ವಿಜಯ್ ಮಲ್ಯ 
ವಿದೇಶ

ಮದ್ಯದ ದೊರೆ ವಿಜಯ ಮಲ್ಯ ಮನವಿ ವಜಾ, ಭಾರತಕ್ಕೆ ಗಡಿಪಾರು ಸನ್ನಿಹಿತ

ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ  ವಂಚನೆ ಮಾಡಿ ನಂತರ  ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರ ಮಾಡಬೇಕೆಂಬ ಮನವಿ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಯು.ಕೆ. ಕೋರ್ಟ್ ವಜಾ ಮಾಡಿದ್ದು, ಯಾವುದೇ ಕ್ಷಣ ಗಡಿಪಾರು ಮಾಡುವ ಭೀತಿ ಎದುರಾಗಿದೆ.

ಲಂಡನ್: ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ  ವಂಚನೆ ಮಾಡಿ ನಂತರ  ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರ ಮಾಡಬೇಕೆಂಬ ಮನವಿ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಯು.ಕೆ. ಕೋರ್ಟ್ ವಜಾ ಮಾಡಿದ್ದು, ಯಾವುದೇ ಕ್ಷಣ ಗಡಿಪಾರು ಮಾಡುವ ಭೀತಿ ಎದುರಾಗಿದೆ.

ಭಾರತಕ್ಕೆ ಹಸ್ತಾಂತರ ಮಾಡುವುದನ್ನು ಪ್ರಶ್ನೆ ಮಾಡಿ 2018ರಲ್ಲಿ ಕೋರ್ಟ್ ನೀಡಿದ್ದ ತೀ ಪಿನ ವಿರುದ್ದ  ವಿಜಯ್ ಮಲ್ಯ ಮೇಲ್ಮನವಿ ಸಲ್ಲಿಸಿದ್ದರು.

ಕಿಂಗ್ ಫಿಷರ್ ಏರ್ ಲೈನ್ಸ್ ಗಾಗಿ ಭಾರತದಲ್ಲಿನ ಹಲವು ಬ್ಯಾಂಕ್ ಗಳಿಂದ 9000 ಕೋಟಿ ರುಪಾಯಿ ಸಾಲ ಮಾಡಿದ್ದು, ಅದರ ಜತೆಗೆ ಅಕ್ರಮ ಹಣಕಾಸು ವರ್ಗಾವಣೆ ಮಾಡಿದ  ವಂಚನೆ ಆರೋಪಕ್ಕೆ ಸಂಬಂಧಪಟ್ಟಂತೆ  ವಿಜಯ್ ಮಲ್ಯ ಭಾರತಕ್ಕೆ ಗಡಿಪಾರು ಮಾಡಬೇಕೆಂದು ಭಾರತ ಮನವಿ ಮಾಡಿತ್ತು.

ಯಾವುದೇ ತಪ್ಪು ಮಾಡಿಲ್ಲ. ನಾನು ಹಣ ವಾಪಸ್ ಮಾಡಲು ಸಿದ್ಧ ಎಂದು  ಆದರೆ  ಬ್ಯಾಂಕ್ ಹಣ ಪಡೆಯಲು ಸಿದ್ಧವಿಲ್ಲ  ಎಂದೂ  ಅವರು ಹೇಳಿಕೊಂಡಿದ್ದರು.

ಭಾರತಕ್ಕೆ ಹಸ್ತಾಂತರ ಮಾಡಬೇಕು ಎಂಬ ಮನವಿಯನ್ನು ಪುರಸ್ಕರಿಸಿ, ಲಂಡನ್ ನಲ್ಲಿ 2017 ರಲ್ಲಿ ಲಂಡನ್ ನಲ್ಲಿ ಮಲ್ಯರನ್ನು ಬಂಧಿಸಲಾಗಿತ್ತು. ನಂತರ ಅವರು  ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗೆ ಬಂದಿದ್ದರು. ಜಾರಿ ನಿರ್ದೇಶನಾಲಯ ಪ್ರಮಾಣ ಪತ್ರ ಸಲ್ಲಿಸಿದ ಮೇಲೆ ಅದೇ ವರ್ಷ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಮಲ್ಯರನ್ನು ಬಂಧಿಸಲಾಗಿತ್ತು.ಈಗ ಭಾರತದ ಮನವಿಗೆ ಕೋರ್ಟ್ ಪುರಸ್ಕಾರ  ನೀಡಿದಂತಾಗಿದ್ದು  ಗಡಿಪಾರು ಹಾದಿ ಸುಗಮ ವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT