ಶಾ ಮಹಮ್ಮೂದ್ ಖುರೇಷಿ 
ವಿದೇಶ

ಸದ್ಯದ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ಮಾತುಕತೆ ಸಾಧ್ಯವಿಲ್ಲ: ಪಾಕಿಸ್ತಾನ ವಿದೇಶಾಂಗ ಸಚಿವ 

ಸದ್ಯದ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

ಇಸ್ಲಾಮಾಬಾದ್: ಸದ್ಯದ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

ಪಾಕಿಸ್ತಾನದೊಂದಿಗೆ ಮಾತುಕತೆ ಮತ್ತು ಇನ್ನೊಂದೆಡೆ ಗಡಿಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಒಟ್ಟೊಟ್ಟಿಗೆ ಹೋಗಲು ಸಾಧ್ಯವಿಲ್ಲ, ಪಾಕಿಸ್ತಾನ ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ತಾಳಲೇಬೇಕು ಎಂದು ಭಾರತ ಈಗಾಗಲೇ ತನ್ನ ಸ್ಪಷ್ಟ ನಿಲುವನ್ನು ತಿಳಿಸಿದೆ.

ಹಿಂಬಾಗಿಲಿನಿಂದ ಅಥವಾ ರಾಜತಾಂತ್ರಿಕ ಮಟ್ಟದ ಮಾತುಕತೆ ಭಾರತದ ಜೊತೆಗೆ ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಮಾತುಕತೆಗೆ ಸದ್ಯ ಪರಿಸ್ಥಿತಿ ಅನುಕೂಲಕರವಾಗಿಲ್ಲ ಎಂದು ಖುರೇಷಿ ಹೇಳಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ. ಅವರು ನಿನ್ನೆ ತಮ್ಮ ತಾಯ್ನಾಡು ಮುಲ್ತಾನ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಈ ವಿಷಯ ತಿಳಿಸಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಮೇಲೆ 2016ರಲ್ಲಿ ಉಗ್ರರ ದಾಳಿ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ನಂತರ ಉರಿಯ ಭಾರತೀಯ ಸೇನೆಯ ಶಿಬಿರ ಮೇಲೆ ಸಹ ದಾಳಿ ನಡೆದಿತ್ತು. ಅದು ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಯಿತು. 

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಕಳೆದ ವರ್ಷ ಫೆಬ್ರವರಿ 26ರಂದು ಭಾರತ, ಪಾಕಿಸ್ತಾನದ ಒಳಗೆ ಇರುವ ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆ ಮೇಲೆ ವಾಯು ದಾಳಿ ನಡೆಸಿ ಭಯೋತ್ಪಾದಕ ಶಿಬಿರ ತಾಣವನ್ನು ನೆಲಸಮ ಮಾಡಿತ್ತು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಸುದ್ದಿಯಾಗಿ ಭಾರತ ಪಾಕಿಸ್ತಾನದ ಕೆಂಗಣ್ಣಿಗೆ ಗುರಿಯಾಯಿತು. ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಮಂದಿ ಸಿಆರ್ ಪಿಎಫ್ ಜವಾನರು ಹುತಾತ್ಮರಾಗಿದ್ದರು. 

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂತೆಗೆತ, ರಾಜ್ಯವನ್ನು ವಿಭಜಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ರಚಿಸಿದ್ದಕ್ಕೆ ಪಾಕಿಸ್ತಾನ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ವಿರುದ್ಧವಾಗಿ ಬೇರೆ ದೇಶಗಳ ನೆರವನ್ನು ಪಾಕಿಸ್ತಾನ ಕೋರುತ್ತಿದೆ.

ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ್ದು ಭಾರತದ ಆಂತರಿಕ ವಿಚಾರ, ಇದಕ್ಕೆ ಬೇರೆ ದೇಶಗಳ ಮಧ್ಯಪ್ರವೇಶ ಅಗತ್ಯವಿಲ್ಲವೆಂದು ಭಾರತ ಪ್ರತಿಪಾದಿಸುತ್ತಾ ಬಂದಿದೆ.ಪಾಕಿಸ್ತಾನ ವಾಸ್ತವ ಸಂಗತಿ ಅರಿತು ಭಾರತದ ವಿರುದ್ಧ ಪ್ರಚಾರ ಮಾಡುವುದನ್ನು ನಿಲ್ಲಿಸಬೇಕೆಂದು ಹೇಳುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT