ವಿದೇಶ

ಭಾರತದಲ್ಲಿ 40 ಕೋ ಅಸಂಘಟಿತ ವಲಯ ಕಾರ್ಮಿಕರನ್ನು ಬಡತನಕ್ಕೆ ತಳ್ಳಲಿದೆ ಕೊರೋನಾ ಲಾಕ್ ಡೌನ್

ಭಾರತ ದೇಶದಲ್ಲಿ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಸುಮಾರು 40 ಕೋಟಿ ಕಾರ್ಮಿಕರು ಕೊರೋನಾ ಸೋಂಕಿನ ಆರ್ಥಿಕ ಹೊಡೆತದಿಂದಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಬಡತನಕ್ಕೆ ಇಳಿಯಬಹುದು ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ ಹೇಳಿದೆ.

ಜೆನೆವಾ:ಭಾರತ ದೇಶದಲ್ಲಿ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಸುಮಾರು 40 ಕೋಟಿ ಕಾರ್ಮಿಕರು ಕೊರೋನಾ ಸೋಂಕಿನ ಆರ್ಥಿಕ ಹೊಡೆತದಿಂದಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಬಡತನಕ್ಕೆ ಇಳಿಯಬಹುದು ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ ಹೇಳಿದೆ.

ಸಂಘಟನೆ ಇಂದು ಸಲ್ಲಿಸಿರುವ ವರದಿಯಲ್ಲಿ ಜಾಗತಿಕ ಮಟ್ಟದಲ್ಲಿ ಕೊರೋನಾ ಸೋಂಕಿನಿಂದ 2.7 ಶತಕೋಟಿ ಕಾರ್ಮಿಕರ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದೆ. ಕೋವಿಡ್-19 ಈಗಾಗಲೇ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಕೋಟ್ಯಂತರ ಜನರ ಜೀವನದ ಮೇಲೆ ಪರಿಣಾಮ ಬೀರಿದೆ. ಭಾರತ, ನೈಜೀರಿಯಾ, ಬ್ರೆಜಿಲ್ ದೇಶಗಳಲ್ಲಿ ಲಾಕ್ ಡೌನ್ ನಂತರ ಸಾಕಷ್ಟು ತೊಂದರೆಗೀಡಾಗಿದ್ದು ಬದಲಿ ಪರಿಹಾರಗಳು ತುರ್ತಾಗಿ ಸಿಗಬೇಕಿದೆ ಎಂದು ಹೇಳಿದೆ.

ಭಾರತ ದೇಶದಲ್ಲಿ ಶೇಕಡಾ 90ರಷ್ಟು ಮಂದಿ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಶ್ವದಲ್ಲಿ 400 ಮಿಲಿಯನ್ ಜನರನ್ನು ಈ ಕೊರೋನಾ ಸೋಂಕಿನಿಂದ ಆದ ಲಾಕ್ ಡೌನ್ ಮತ್ತಷ್ಟು ದುಸ್ಥಿತಿಗೆ ತಳ್ಳುತ್ತದೆ. ಕೂಲಿ ಹುಡುಕಿಕೊಂಡು ನಗರ ಪ್ರದೇಶಗಳಿಗೆ ಗುಳೆ ಹೊರಟ ಸಾವಿರಾರು ಮಂದಿ ಮತ್ತೆ ಗ್ರಾಮೀಣ ಪ್ರದೇಶಗಳಿಗೆ ಹೋಗುವ ಸಾಧ್ಯತೆಯಿದೆ ಎಂದು ಕೂಡ ಕಾರ್ಮಿಕ ಸಂಘಟನೆ ಹೇಳಿದೆ.

ಕಡಿಮೆ ಮತ್ತು ಮಧ್ಯಮ ಪ್ರಮಾಣದ ಆದಾಯ ಹೊಂದಿರುವ ದೇಶಗಳ ಜನರು, ಅಸಂಘಟಿತ ವಲಯ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಮತ್ತು ಸಾಮಾಜಿಕ ಭದ್ರತೆಗೆ ಸಂಕಷ್ಟವಾಗಬಹುದು ಎಂದು ಕೂಡ ವರದಿ ತಿಳಿಸಿದೆ. ಸರ್ಕಾರದ ಸರಿಯಾದ ಯೋಜನಾ ಕ್ರಮಗಳಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜನರು ಮತ್ತಷ್ಟು ಬಡತನಕ್ಕೆ ಜಾರುವ ಸಾಧ್ಯತೆಯಿದ್ದು ಜೀವನ ನಡೆಸಲು ಸವಾಲುಗಳು ಎದುರಾಗಬಹುದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT