ಡೊನಾಲ್ಡ್ ಟ್ರಂಪ್ 
ವಿದೇಶ

ಅಮೆರಿಕಾ ಸೆನೆಟ್'ನಲ್ಲಿ ಅಧ್ಯಕ್ಷ ಟ್ರಂಪ್'ಗೆ ಜಯ: ವಾಗ್ದಂಡನೆ ಮಂಡಿಸಿದ್ದ ಡೆಮಾಕ್ರಟಿಕ್'ಗೆ ತೀವ್ರ ಮುಖಭಂಗ

ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಅಮೆರಿಕಾ ಸೆನೆಟ್ ನಲ್ಲಿ ಡೆಮಾಕ್ರಟಿಕ್ ರಿಪಬ್ಲಿಕನ್ ಪಕ್ಷ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಮಂಡಿಸಿದ್ದ ವಾಗ್ದಂಡನೆಗೆ ಸೋಲಾಗಿದ್ದು, ಟ್ರಂಪ್ ಅವರು ದೋಷಾರೋಪದಿಂದ ಖುಲಾಸೆಗೊಂಡ ಹಿನ್ನೆಲೆಯಲ್ಲಿ ತೀವ್ರ ಮುಖಭಂಗ ಎದುರಿಸುವಂತಾಗಿದೆ. 

ವಾಷಿಂಗ್ಟನ್: ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಅಮೆರಿಕಾ ಸೆನೆಟ್ ನಲ್ಲಿ ಡೆಮಾಕ್ರಟಿಕ್ ರಿಪಬ್ಲಿಕನ್ ಪಕ್ಷ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಮಂಡಿಸಿದ್ದ ವಾಗ್ದಂಡನೆಗೆ ಸೋಲಾಗಿದ್ದು, ಟ್ರಂಪ್ ಅವರು ದೋಷಾರೋಪದಿಂದ ಖುಲಾಸೆಗೊಂಡ ಹಿನ್ನೆಲೆಯಲ್ಲಿ ತೀವ್ರ ಮುಖಭಂಗ ಎದುರಿಸುವಂತಾಗಿದೆ. 

ಅಧಿಕಾರ ದುರುಪಯೋಗ ಮತ್ತು ಸಂಸತ್ ತನಿಖೆಗೆ ಅಡ್ಡಿಯುಂಟು ಮಾಡಿದ್ದಾರೆಂಬ ಆರೋಪದ ಮೇಲೆ ಡೆಮಾಕ್ರೆಟಿಕ್ ಪಕ್ಷ ಟ್ರಂಪ್ ವಿರುದ್ಧ ವಾಗ್ದಂಡನೆ ಮಂಡಿಸಿತ್ತು. ಹೀಗಾಗಿ ಈ ವಿಚಾರ ಅಮೆರಿಕಾದ ಸೆನೆಟ್ ನಲ್ಲಿ ವಿಚಾರಣೆಗೆ ಬಂದಿತ್ತು. 

ಟ್ರಂಪ್ ಅವರ ಕಾನೂನು ತಂಡವು ಅಧ್ಯಕ್ಷಕರು ಯಾವುದೇ ತಪ್ಪನ್ನೂ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ಡೆಮಾಕ್ರೆಟಿಕ್ ಪಕ್ಷದ ವಾಗ್ದಂಡನೆ ದುರ್ಬಲದಿಂದ ಕೂಡಿದ್ದು, ಸಂವಿಧಾನದ ಅಪಾಯಕ ಕೃತ್ಯ ಎಂದು ಪ್ರತಿಪಾದಿಸಿದರು. ಇದರಂತೆ ವಾಗ್ದಂಡನೆಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದರು. 

ಬಳಿಕ ಟ್ರಂಪ್ ವಿರುದ್ಧ ಕೇಳಿ ಬಂದ ಅಧಿಕಾರ ದುರುಪಯೋಗ ಆರೋಪದಿಂದ ಮುಕ್ತಗೊಳಿಸಲು ಮತದಾನ ನಡೆಯಿತು. ಈ ವೇಳೆ ಟ್ರಂಪ್ ಪರವಾಗಿ 52 ಮತಗಳು ಬಿದ್ದರೆ, ಟ್ರಂಪ್ ವಿರುದ್ಧವಾಗಿ 48 ಮಂತಗಳು ಬಂದಿದ್ದವು. ಈ ಮೂಲಕ ಟ್ರಂಪ್ ವಾಗ್ದಂಡನೆಯಿಂದ ಮುಕ್ತಿ ಪಡೆದಿರು. ಈ ಮೂಲಕ ಅಮೆರಿಕಾದ ಇತಿಹಾಸದಲ್ಲಿಯೇ ವಾಗ್ದಂಡನೆಯಿಂದ ಪಾರಾದ ಮೂರನೇ ಅಧ್ಯಕ್ಷ ಇವರಾಗಿದ್ದಾರೆ. 

ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಬಹುದಾದ ಜೋ ಬಿಡೆನ್ ಅವರ ವ್ಯಕ್ತಿತ್ವಕ್ಕೆ ಚ್ಯುತಿ ತರುವ ಮಾಹಿತಿಯನ್ನು ಬಹಿರಂಗಪಡಿಸುವಂತೆ ಟ್ರಂಪ್ ಅವರು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದಕ್ಕಾಗಿ ಅಮೆರಿಕಾದಿಂದ ಉಕ್ರೇನ್ ಸೇನಾ ಕಾರ್ಯಾಚರಣೆಗಾಗಿ ಬಿಡುಗಡೆಯಾದ 400 ಮಿಲಿಯನ್ ಡಾಲರ್'ನ್ನು ಟ್ರಂಪ್ ತಡೆಹಿಡಿದಿದ್ದಾರೆಂದು ಹೇಳಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT