ಭಾರತದ ರೈತರ ಪ್ರತಿಭಟನೆಗೆ ಕೆನಡಾ ಪ್ರಧಾನಿಯಿಂದಲೂ ಬೆಂಬಲ! 
ವಿದೇಶ

ಭಾರತದ ರೈತರ ಪ್ರತಿಭಟನೆಗೆ ಕೆನಡಾ ಪ್ರಧಾನಿಯಿಂದಲೂ ಬೆಂಬಲ!

ಶಾಂತಿಯುತ ಪ್ರತಿಭಟನೆಗೆ ಕೆನಡಾ ಎಂದಿಗೂ ಬೆಂಬಲಿಸಲಿದೆ ಎಂದು ಹೇಳುವ ಮೂಲಕ ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಶಾಂತಿಯುತ ಪ್ರತಿಭಟನೆಗೆ ಕೆನಡಾ ಎಂದಿಗೂ ಬೆಂಬಲಿಸಲಿದೆ ಎಂದು ಹೇಳುವ ಮೂಲಕ ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. 

ರೈತರ ಪ್ರತಿಭಟನೆಯನ್ನು ಆತಂಕಕಾರಿ ಪರಿಸ್ಥಿತಿ ಎಂದು ಹೇಳಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ, ಗುರು ನಾನಕ್ ಜಯಂತಿಯ ಆಚರಣೆಯ ಭಾಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಫೇಸ್ ಬುಕ್ ವಿಡಿಯೋ ಮೂಲಕ ಮಾತನಾಡುತ್ತಿದ್ದರು.

ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಗುರುತಿಸದೇ ಮಾತನಾಡಿದಲ್ಲಿ ನಾನು ಅಜಾಗರೂಕನಾಗುತ್ತೇನೆ, ಪರಿಸ್ಥಿತಿ ಆತಂಕಕಾರಿಯಾಗಿದ್ದು, ನಾವು ಸ್ನೇಹಿತರು ಹಾಗೂ ಸಂಬಧಿಕರ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಹೇಳಿದ್ದಾರೆ.

ಕೆನಡಾ ಶಾಂತಿಯುತ ಪ್ರತಿಭಟನೆಗಳನ್ನು ಎಂದಿಗೂ ಬೆಂಬಲಿಸಲಿದೆ. ಮಾತುಕತೆಯಲ್ಲಿನ ಮಹತ್ವವನ್ನು ನಾವೂ ನಂಬುತ್ತೇವೆ. ನಾವು ನಮ್ಮ ಆತಂಕಗಳನ್ನು ನೇರವಾಗಿ ಹಲವು ವಿಧಾನಗಳ ಮೂಲಕ ಭಾರತೀಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದೂ ಕೆನಡಾ ಪ್ರಧಾನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT