ಮಹಿಂದಾ ರಾಜಪಕ್ಸೆ 
ವಿದೇಶ

ಶ್ರೀಲಂಕಾ ಸಾರ್ವತ್ರಿಕ ಚುನಾವಣೆ: ಮಹಿಂದ ರಾಜಪಕ್ಸೆ ಪಕ್ಷಕ್ಕೆ ಅಭೂತಪೂರ್ವ ಜಯ

ಶ್ರೀಲಂಕಾ ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಂದಾ ರಾಜಪಕ್ಸೆ ಅವರ ಆಡಳಿತಾ ರೂಢ ಎಸ್‌ಎಲ್‌ಪಿಪಿ (ಶ್ರೀಲಂಕಾ ಪೀಪಲ್ಸ್ ಪಾರ್ಟಿ) ಪಕ್ಷ ಅಭೂತಪೂರ್ವ ಜಯಸಾಧಿಸಿದ್ದು ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ.

ಕೊಲಂಬೊ: ಶ್ರೀಲಂಕಾ ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಂದಾ ರಾಜಪಕ್ಸೆ ಅವರ ಆಡಳಿತಾ ರೂಢ ಎಸ್‌ಎಲ್‌ಪಿಪಿ (ಶ್ರೀಲಂಕಾ ಪೀಪಲ್ಸ್ ಪಾರ್ಟಿ) ಪಕ್ಷ ಅಭೂತಪೂರ್ವ ಜಯಸಾಧಿಸಿದ್ದು ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ.

ದ್ವೀಪ ರಾಷ್ಟ್ರದಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಗುರುವಾರ ತಡರಾತ್ರಿಯೂ ಮುಂದುವರಿಯಿತು. ಶ್ರೀಲಂಕಾ ಸಂಸತ್‌ನ ಸದಸ್ಯರ ಸಂಖ್ಯೆ 225 ಆಗಿದ್ದು ಈ ಪೈಕಿ ಪ್ರಕಟವಾದ ಫಲಿತಾಂಶಗಳ ಪೈಕಿ ರಾಜಪಕ್ಸೆಯವರ ಪಕ್ಷ ಭಾರಿ ಗೆಲುವಿನತ್ತ ಸಾಗಿದೆ. ಮೂಲಗಳ ಪ್ರಕಾರ ರಾಜಪಕ್ಸೆ ಅವರ ಎಸ್ ಎಲ್ ಪಿಪಿ ಪಕ್ಷ 145 ಸ್ಥಾನಗಳಲ್ಲಿ ಜಯಭೇರಿ ಭಾರಿಸಿದ್ದು, ಎಸ್ ಎಲ್ ಪಿಪಿ ಸೇರಿದಂತೆ ರಾಜಪಕ್ಸೆ ಅವರ ಮೈತ್ರಿಕೂಟ ಒಟ್ಟು 150 ಸ್ಥಾನಗಳನ್ನು ಗೆದ್ದಿದೆ. 

ಸಿಂಹಳ ಸಮುದಾಯದವರು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ರಾಜಪಕ್ಸೆ ಪಕ್ಷಕ್ಕೆ ಶೇ.60ರಷ್ಚು ಮತಗಳು ಚಲಾವಣೆಯಾಗಿದೆ ಎಂದು ಹೇಳಲಾಗಿದೆ. ಚಲಾವಣೆಯಾದ ಒಟ್ಟು 6.8 ಮಿಲಿಯನ್ ಮತಗಳ ಪೈಕಿ ರಾಜಪಕ್ಸೆ ಅವರ ಪಕ್ಷಕ್ಕೇ ಶೇ.59.9ರಷ್ಟು ಮತಗಳು ಚಲಾವಣೆಯಾಗಿದೆ ಎನ್ನಲಾಗಿದೆ.  ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ‘ಇದು ಆಡಳಿತಾರೂಢ ಪಕ್ಷಕ್ಕೆ ಲಭಿಸಿದ ಅದ್ಭುತ ಗೆಲುವು’ ಎಂದು ಟ್ವೀಟ್‌ ಮಾಡಿದ್ದಾರೆ.  

ಮಹಿಂದ ಅವರ ಪ್ರಬಲ ಪ್ರತಿಸ್ಪರ್ಧಿ ಎಂದೇ ಪರಿಗಣಿಸಲಾಗಿರುವ ಸಜಿತ್‌ ಪ್ರೇಮದಾಸ ಅವರ ಪಕ್ಷ ಯುನೈಟೆಡ್‌ ನ್ಯಾಷನಲ್‌ ಪಾರ್ಟಿ (ಯುಎನ್‌ಪಿ) ನಾಲ್ಕನೇ ಸ್ಥಾನ ಪಡೆದಿದೆ.

ಪ್ರಧಾನಿ ಮೋದಿ ಕರೆ
ಅತ್ತ ರಾಜಪಕ್ಸೆ ಅವರ ಗೆಲುವು ಖಚಿತವಾಗುತ್ತಿದ್ದಂತೆಯೇ ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು  ರಾಜಪಕ್ಸೆ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.  ಈ ಕುರಿತು ಖುದ್ದು ಮಹೀಂದಾ ರಾಜಪಕ್ಸೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಚುನಾವಣೆ ವಿಜಯಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ಶ್ರೀಲಂಕಾ ಜನರ ಆಶೀರ್ವಾದದೊಂದಿಗೆ ಭಾರತದೊಂದಿಗಿನ ಸುಮಧುರ ಸಂಬಂಧವನ್ನು ಮುಂದುವರೆಸುವುದಾಗಿ ರಾಜಪಕ್ಸೆ ಹೇಳಿದ್ದಾರೆ. ಭಾರತ-ಶ್ರೀಲಂಕಾ ಸಂಬಂಧ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಮತ್ತಷ್ಟು ಗಟ್ಟಿಯಾಗಲಿದ್ದು, ಮೋದಿ ಅವರೊಂದಿಗೆ ಹೆಗಲು ಕೊಟ್ಟು ಕೆಲಸ ಮಾಡಲು ಸಿದ್ಧ ಎಂದು ರಾಜಪಕ್ಸೆ ಭರವಸೆ ನೀಡಿದ್ದಾರೆ. ರಾಜಪಕ್ಸೆ ಅವರ ಟ್ವೀಟ್‌ಗೆ ಮರು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತ-ಶ್ರೀಲಂಕಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಿದ್ಧವಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT