ಯುದ್ಧ ನೌಕೆ 
ವಿದೇಶ

ಗಲ್ವಾನ್ ಗಲಭೆ ನಂತರ ಸದ್ದಿಲ್ಲದೇ ದಕ್ಷಿಣ ಚೀನಾ ಸಮುದ್ರದಲ್ಲಿ ಯುದ್ಧ ನೌಕೆ ನಿಯೋಜಿಸಿದ ಭಾರತ! 

ಇತ್ತ ಗಲ್ವಾನ್ ಗಲಭೆ ನಡೆದಿದ್ದರ ಬೆನ್ನಲ್ಲೇ ಭಾರತ ದಕ್ಷಿಣ ಚೀನಾ ಸಮುದ್ರದಲ್ಲಿ ಸದ್ದಿಲ್ಲದೇ ತನ್ನ ಯುದ್ಧ ನೌಕೆ ನಿಯೋಜನೆ ಮಾಡಿದೆ. 

ನವದೆಹಲಿ: ಇತ್ತ ಗಲ್ವಾನ್ ಗಲಭೆ ನಡೆದಿದ್ದರ ಬೆನ್ನಲ್ಲೇ ಭಾರತ ದಕ್ಷಿಣ ಚೀನಾ ಸಮುದ್ರದಲ್ಲಿ ಸದ್ದಿಲ್ಲದೇ ತನ್ನ ಯುದ್ಧ ನೌಕೆ ನಿಯೋಜನೆ ಮಾಡಿದೆ. 

ಭಾರತದ ಈ ನಡೆಗೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗಲ್ವಾನ್ ಗಲಭೆ ನಂತರ ನಂತರ ನಡೆದ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲೂ ಸಹ ಈ ವಿಷಯವನ್ನು ಪ್ರಸ್ತಾಪಿಸಿರುವ ಚೀನಾ ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ.; 

2009 ರಿಂದಲೂ ಚೀನಾ ದಕ್ಷಿಣ ಚೀನಾ ಸಮುದ್ರದಲ್ಲಿ ತನ್ನ ಕೃತಕ ದ್ವೀಪಗಳನ್ನು ಸೃಷ್ಟಿಸಿ, ಸೇನೆ, ಯುದ್ಧನೌಕೆಗಳ ನಿಯೋಜನೆ ಮೂಲಕ ಆ ಪ್ರದೇಶದಲ್ಲಿ ಏಕಸ್ವಾಮ್ಯ ಹಕ್ಕು ಸ್ಥಾಪನೆಗೆ ಯತ್ನಿಸುತ್ತಿದೆ. 

ಗಲ್ವಾನ್ ಘರ್ಷಣೆ, 20 ಯೋಧರ ಸಾವಿನ ಬೆನ್ನಲ್ಲೇ ಭಾರತ ಸದ್ದಿಲ್ಲದೇ ತನ್ನ ಮುಂಚೂಣಿ ಯುದ್ಧನೌಕೆಗಳನ್ನು ನಿಯೋಜಿಸಿದೆ ಎಂದು ಎಎನ್ಐ ಗೆ ಸರ್ಕಾರಿ ಮೂಲಗಳು ತಿಳಿಸಿವೆ. 

ದಕ್ಷಿಣ ಚೀನಾ ಸಮುದ್ರದ ಬಳಿ ನಿಯೋಜಿಸಲಾಗಿರುವ ಅಮೆರಿಕ ಯುದ್ಧನೌಕೆಗಳೊಂದಿಗೂ ಸುರಕ್ಷಿತ ಸಂವಹನ ನಡೆಸುತ್ತಿದೆ. 
ಭಾರತದ ಯುದ್ಧ ನೌಕೆಗಳು ಬೇರೆ ದೇಶಗಳ ಸೇನಾ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯುತ್ತಿರುತ್ತವೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT