ಸಿಂಗಾಪುರದ ರಸ್ತೆ 
ವಿದೇಶ

ಕೊರೋನಾ ಲಾಕ್ ಡೌನ್ :ಸಿಂಗಾಪುರ್ ನಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಭಾರತೀಯನ ಮೇಲೆ ದೂರು ದಾಖಲು

ಕೊರೋನಾ ವೈರಸ್ ನಡುವೆ ಸ್ವ ನಿರ್ಬಂಧ ಆದೇಶವನ್ನು ಉಲ್ಲಂಘಿಸಿದ ಭಾರತೀಯನ ವಿರುದ್ಧ ಕೇಸು ದಾಖಲಾಗಿದೆ. ಪ್ರಕರಣ ಕೋರ್ಟ್ ಮೆಟ್ಟಲೇರಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕಾಗಿದೆ.

ಸಿಂಗಾಪುರ: ಕೊರೋನಾ ವೈರಸ್ ನಡುವೆ ಸ್ವ ನಿರ್ಬಂಧ ಆದೇಶವನ್ನು ಉಲ್ಲಂಘಿಸಿದ ಭಾರತೀಯನ ವಿರುದ್ಧ ಕೇಸು ದಾಖಲಾಗಿದೆ. ಪ್ರಕರಣ ಕೋರ್ಟ್ ಮೆಟ್ಟಲೇರಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕಾಗಿದೆ.

ಕಳೆದ ಫೆಬ್ರವರಿ 16ರಿಂದ 25ರವರೆಗೆ ಸ್ವ ನಿರ್ಬಂಧನದಲ್ಲಿ ಭಾರತೀಯ ಮೂಲದ ವ್ಯಕ್ತಿ 35 ವರ್ಷದ ವಾರ್ದಿರೆಡ್ಡಿ ನಾಗೇಶ್ವರ ರೆಡ್ಡಿ ಇರಬೇಕಾಗಿತ್ತು. ಆದರೆ ಅವರು ಫೆಬ್ರವರಿ 24ರಂದು ಮನೆಯಿಂದ ಹೊರಬಂದಿದ್ದರು. ಹೀಗೆ ನಿಯಮ ಉಲ್ಲಂಘಿಸಿದ ಆರೋಪ ಇವರ ಮೇಲಿದ್ದು, ನ್ಯಾಯಾಲಯದ ಮುಂದೆ ಇದೇ ತಿಂಗಳ 23ರಂದು ಹಾಜರಾಗಿ ತಪ್ಪೊಪ್ಪಿಕೊಳ್ಳುವ ಸಾಧ್ಯತೆಯಿದೆ. ನ್ಯಾಯಾಲಯ ಏನು ತೀರ್ಪು ನೀಡಲಿದೆ ಎಂಬುದನ್ನು ನೋಡಬೇಕಾಗಿದೆ.

ಇದೇ ಆರೋಪದ ಮೇಲೆ ಚೀನಾ ಪ್ರಜೆ 49 ವರ್ಷದ ಲಿಯು ಡುಫೆಂಗ್ ಆರೋಪಿಯಾಗಿದ್ದು ಈತನ ವಿಚಾರಣೆ ಮೇ 8ರಂದು ನಡೆಯಲಿದೆ. ಮತ್ತೊಬ್ಬ ಸಿಂಗಾಪುರ್ ಪ್ರಜೆ 32 ವರ್ಷದ ಫೂ ಚಿಂಗ್ ಗೌನ್ ಕೂಡ ಇದೇ ಆರೋಪ ಎದುರಿಸುತ್ತಿದ್ದಾರೆ.

ಸಿಂಗಾಪುರ್ ದಲ್ಲಿ ನಿನ್ನೆ 623 ಹೊಸ ಕೊರೋನಾ ಕೇಸುಗಳು ದಾಖಲಾಗಿದ್ದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5 ಸಾವಿರದ 50ಕ್ಕೇರಿದೆ. ವಿದೇಶಿ ಕೆಲಸಗಾರರಲ್ಲಿ ಕೊರೋನಾ ಹೆಚ್ಚಾಗಿ ಕಂಡುಬರುತ್ತಿದ್ದು, ಅವರಲ್ಲಿ ಭಾರತೀಯರು ಹಲವರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT