ನೇಪಾಳ: ಜ.1 ರಿಂದ ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯಲು ಕೆಪಿ ಒಲಿ ಸರ್ಕಾರದ ಶಿಫಾರಸು 
ವಿದೇಶ

ನೇಪಾಳ: ಜ.1 ರಿಂದ ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯಲು ಕೆಪಿ ಒಲಿ ಸರ್ಕಾರ ಶಿಫಾರಸು 

ನೇಪಾಳದಲ್ಲಿ ರಾಜಕೀಯ ಅಸ್ಥಿರತೆಯ ನಡುವೆಯೇ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರ ರಣತಂತ್ರ ಹೆಣೆಯುತ್ತಿದ್ದು, ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯುವುದಕ್ಕೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ.

ಕಠ್ಮಂಡು: ನೇಪಾಳದಲ್ಲಿ ರಾಜಕೀಯ ಅಸ್ಥಿರತೆಯ ನಡುವೆಯೇ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರ ರಣತಂತ್ರ ಹೆಣೆಯುತ್ತಿದ್ದು, ಮೇಲ್ಮನೆಯ ಚಳಿಗಾಲದ ಅಧಿವೇಶನ ಕರೆಯುವುದಕ್ಕೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ. 

ಪ್ರತಿನಿಧಿಗಳ ಸಭೆಯನ್ನು ವಿಸರ್ಜನೆ ಮಾಡಿದ ಒಂದು ವಾರದ ನಂತರ ಈ ಶಿಫಾರಸು ಕಳಿಸಿದ್ದು, ಜ.1 ರಂದು ಸಭೆ ಕರೆಯುವುದಕ್ಕೆ ಕೇಳಿದೆ.

ಪ್ರಧಾನಿಗಳ ಶಿಫಾರಸಿನ ಆಧಾರದಲ್ಲಿ ವಿದ್ಯಾದೇವಿ ಭಂಡಾರಿ ಕಳೆದ ವಾರ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ನ್ನು ವಿಸರ್ಜನೆ ಮಾಡಿದ್ದು, ಮಧ್ಯಂತರ ಚುನಾವಣೆಯನ್ನು ಘೋಷಿಸಿದ್ದರು. ಇದಕ್ಕೆ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳಿಂದ ಪ್ರತಿಭಟನೆಯೂ ವ್ಯಕ್ತವಾಗಿತ್ತು.

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷ ಈಗ ಅಕ್ಷರಸಹ ಇಬ್ಭಾಗವಾಗಿದ್ದು,  ಪ್ರಚಂಡ ಅವರ ಬಣ ಹಾಗೂ ಕೆಪಿ ಶರ್ಮಾ ಒಲಿ ಬಣದ ನಡುವೆ ತಿಕ್ಕಾಟ ಉಂಟಾಗಿದೆ. ಈಗ ಪ್ರತಿನಿಧಿಗಳ ಸಭೆಯನ್ನು ವಿಸರ್ಜನೆ ಮಾಡಿದ ಬಳಿಕ ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಷನಲ್ ಅಸೆಂಬ್ಲಿಯ ಚಳಿಗಾಲದ ಅಧಿವೇಶನವನ್ನು ಜ.1 ರಿಂದ ಕರೆಯುವಂತೆ ಶಿಫಾರಸು ಕಳಿಸಲಾಗಿದೆ. 

ಪ್ರತಿನಿಧಿಗಳ ಸಭೆಯನ್ನು ವಿಸರ್ಜನೆ ಮಾಡಿದ ಬಳಿಕ ಪ್ರಚಂಡ ನೇತೃತ್ವದ ಬಣದ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.  ಈಗ ಎರಡೂ ಬಣದ ನಾಯಕರು ಪಕ್ಷದ ಮೇಲೆ ಹಕ್ಕು ಸ್ಥಾಪನೆಗಾಗಿ ಯತ್ನಿಸುತ್ತಿದ್ದು, ಚುನಾವಣಾ ಚಿಹ್ನೆಯನ್ನು ಪಡೆಯುವುದಕ್ಕೂ ಯತ್ನಿಸುತ್ತಿದ್ದಾರೆ, ಎನ್ ಸಿ ಪಿಯ ಯಾವ ಬಣ ಪಕ್ಷದ ಚಿಹ್ನೆ ಹಾಗೂ ಹೆಸರನ್ನು ಚುನಾವಣೆಗೆ ಬಳಸಿಕೊಳ್ಳುವುದಕ್ಕೆ ಕಾನೂನು ಬದ್ಧವಾಗಿ ಅಧಿಕಾರ ಹೊಂದಿದೆ ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT