ಕಿಮ್ ಜಾಂಗ್ ಉನ್(ಸಂಗ್ರಹ ಚಿತ್ರ) 
ವಿದೇಶ

ಕಿಮ್ ಜಾಂಗ್ ಉನ್ ಜೀವಂತವಾಗಿದ್ದು, ಆರೋಗ್ಯವಾಗಿದ್ದಾರೆ: ದಕ್ಷಿಣ ಕೊರಿಯಾ ಭದ್ರತಾ ಸಲಹೆಗಾರ

ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜೀವಂತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಅವರ ಉನ್ನತ ಮಟ್ಟದ ಭದ್ರತಾ ಸಲಹೆಗಾರ ಹೇಳಿದ್ದಾರೆ. ಈ ಮೂಲಕ ಕಿಮ್ ಜಾಂಗ್ ಉನ್ ಅವರ ಆನಾರೋಗ್ಯದ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಸಿಯೊಲ್(ಉತ್ತರ ಕೊರಿಯಾ): ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜೀವಂತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಅವರ ಉನ್ನತ ಮಟ್ಟದ ಭದ್ರತಾ ಸಲಹೆಗಾರ ಹೇಳಿದ್ದಾರೆ. ಈ ಮೂಲಕ ಕಿಮ್ ಜಾಂಗ್ ಉನ್ ಅವರ ಆನಾರೋಗ್ಯದ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ನಮ್ಮ ಸರ್ಕಾರದ ಸ್ಥಿತಿಗತಿ ದೃಢವಾಗಿದೆ. ಕಿಮ್ ಜಾಂಗ್ ಉನ್ ಇನ್ನೂ ಬದುಕಿದ್ದು ಆರೋಗ್ಯವಾಗಿದ್ದಾರೆ ಎಂದು ನಿನ್ನೆ ಸಿಎನ್ಎನ್ ಗೆ ನೀಡಿದ್ದ ಸಂದರ್ಶನದ ವೇಳೆ ಮೂನ್ ಜೆ-ಇನ್ ಅವರ ರಾಷ್ಟ್ರೀಯ ಭದ್ರತೆಯ ವಿಶೇಷ ಸಲಹೆಗಾರ ಮೂನ್ ಚುಂಗ್-ಇನ್ ಹೇಳಿದ್ದಾರೆ.

ಕಿಮ್ ಜಾಂಗ್ ಉನ್ ಉತ್ತರ ಕೊರಿಯಾದ ಪೂರ್ವ ಭಾಗದಲ್ಲಿರುವ ರೆಸಾರ್ಟ್ ಪಟ್ಟಣ ವೊನ್ಸನ್ ನಲ್ಲಿ ಕಳೆದ ಏಪ್ರಿಲ್ 13ರಿಂದ ನೆಲೆಸಿದ್ದು, ಇಲ್ಲಿಯವರೆಗೆ ಅವರ ಯಾವುದೇ ಶಂಕಾಸ್ಪದ ಚಲನವಲನಗಳು ಪತ್ತೆಯಾಗಿಲ್ಲ ಎಂದಿದ್ದಾರೆ.

ಏಪ್ರಿಲ್ 15 ಉತ್ತರ ಕೊರಿಯಾ ರಾಜಕೀಯ ವಿದ್ಯಮಾನ ದಿನಚರಿಯಲ್ಲಿ ಬಹಳ ಪ್ರಾಮುಖ್ಯ ದಿನ. ಕಿಮ್ ಜಾಂಗ್ ಉನ್ ಅವರ ತಾತ ಉತ್ತರ ಕೊರಿಯಾ ಸಂಸ್ಥಾಪಕ ಕಿಮ್ ಇಲ್ ಸಂಗ್ ಅವರ ಜನ್ಮದಿನಾಚರಣೆ. ಆ ಕಾರ್ಯಕ್ರಮಕ್ಕೆ ಕಿಮ್ ಜಾಂಗ್ ಉನ್ ಗೈರಾಗಿದ್ದರು. ಇದರ ಬಳಿಕ ಅವರ ಅನಾರೋಗ್ಯದ ಬಗ್ಗೆ ತೀವ್ರ ಸಂದೇಹ,ಶಂಕೆ ವ್ಯಕ್ತವಾಗಿತ್ತು. ಕಳೆದ ಏಪ್ರಿಲ್ 11ರಂದು ವರ್ಕರ್ಸ್ ಪಾರ್ಟಿಯ ಪಾಲಿಟ್ ಬ್ಯೂರೊ ಸಭೆಯಲ್ಲಿ ಭಾಗವಹಿಸಿದ ನಂತರ ಕಿಮ್ ಜಾಂಗ್ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ. ಮರುದಿನ ಅಲ್ಲಿನ ಮಾಧ್ಯಮ ಅವರು ವಿಮಾನ ರಕ್ಷಣಾ ಕೇಂದ್ರದಲ್ಲಿ ಯುದ್ಧ ವಿಮಾನವೊಂದನ್ನು ತಪಾಸಣೆ ಮಾಡುತ್ತಿರುವ ಬಗ್ಗೆ ವರದಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT