ಕೊರೋನಾ: 10 ಸಾವಿರ ವೆಂಟಿಲೇಟರ್ ಕೊಟ್ಟರೆ ಪಾಕ್ ಭಾರತದ ಸಹಾಯವನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತೆ! 
ವಿದೇಶ

ಕೊರೋನಾ: '10 ಸಾವಿರ ವೆಂಟಿಲೇಟರ್ ಕೊಟ್ಟರೆ ಪಾಕ್ ಭಾರತದ ಸಹಾಯವನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತೆ' 

ಕೊರೋನಾ ಎದುರಿಸಲು ಭಾರತದ ನೆರೆ ರಾಷ್ಟ್ರಗಳು ಹಲವಾರು ರೀತಿಯಲ್ಲಿ ಭಾರತದ ಸಹಾಯಕ್ಕಾಗಿ ಕೇಳುತ್ತಿವೆ.

ಇಸ್ಲಾಮಾಬಾದ್: ಕೊರೋನಾ ಎದುರಿಸಲು ಭಾರತದ ನೆರೆ ರಾಷ್ಟ್ರಗಳು ಹಲವಾರು ರೀತಿಯಲ್ಲಿ ಭಾರತದ ಸಹಾಯಕ್ಕಾಗಿ ಕೇಳುತ್ತಿವೆ.

ಪಾಕಿಸ್ತಾನದ ವೇಗಿ ಶೋಯೆಬ್ ಅಖ್ತರ್ ಈ ಬಗ್ಗೆ ಮಾತನಾಡಿದ್ದು, ಟಿ.ವಿಗೆ ಮಾತ್ರ ಸೀಮಿತವಾಗಿರುವಂತೆ ಭಾರತ-ಪಾಕಿಸ್ತಾನದ ನಡುವೆ ಏಕದಿನ ಸರಣಿ ನಡೆಸಿ ನಿಧಿ ಸಂಗ್ರಹ ಮಾಡುವಂತೆ ಸಲಹೆ ನೀಡಿದ್ದಾರೆ. 

ಐಸಿಸಿ ಹೊರತಾದ ಕ್ರಿಕೆಟ್ ಸರಣಿಯಲ್ಲಿ ಪಾಕಿಸ್ತಾನ-ಭಾರತ ಮುಖಾಮುಖಿಯಾಗಿ ಹಲವು ವರ್ಷಗಳೇ ಕಳೆದಿದ್ದು, ಈಗ ಸರಣಿ ಏರ್ಪಡಿಸಿದರೆ ಉತ್ತಮ ವೀಕ್ಷಣೆ ಲಭ್ಯವಾಗಲಿದೆ. ಇದರಿಂದಾಗಿ ಕೊರೋನಾ ವೈರಸ್ ಎದುರಿಸುವುದಕ್ಕೆ ಉಭಯ ರಾಷ್ಟ್ರಗಳಿಗೂ ನಿಧಿ ಸಂಗ್ರಹ ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಗಳ ನಡುವೆ ಉತ್ತಮ ಬಾಂಧವ್ಯವೂ ಬೆಸೆಯಲಿದೆ ಎಂದು ಹೇಳಿದ್ದಾರೆ.

ಭಾರತ ಪಾಕಿಸ್ತಾನಕ್ಕೆ 10 ಸಾವಿರ ವೆಂಟಿಲೇಟರ್ ಗಳನ್ನು ಪೂರೈಸಿದರೆ ಅದನ್ನು ಪಾಕಿಸ್ತಾನ ಎಂದಿಗೂ ಮರೆಯುವುದಿಲ್ಲ, ಎಂದಿಗೂ ನೆನಪಿಟ್ಟುಕೊಳ್ಳುತ್ತದೆ, ಆದರೆ ನಮಗೆ ಕ್ರಿಕೆಟ್ ಸರಣಿ ಆಯೋಜಿಸಲಷ್ಟೇ ಹೇಳಲು ಸಾಧ್ಯ ಉಳಿದದ್ದು ಅಧಿಕಾರಿಗಳು ನಿರ್ಧರಿಸಬೇಕೆಂದು ಎಂದು ಅಖ್ತರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT