ಕೆನಡಾ ಪ್ರಧಾನಿ 
ವಿದೇಶ

ಎಚ್ಚರಿಕೆಯ ನಡುವೆಯೂ ರೈತರ ಪ್ರತಿಭಟನೆಗೆ ಜಸ್ಟಿನ್ ಟ್ರುಡೋ ಬೆಂಬಲ; ಕೆನಡಾ ನೇತೃತ್ವದ ಕೋವಿಡ್ ಸಭೆಗೆ ಜೈ ಶಂಕರ್ ಬಹಿಷ್ಕಾರ

ಭಾರತದ ವಿದೇಶಾಂಗ ಸಚಿವಾಲಯದ ಎಚ್ಚರಿಕೆಯ ಹೊರತಾಗಿಯೂ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಮೊಂಡಾಟ ಪ್ರದರ್ಶಿಸಿದ್ದು, ಮತ್ತೆ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ನವದೆಹಲಿ: ಭಾರತದ ವಿದೇಶಾಂಗ ಸಚಿವಾಲಯದ ಎಚ್ಚರಿಕೆಯ ಹೊರತಾಗಿಯೂ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಮೊಂಡಾಟ ಪ್ರದರ್ಶಿಸಿದ್ದು, ಮತ್ತೆ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಮತ್ತೆ ತಮ್ಮ ಈ ಹಿಂದಿನ ಹೇಳಿಕೆಯನ್ನೇ ಪುನರುಚ್ಚರಿಸಿರುವ ಜಸ್ಟಿನ್ ಟ್ರೂಡೋ ಕೆನಡಾ ಶಾಂತಿಯುತ ಪ್ರತಿಭಟನೆಯ ಹಕ್ಕುಗಳಿಗೆ ಎಂದಿಗೂ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಬ್ರಿಟನ್ ನ ಸಿಖ್ ಪರಿಷತ್ ಸಹ ಕೆನಡಾ ಪ್ರಧಾನಿಗಳ ಹೇಳಿಕೆಗೆ ಎಲ್ಲಾ ರಾಜಕಾರಣಿಗಳೂ ಬೆಂಬಲಿಸಬೇಕೆಂದು ಒತ್ತಡ ಹೇರಿದೆ.

"ಭಾರತದ ಅಧಿಕಾರಿಗಳು ನಡೆಸುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ವಿರೋಧಿಸುತ್ತಿರುವ ಜಸ್ಟಿನ್ ಟ್ರೂಡೋ ಅರಿಗೆ ಎಲ್ಲಾ ರಾಜಕಾರಣಿಗಳೂ ಬೆಂಬಲ ನೀಡಬೇಕು" ಎಂದು ಬ್ರಿಟನ್ ನ ಸಿಖ್ ಪರಿಷತ್ ಟ್ವೀಟ್ ಮೂಲಕ ಆಗ್ರಹಿಸಿದೆ.

ಇನ್ನು ಮೊಂಡುತನ ಪ್ರದರ್ಶಿಸುತ್ತಿರುವ ಕೆನಡಾ ಸರ್ಕಾರದ ವರ್ತನೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತೀಕ್ಷ್ಣ ಪ್ರತಿಕ್ರಿಯೆ ನೀಡತೊಡಗಿದೆ. 

ಮುಂದಿನ ವಾರ ಕೆನಡಾದ ನೇತೃತ್ವದಲ್ಲಿ ಕೋವಿಡ್-19 ಸಂಬಂಧ ನಡೆಯಬೇಕಿದ್ದ ವಿದೇಶಾಂಗ ಸಚಿವರುಗಳ ಸಭೆಯನ್ನು ಬಹಿಷ್ಕರಿಸಲು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ತೀರ್ಮಾನಿಸಿದ್ದಾರೆ. 

ಕೋವಿಡ್-19 ಗೆ ಸಂಬಂಧಿಸಿದಂತೆ ನವೆಂಬರ್ ತಿಂಗಳಲ್ಲಿ ನಡೆದ ಮಂತ್ರಿಗಳ ಸಮನ್ವಯ ಗುಂಪಿನ 11ನೇ ಸಭೆಯಲ್ಲಿ ಮೊದಲ ಬಾರಿಗೆ ಭಾರತ ಅಧಿಕೃತವಾಗಿ ಭಾಗವಹಿಸಿತ್ತು. 

ಈ ಬಾರಿ ಕೆನಡಾ ನೇತೃತ್ವದಲ್ಲಿ ನಡೆದ ಸಭೆಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಗೆ ಆಹ್ವಾನ ನೀಡಲಾಗಿತ್ತು. ಆದರೆ ರೈತರ ಪ್ರತಿಭಟನೆ ಸಂಬಂಧ ಕೆನಡಾ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಭೆಯನ್ನು ಬಹಿಷ್ಕರಿಸಲು ಭಾರತ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT