ಪಾಕಿಸ್ತಾನದ ನೂತನ ನಕ್ಷೆ 
ವಿದೇಶ

ಭಾರತದ ಭೂ ಪ್ರದೇಶವನ್ನೊಳಗೊಂಡ ಹೊಸ ಪಾಕಿಸ್ತಾನ ನಕ್ಷೆ ಬಿಡುಗಡೆ ಮಾಡಿದ ಇಮ್ರಾನ್ ಖಾನ್

ಭಾರತವನ್ನು ಮತ್ತೆ ಪಾಕಿಸ್ತಾನ ಕೆಣಕಿದ್ದು, ಭಾರತದ ಭೂ ಪ್ರದೇಶವನ್ನೊಳಗೊಂಡ ಹೊಸ ಪಾಕಿಸ್ತಾನ ನಕ್ಷೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆ ಮಾಡಿದ್ದಾರೆ.

ಇಸ್ಲಾಮಾಬಾದ್: ಭಾರತವನ್ನು ಮತ್ತೆ ಪಾಕಿಸ್ತಾನ ಕೆಣಕಿದ್ದು, ಭಾರತದ ಭೂ ಪ್ರದೇಶವನ್ನೊಳಗೊಂಡ ಹೊಸ ಪಾಕಿಸ್ತಾನ ನಕ್ಷೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಗುಜರಾತ್‌ನ ಕೆಲವು ಭಾಗಗಳು ತನ್ನ ಪ್ರದೇಶದ ಭಾಗವೆಂದು ಹೇಳಿಕೊಂಡ ಪಾಕಿಸ್ತಾನ ಹೊಸ ರಾಜಕೀಯ ನಕ್ಷೆ ಬಿಡುಗಡೆ ಮಾಡಿದೆ.  ನೇಪಾಳದಂತೆಯೇ, ಪಾಕಿಸ್ತಾನವೂ ಕೂಡ ತನ್ನ ನೂತನ ರಾಜಕೀಯ ನಕ್ಷೆಯನ್ನು ಬಿಡುಗಡೆಗೊಳಿಸಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಗುಜರಾತ್ ನ ಜುನಾಗಢ ಅನ್ನು ತನ್ನ ನೂತನ ನಕ್ಷೆಯಲ್ಲಿ ಸೇರಿದೆ. ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಮಂಗಳವಾರ ದೇಶದ ಹೊಸ ರಾಜಕೀಯ ನಕ್ಷೆಯನ್ನುಪ್ರಕಟಿಸಿದೆ. 

ಕಳೆದ ವರ್ಷ ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕಿದ ಮೊದಲ ವಾರ್ಷಿಕೋತ್ಸವದ ಮುನ್ನಾ ದಿನದಂದು ಪಾಕಿಸ್ತಾನ ಸರ್ಕಾರ ಈ ಕ್ರಮ ಕೈಗೊಂಡಿದೆ. ಪಾಕಿಸ್ತಾನ ತನ್ನ ನಕ್ಷೆಯಲ್ಲಿ ಈ ಪ್ರದೇಶಗಳನ್ನು ತೋರಿಸುತ್ತಿರುವುದು ಇದೇ ಮೊದಲು. ಈ ಬಗ್ಗೆ ಪಾಕಿಸ್ತಾನ ಡಾನ್ ಪತ್ರಿಕೆ ವರದಿ ಮಾಡಿದ್ದು, ಹೊಸ ನಕ್ಷೆಗೆ ಇಮ್ರಾನ್ ಖಾನ್ ಸರ್ಕಾರ ಸಂಪುಟ ಅನುಮೋದನೆ ನೀಡಿದೆ ಎನ್ನಲಾಗಿದೆ. 

ಈ ಬಗ್ಗೆ ಮಾತನಾಡಿರುವ ಇಮ್ರಾನ್ ಅವರು, ಇಂದು ಕ್ಯಾಬಿನೆಟ್ ಪರವಾಗಿ ಈ ನಕ್ಷೆಗೆ ಅನುಮೋದನೆ ನೀಡಿದ ಬಳಿಕ ಇದು ಪಾಕಿಸ್ತಾನದ ಅಧಿಕೃತ ನಕ್ಷೆಯಾಗಿದ್ದು. ಇದನ್ನು ಶಾಲೆಗಳಲ್ಲಿ, ಕಾಲೇಜುಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಳಸಲಾಗುವುದು ಎಂದು ಹೇಳಿದ್ದಾರೆ. 

ಹೊಸ ನಕ್ಷೆಯಲ್ಲಿ ಪಾಕಿಸ್ತಾನವು ಭಾರತದೊಂದಿಗಿನ ಗಡಿಯನ್ನು ತೋರಿಸುತ್ತದೆ, ಪಾಕಿಸ್ತಾನವು ಅದರ ಪಕ್ಕದ ಕಾಶ್ಮೀರದ ಸಂಪೂರ್ಣ ಭಾಗವನ್ನು ತೋರಿಸಿದೆ. ಆದಾಗ್ಯೂ ಚೀನಾದ ಗಡಿಯಲ್ಲಿರುವ ಕಾಶ್ಮೀರ ಮತ್ತು ಲಡಾಖ್‌ನ ಒಂದು ಭಾಗವನ್ನು ಗುರುತಿಸಲಾಗಿಲ್ಲ ಮತ್ತು ಇದನ್ನು "ಅನಿರ್ದಿಷ್ಟ ಗಡಿ" ಎಂದು ವಿವರಿಸಲಾಗಿದೆ. ಅಂತೆಯೇ ನಿಯಂತ್ರಣ ರೇಖೆಯನ್ನು ಕರಕೋರಂ ಪಾಸ್ಗೆ ವಿಸ್ತರಿಸಲಾಗಿದೆ, ಇದರಲ್ಲಿ ಸಿಯಾಚಿನ್ ಅನ್ನು ಪಾಕಿಸ್ತಾನದ ಭಾಗವೆಂದು ಸ್ಪಷ್ಟವಾಗಿ ವಿವರಿಸಲಾಗಿದೆ. ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ಕೆಂಪು ಚುಕ್ಕೆಗಳಿರುವ ರೇಖೆಯೊಂದಿಗೆ ತೋರಿಸಲಾಗಿದೆ.

ರಾಜಕೀಯ ಮೂರ್ಖತನ; ಪಾಕ್ ನಕ್ಷೆಗೆ ಭಾರತ ತೀವ್ರ ಆಕ್ಷೇಪ
ಇನ್ನು ಪಾಕಿಸ್ತಾನದ ಹೊಸ ರಾಜಕೀಯ ನಕ್ಷೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಪಾಕಿಸ್ತಾನದ ರಾಜಕೀಯ ಮೂರ್ಖತನ ಎಂದು ಟೀಕಿಸಿದೆ. ಅಲ್ಲದೆ ಪಾಕಿಸ್ತಾನದ ಹಾಸ್ಯಾಸ್ಪದ ಹಕ್ಕುಗಳಿಗೆ ಕಾನೂನು ಮಾನ್ಯತೆ ಅಥವಾ ಅಂತಾರಾಷ್ಟ್ರೀಯ ವಿಶ್ವಾಸಾರ್ಹತೆ ಇಲ್ಲ ಎಂದೂ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT