ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್ 
ವಿದೇಶ

2000-2019ರ ಅವಧಿಯಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ: ವಿಶ್ವ ಆರೋಗ್ಯ ಸಂಸ್ಥೆ

2000-2019ರ ಅವಧಿಯಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಶ್ಲಾಘಿಸಿದೆ.

ವಿಶ್ವಸಂಸ್ಥೆ: 2000-2019ರ ಅವಧಿಯಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಶ್ಲಾಘಿಸಿದೆ.

ವಿಶ್ವ ಸಂಸ್ಥೆ ಬಿಡುಗಡೆ ಮಾಡಿರುವ 'ವಿಶ್ವ ಮಲೇರಿಯಾ ವರದಿ–2020' ವರದಿಯ ಅನ್ವಯ, 'ಮಲೇರಿಯಾ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಉತ್ತಮ ಪ್ರಗತಿ ಸಾಧಿಸಿದ್ದು, ಆಗ್ನೇಯ ಏಷ್ಯಾ ರಾಷ್ಟ್ರಗಳಲ್ಲೇ ಅತಿ ಕಡಿಮೆ ಪ್ರಕರಣಗಳನ್ನು ಹೊಂದಿದ ರಾಷ್ಟ್ರವಾಗಿದೆ.  2000ನೇ  ಇಸವಿಯಲ್ಲಿ ಭಾರತದಲ್ಲಿ 2 ಕೋಟಿಯಷ್ಟಿದ್ದ ಮಲೇರಿಯಾ ಪ್ರಕರಣಗಳು, ಕಳೆದ ವರ್ಷ 5.6 ಲಕ್ಷಕ್ಕೆ ಇಳಿದಿತ್ತು. ಅಂತೆಯೇ 409,000 ಜೀವಗಳು ಬಲಿಯಾಗಿದ್ದವು, 2018 ರಲ್ಲಿ 411,000 ಮಂದಿ ಮಲೇರಿಯಾಗೆ ಸಾವನ್ನಪ್ಪಿದ್ದರು ಎಂದು ಹೇಳಿದೆ. 

ಮಲೇರಿಯಾಗೆ ಕಾಂಗೋ, ಘಾನಾ, ಭಾರತ, ಮಾಲಿ, ಮೊಜಾಂಬಿಕ್, ನೈಜರ್, ನೈಜೀರಿಯಾ, ಉಗಾಂಡಾ ಮತ್ತು ಟಾಂಜೇನಿಯಾದಲ್ಲಿ ಹೆಚ್ಚು ಸಾವು ಸಂಭವಿಸಿದೆ.

ಈ ವರದಿ ಪ್ರಕಾರ 2019ರಲ್ಲಿ ವಿಶ್ವದಾದ್ಯಂತ ಸುಮಾರು 22 ಕೋಟಿ ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ವಾರ್ಷಿಕವಾಗಿ ಈ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಕಳೆದ ವರ್ಷ, ಈ ರೋಗದಿಂದ 4.09 ಲಕ್ಷ ಹಾಗೂ 2018ರಲ್ಲಿ 4.11 ಲಕ್ಷ ಮಂದಿ  ಸಾವನ್ನಪ್ಪಿದ್ದರು. ಆಗ್ನೇಯ ಏಷ್ಯಾದ ರಾಷ್ಟ್ರಗಳು ಮಲೇರಿಯಾ ರೋಗ ನಿಯಂತ್ರಣದಲ್ಲಿ ಉತ್ತಮ ಪ್ರಗತಿ ಸಾಧಿಸಿವೆ. ಸಾವಿನ ಪ್ರಕರಣಗಳು ಶೇ 73 ರಿಂದ ಶೇ 74ರಷ್ಟು ಕಡಿಮೆಯಾಗಿವೆ ಎಂದು ಹೇಳಲಾಗಿದೆ.

ಜಾಗತಿಕ ಮಟ್ಟದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳಲ್ಲಿ ಶೇ 3ರಷ್ಟು ಮಲೇರಿಯಾ ಪ್ರಕರಣಗಳಿವೆ ಎಂದು ವರದಿ ಹೇಳಿದೆ. ಕಳೆದ 2 ವರ್ಷಗಳಲ್ಲಿ ಮಲೇರಿಯಾ ವಿರುದ್ಧದ ಹೋರಾಟದಲ್ಲಿ ಭಾರತವು ಸಾಧಿಸಿರುವ ಪ್ರಗತಿಯನ್ನು ಡಬ್ಲ್ಯುಎಚ್‌ಒ ಗಮನಿಸಿದೆ. ಭಾರತದಲ್ಲಿ 2000– 2019 ರ  ನಡುವೆ ಮಲೇರಿಯಾದಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲೂ ಇಳಿಮುಖವಾಗಿದೆ. 2000 ರಲ್ಲಿ ಮಲೇರಿಯಾದಿಂದ ಸುಮಾರು 29,500 ಮೃತಪಟ್ಟಿದ್ದರು. ಕಳೆದ ವರ್ಷ ಸುಮಾರು 7700 ಮಂದಿ ಸಾವನ್ನಪ್ಪಿದ್ದಾರೆ ಎಂದು ಎಂದು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಡಾ. ಟೆಡ್ರೊಸ್  ಅಧಾನೊಮ್ ಘೆಬ್ರೆಯೆಸಸ್ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT