾದ ನಾಯಿ ಮತ್ತು ಬೆಕ್ಕುಗಳು ವೈರಸ್ ಅನ್ನು ವ್ಯಕ್ತಿಗಳಿಗೆ ಹರಡುವುದಿಲ್ಲ. ಆದರೆ ಈ ಪ್ರಾಣಿಗಳ ಮಾಲೀಕರು ಪ್ರಾಣಿಗಳೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಾಗ ಅಂದರೆ  ತಬ್ಬಿಕೊಂಡಾಗ, ಮುತ್ತು ನೀಡಿದಾಗ, ಸ್ನಾನ ಮಾಡಿಸುವಾಗ ಅದರ ಜೊಲ್ಲು ಮೈಮೇಲೆ ಬಿದ್ದರೆ ಆಗ ವೈರಸ್ ವ್ಯಕ್ತಿಗೆ ಹರಡುವ ಸಾಧ್ಯತೆ ಗಳಿರುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT