ನೇಪಾಳ: ಜ.1 ರಿಂದ ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯಲು ಕೆಪಿ ಒಲಿ ಸರ್ಕಾರದ ಶಿಫಾರಸು 
ವಿದೇಶ

ನೇಪಾಳ: ಜ.1 ರಿಂದ ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯಲು ಕೆಪಿ ಒಲಿ ಸರ್ಕಾರ ಶಿಫಾರಸು 

ನೇಪಾಳದಲ್ಲಿ ರಾಜಕೀಯ ಅಸ್ಥಿರತೆಯ ನಡುವೆಯೇ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರ ರಣತಂತ್ರ ಹೆಣೆಯುತ್ತಿದ್ದು, ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯುವುದಕ್ಕೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ.

ಕಠ್ಮಂಡು: ನೇಪಾಳದಲ್ಲಿ ರಾಜಕೀಯ ಅಸ್ಥಿರತೆಯ ನಡುವೆಯೇ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರ ರಣತಂತ್ರ ಹೆಣೆಯುತ್ತಿದ್ದು, ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯುವುದಕ್ಕೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ. 

ಪ್ರತಿನಿಧಿಗಳ ಸಭೆಯನ್ನು ವಿಸರ್ಜನೆ ಮಾಡಿದ ಒಂದು ವಾರದ ನಂತರ ಈ ಶಿಫಾರಸು ಕಳಿಸಿದ್ದು, ಜ.1 ರಂದು ಸಭೆ ಕರೆಯುವುದಕ್ಕೆ ಕೇಳಿದೆ.

ಪ್ರಧಾನಿಗಳ ಶಿಫಾರಸಿನ ಆಧಾರದಲ್ಲಿ ವಿದ್ಯಾದೇವಿ ಭಂಡಾರಿ ಕಳೆದ ವಾರ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ನ್ನು ವಿಸರ್ಜನೆ ಮಾಡಿದ್ದು, ಮಧ್ಯಂತರ ಚುನಾವಣೆಯನ್ನು ಘೋಷಿಸಿದ್ದರು. ಇದಕ್ಕೆ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳಿಂದ ಪ್ರತಿಭಟನೆಯೂ ವ್ಯಕ್ತವಾಗಿತ್ತು.

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷ ಈಗ ಅಕ್ಷರಸಹ ಇಬ್ಭಾಗವಾಗಿದ್ದು,  ಪ್ರಚಂಡ ಅವರ ಬಣ ಹಾಗೂ ಕೆಪಿ ಶರ್ಮಾ ಒಲಿ ಬಣದ ನಡುವೆ ತಿಕ್ಕಾಟ ಉಂಟಾಗಿದೆ. ಈಗ ಪ್ರತಿನಿಧಿಗಳ ಸಭೆಯನ್ನು ವಿಸರ್ಜನೆ ಮಾಡಿದ ಬಳಿಕ ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಷನಲ್ ಅಸೆಂಬ್ಲಿಯ ಚಳಿಗಾಲದ ಅಧಿವೇಶನವನ್ನು ಜ.1 ರಿಂದ ಕರೆಯುವಂತೆ ಶಿಫಾರಸು ಕಳಿಸಲಾಗಿದೆ. 

ಪ್ರತಿನಿಧಿಗಳ ಸಭೆಯನ್ನು ವಿಸರ್ಜನೆ ಮಾಡಿದ ಬಳಿಕ ಪ್ರಚಂಡ ನೇತೃತ್ವದ ಬಣದ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.  ಈಗ ಎರಡೂ ಬಣದ ನಾಯಕರು ಪಕ್ಷದ ಮೇಲೆ ಹಕ್ಕು ಸ್ಥಾಪನೆಗಾಗಿ ಯತ್ನಿಸುತ್ತಿದ್ದು, ಚುನಾವಣಾ ಚಿಹ್ನೆಯನ್ನು ಪಡೆಯುವುದಕ್ಕೂ ಯತ್ನಿಸುತ್ತಿದ್ದಾರೆ, ಎನ್ ಸಿ ಪಿಯ ಯಾವ ಬಣ ಪಕ್ಷದ ಚಿಹ್ನೆ ಹಾಗೂ ಹೆಸರನ್ನು ಚುನಾವಣೆಗೆ ಬಳಸಿಕೊಳ್ಳುವುದಕ್ಕೆ ಕಾನೂನು ಬದ್ಧವಾಗಿ ಅಧಿಕಾರ ಹೊಂದಿದೆ ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT