ಗರ್ಭಿಣಿಯರು 
ವಿದೇಶ

ಕೋವಿಡ್-19: ಗರ್ಭನಿರೋಧಕಗಳ ಪೂರೈಕೆಯಲ್ಲಿ ವ್ಯತ್ಯಯ; 7 ದಶಲಕ್ಷ ಅನಪೇಕ್ಷಿತ ಗರ್ಭಧಾರಣೆ ಸಾಧ್ಯತೆ!

ಮಹಾಮಾರಿ ಕೊರೋನಾದಿಂದಾಗಿ ಜಗತ್ತಿನಾದ್ಯಂತ ಸಾವು-ನೋವುಗಳು ಸಂಭವಿಸುತ್ತಿದ್ದು ಇದರ ಮಧ್ಯೆ ಕೊರೋನಾ ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಬರೋಬ್ಬರಿ 70 ಲಕ್ಷ ಮಹಿಳೆಯರು ಗರ್ಭ ಧರಿಸಲಿದ್ದು ಈ ಮೂಲಕ ಜನಸಂಖ್ಯೆ ಮತ್ತಷ್ಟು ಸ್ಫೋಟದ ಸಾಧ್ಯತೆಯೂ ಎದುರಾಗಲಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆ: ಮಹಾಮಾರಿ ಕೊರೋನಾದಿಂದಾಗಿ ಜಗತ್ತಿನಾದ್ಯಂತ ಸಾವು-ನೋವುಗಳು ಸಂಭವಿಸುತ್ತಿದ್ದು ಇದರ ಮಧ್ಯೆ ಕೊರೋನಾ ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಬರೋಬ್ಬರಿ 70 ಲಕ್ಷ ಮಹಿಳೆಯರು ಗರ್ಭ ಧರಿಸಲಿದ್ದು ಈ ಮೂಲಕ ಜನಸಂಖ್ಯೆ ಮತ್ತಷ್ಟು ಸ್ಫೋಟದ ಸಾಧ್ಯತೆಯೂ ಎದುರಾಗಲಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ. 

ಮುಂಬರುವ ತಿಂಗಳಲ್ಲಿ ಜಗತ್ತಿನಾದ್ಯಂತ ಕಡಿಮೆ ಮತ್ತು ಮಧ್ಯಮ ಆದಾಯ ಇರುವ ದೇಶಗಳ ಸುಮಾರು ಏಳು ಲಕ್ಷ ಸ್ತ್ರೀಯರು ಗರ್ಭಿಣಿಯರಾಗಲಿದ್ದಾರೆ. ಇದಕ್ಕೆ ಕಾರಣ ಕೊರೋನಾ ಲಾಕ್ ಡೌನ್ ಎಂದು ವಿಶ್ವಸಂಸ್ಥೆಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಗರ್ಭನಿರೋಧಕಗಳ ಪೂರೈಕೆಯಲ್ಲಿ ವ್ಯತ್ಯಯ ಮತ್ತು ಅದು ಸಕಾಲಕ್ಕೆ ಜನರಿಗೆ ಲಭಿಸದೇ ಇರುವ ಕಾರಣ ಮಹಿಳೆಯರು ಇಚ್ಛೆ ಇಲ್ಲದಿದ್ದರೂ ಗರ್ಭವತಿಯಾಗಲಿದ್ದಾರೆ ಎಂದು ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ(ಯುಎನ್ಎಫ್ಪಿಎ) ದತ್ತಾಂತ ಬಿಡುಗಡೆ ಮಾಡಿದೆ. 

ಲಾಕ್ ಡೌನ್ ಬಿಕ್ಕಟ್ಟಿನಿಂದಾಗಿ ಮಹಿಳೆಯರು ಕುಟುಂಬ ಯೋಜನೆ ಪಾಲಿಸಲು ಸಾಧ್ಯವಾಗುತ್ತಿಲ್ಲ. ಇದು ಜಗತ್ತಿನಾದ್ಯಂತ ಲಕ್ಷಾಂತರ ಯುವತಿಯರು ಮತ್ತು ಮಹಿಳೆಯರ ಮೇಲೆ ದುಷ್ಪರಿಣಾಮ ಬೀರಲಿದೆ. ಇದರಿಂದಾಗಿ ಅವರು ಇಷ್ಟವಿಲ್ಲದಿದ್ದರೂ ಗರ್ಭಧರಿಸುವಂತಾಗುತ್ತದೆ. 

ಲಾಕ್ ಡೌನ್ ಅವಧಿಯಲ್ಲಿ ಆಮದು ಮತ್ತು ರಫ್ತು ಸ್ಥಗಿತಗೊಂಡಿರುವುದರಿಂದ ಪುರುಷರು ಮತ್ತು ಮಹಿಳೆಯರಿಗೆ ಗರ್ಭನಿರೋಧಕಗಳು ಲಭ್ಯವಾಗುತ್ತಿಲ್ಲ. ಹೀಗಾಗಿ ಕಡಿಮೆ ಮತ್ತು ಮಧ್ಯಮ ವರಮಾನದ ದೇಶಗಳಲ್ಲಿ 47 ದಶಲಕ್ಷ ಮಹಿಳೆಯರು ಆಧುನಿಕ ಗರ್ಭನಿರೋಧಕಗಳನ್ನು ಬಳಸಲು ಸಾಧ್ಯವಾಗಿಲ್ಲ ಎಂದು ವರದಿಯಲ್ಲಿ ತಿಳಿದುಬಂದಿದೆ. 

ಇಷ್ಟೇ ಅಲ್ಲದೆ ಲಕ್ಷಾಂತರ ಮಹಿಳೆಯರು ಲಿಂಗ ತಾರತಮ್ಯ, ಕೌಟುಂಬಿಕ ದೌರ್ಜನ್ಯ, ಲೈಂಗಿಕ ಹಿಂಸಾಚಾರ ಮತ್ತು ಇತರ ಗಂಭೀರ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಯುಎನ್ಎಫ್ಪಿಎ ಕಾರ್ಯಕಾರಿ ನಿರ್ದೇಶಕಿ ನಟಾಲಿಯಾ ಕನೇಮ್ ತಿಳಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್