ವಿದೇಶ

60 ದಿನಗಳ ಭಾಗಶಃ ವಲಸೆ ನಿರ್ಬಂಧಕ್ಕೆ ಸಹಿ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಕೊರೋನಾ ವೈರಸ್ ಸೋಂಕಿನ ಸಂಕಷ್ಟ ಸಮಯದಲ್ಲಿ ವಿದೇಶಿಯರು ಬಂದು ಸ್ಥಳೀಯ ದೇಶದ ಪ್ರಜೆಗಳಿಗೆ ಉದ್ಯೋಗಕ್ಕೆ ಆಗುವ ತೊಂದರೆಯನ್ನು ತಪ್ಪಿಸಲು ಅಮೆರಿಕಕ್ಕೆ ವಲಸೆ ಬರುವುದಕ್ಕೆ ಭಾಗಶಃ ರದ್ದುಗೊಳಿಸಲಾಗಿದೆ.

ವಾಷಿಂಗ್ಟನ್: ಕೊರೋನಾ ವೈರಸ್ ಸೋಂಕಿನ ಸಂಕಷ್ಟ ಸಮಯದಲ್ಲಿ ವಿದೇಶಿಯರು ಬಂದು ಸ್ಥಳೀಯ ದೇಶದ ಪ್ರಜೆಗಳಿಗೆ ಉದ್ಯೋಗಕ್ಕೆ ಆಗುವ ತೊಂದರೆಯನ್ನು ತಪ್ಪಿಸಲು ಅಮೆರಿಕಕ್ಕೆ ವಲಸೆ ಬರುವುದಕ್ಕೆ ಭಾಗಶಃ ರದ್ದುಗೊಳಿಸಲಾಗಿದೆ. ಈ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆಯಷ್ಟೇ ತಾತ್ಕಾಲಿಕ ವಲಸೆ ನಿರ್ಬಂಧಕ್ಕೆ ಸಹಿ ಹಾಕಿದ್ದಾರೆ.

ನಮ್ಮ ದೇಶದ ಪ್ರಜೆಗಳನ್ನು ರಕ್ಷಿಸಲು ಅಮೆರಿಕಕ್ಕೆ ಉದ್ಯೋಗಕ್ಕೆಂದು ವಲಸೆ ಬರುವವರಿಗೆ ತಾತ್ಕಾಲಿಕ ನಿರ್ಬಂಧ ಹೇರುವ ಕಾರ್ಯಕಾರಿ ಆದೇಶಕ್ಕೆ ನಾನು ಈಗಷ್ಟೇ ಸಹಿ ಹಾಕಿದ್ದೇನೆ. ಇದರಿಂದ ಇನ್ನು ಮುಂದೆ ಯಾವುದೇ ಹಿನ್ನೆಲೆಯುಳ್ಳ ನಿರುದ್ಯೋಗಿ ಅಮೆರಿಕನ್ನರಿಗೆ ಉದ್ಯೋಗಗಳಲ್ಲಿ ಮೊದಲ ಪ್ರಾಶಸ್ತ್ಯ ನೀಡಲಾಗುವುದು, ಇದರಿಂದ ನಮ್ಮ ದೇಶದ ಆರ್ಥಿಕತೆ ಮತ್ತೆ ಮರುಚೇತನಗೊಳ್ಳಲಿದೆ ಎಂದು ನಿನ್ನೆ ಟ್ರಂಪ್ ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಮೆರಿಕ ಅಧ್ಯಕ್ಷರ ಈ 60 ದಿನಗಳ ತಾತ್ಕಾಲಿಕ ನಿರ್ಬಂಧದಿಂದಾಗಿ ಅಲ್ಲಿನ ಶಾಶ್ವತ ನೆಲೆಗೆ ಅಥವಾ ಗ್ರೀನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಭಾರತ ಸೇರಿದಂತೆ ಬೇರೆ ರಾಷ್ಟ್ರಗಳ ನಾಗರಿಕರಿಗೆ ತೊಂದರೆಯಾಗಲಿದೆ.

ಅಮೆರಿಕದಲ್ಲಿ ಋತುಮಾನಗಳಲ್ಲಿ ಕೃಷಿ ಕಾರ್ಮಿಕ ಕೆಲಸಗಳಿಗೆ ಹೋಗುವ ಕಾರ್ಮಿಕರಿಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಆರೋಗ್ಯ ವಲಯಗಳಲ್ಲಿ ಕೆಲಸ ಮಾಡುವ ಮತ್ತು ಅಮೆರಿಕ ಪ್ರಜೆಗಳ ಸಮೀಪ ಬಂಧುಗಳಿಗೆ ಸಹ ಇದರಿಂದ ಯಾವುದೇ ಸಮಸ್ಯೆಯಿಲ್ಲ.

ಇದುವರೆಗೆ 45 ಸಾವಿರ ಸಾವು ಮತ್ತು 8 ಲಕ್ಷದ 25 ಸಾವಿರ ಮಂದಿಗೆ ಕೊರೋನಾ ಸೋಂಕು ವ್ಯಾಪಿಸಿ ಜಗತ್ತಿನಲ್ಲಿಯೇ ಅಮೆರಿಕ ಕೊರೋನಾ ಸೋಂಕಿತರ ಸಾವು-ನೋವಿನಲ್ಲಿ ಮೊದಲ ಸ್ಥಾನದಲ್ಲಿದೆ. ಇದು ದೇಶದ ಎಲ್ಲಾ ವಲಯಗಳ ಮೇಲೆ ತೀವ್ರ ರೀತಿಯಲ್ಲಿ ಪರಿಣಾಮ ಬೀರಿದೆ. ನ್ಯೂಯಾರ್ಕ್ ನಲ್ಲಿ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

SCROLL FOR NEXT