ನೇಪಾಳದ 7 ಜಿಲ್ಲೆಗಳ ಭೂಮಿಯನ್ನು ಕಬಳಿಸಿದ ಚೀನಾ: ಆದರೂ ನೇಪಾಳ ಪ್ರಧಾನಿ ಕೆ.ಪಿ ಒಲಿ ಮೌನ! 
ವಿದೇಶ

ನೇಪಾಳದ 7 ಜಿಲ್ಲೆಗಳ ಭೂಮಿಯನ್ನು ಕಬಳಿಸಿದ ಚೀನಾ: ಆದರೂ ನೇಪಾಳ ಪ್ರಧಾನಿ ಕೆ.ಪಿ ಒಲಿ ಮೌನ!

ಚೀನಾದ ವಿಸ್ತರಣಾವಾದಕ್ಕೆ ನೇಪಾಳ ಹೊಸ ಬಲಿಪಶುವಾದಂತೆ ಕಾಣುತ್ತಿದೆ. ನೇಪಾಳದ ಬರೊಬ್ಬರಿ 7 ಜಿಲ್ಲೆಗಳಲ್ಲಿ ಚೀನಾ ಭೂಮಿಯನ್ನು ಅತಿಕ್ರಮಣ ಮಾಡಿದೆ. 

ಕಠ್ಮಂಡು: ಚೀನಾದ ವಿಸ್ತರಣಾವಾದಕ್ಕೆ ನೇಪಾಳ ಹೊಸ ಬಲಿಪಶುವಾದಂತೆ ಕಾಣುತ್ತಿದೆ. ನೇಪಾಳದ ಬರೊಬ್ಬರಿ 7 ಜಿಲ್ಲೆಗಳಲ್ಲಿ ಚೀನಾ ಭೂಮಿಯನ್ನು ಅತಿಕ್ರಮಣ ಮಾಡಿದೆ. 

ನೇಪಾಳಿ ಸರ್ಕಾರದ ಅಧಿಕೃತ ಡಾಟಾ ನೀಡಿರುವ ಮಾಹಿತಿಯ ಪ್ರಕಾರ ಚೀನಾ ಜೊತೆ ಗಡಿ ಹಂಚಿಕೊಂಡಿರುವ 7 ಜಿಲ್ಲೆಗಳಲ್ಲಿ ಚೀನಾ ಅಕ್ರಮವಾಗಿ ಭೂಮಿಯನ್ನು ವಶ ಪಡಿಸಿಕೊಂಡಿದ್ದು, ಅತಿಕ್ರಮಣ ಹೆಚ್ಚಾಗತೊಡಗಿದೆ. 

ಈ ವರದಿಯಲ್ಲಿ ಉಲ್ಲೇಖವಾಗಿರುವುದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಅತಿಕ್ರಮಣ ಮಾಡಲಾಗಿದೆ ಎನ್ನುತ್ತಿದೆ ಅಲ್ಲಿನ ಆಂತರಿಕ ಮೂಲಗಳು 

ನೇಪಾಳದ ಕಮ್ಯುನಿಸ್ಟ್ ಪಕ್ಷ ಚೀನಾದ ಕಮ್ಯುನಿಸ್ಟ್ ಪಕ್ಷದ ವಿಸ್ತರಣಾವಾದದ ಅಜೆಂಡಾವನ್ನು ಮರೆಮಾಚಲು ಯತ್ನಿಸುತ್ತಿದ್ದು, ಚೀನಾ ಅತಿಕ್ರಮಣ ಮಾಡಿದರೂ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ಮೌನಕ್ಕೆ ಶರಣಾಗಿದ್ದಾರೆ ಎಂದು ಜ್ಹೀ ನ್ಯೂಸ್ ವರದಿ ಪ್ರಕಟಿಸಿದೆ. 

ಚೀನಾ-ನೇಪಾಳದ ರಾಜತಾಂತ್ರಿಕ ತಜ್ಞರು ಈ ಬಗ್ಗೆ ಮಾತನಾಡಿದ್ದು, ಚೀನಾ ಸಿಸಿಪಿಗೆ ಸಿಟ್ಟು ಬರಬಹುದೆಂಬ ಕಾರಣಕ್ಕಾಗಿ ಚೀನಾದ ವಿಸ್ತರಣಾವಾದ ಸ್ಪಷ್ಟವಾಗಿ ಕಾಣುತ್ತಿದ್ದರೂ ನೇಪಾಳದ ಕೆಪಿ ಒಲಿ ನೇತೃತ್ವದ ಸರ್ಕಾರ ಈ ಬಗ್ಗೆ ಮಾತನಾಡದೇ ಮೌನಕ್ಕೆ ಶರಣಾಗಿದೆ ಎಂದು ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ. 

ದೋಲಖಾ, ಗೂರ್ಖಾ, ಡಾರ್ಚುಲಾ, ಹಮ್ಲಾ, ಸಿಂಧುಪಾಲ್ಚೌಕ್, ಸಂಖುವಸಭ ಮತ್ತು ರಸುವಾ ಚೀನಾದ ಅತಿಕ್ರಮಣಕ್ಕೆ ತುತ್ತಾಗಿರುವ ನೇಪಾಳದ ಜಿಲ್ಲೆಗಳಾಗಿದೆ. ನೇಪಾಳದ ದೋಲಾಖ ದಲ್ಲಿ ಚೀನಾ ತನ್ನ ಅಂತಾರಾಷ್ಟ್ರೀಯ ಗಡಿಯನ್ನು 1,500 ಮೀಟರ್ ನಷ್ಟು ಒತ್ತುವರಿ ಮಾಡಿದೆ.

ಮಾನವಹಕ್ಕುಗಳ ಆಯೋಗವೂ ಸಹ ಚೀನಾದ ದುರ್ವರ್ತನೆಯನ್ನು ವರದಿ ಮಾಡಿದ್ದು, ಡಾರ್ಚುಲಾದ ಜಿಯುಜಿಯು ಗ್ರಾಮದ ಒಂದು ಭಾಗವನ್ನೇ ಚೀನಾ ಆಕ್ರಮಿಸಿಕೊಂಡಿದೆ. ಈ ಭಾಗದಲ್ಲಿ ಈ ವರೆಗೂ ನೇಪಾಳದ್ದಾಗಿದ್ದ ಹಲವಾರು ಮನೆಗಳನ್ನು ಚೀನಾ ವಶಕ್ಕೆ ತೆಗೆದುಕೊಂಡಿದ್ದು ಚೀನಾದ ಪ್ರಾಂತ್ಯಕ್ಕೆ ಸೇರಿಸಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT