ವಿಜಯ್ ಮಲ್ಯ(ಸಂಗ್ರಹ ಚಿತ್ರ) 
ವಿದೇಶ

ಗಡೀಪಾರು ಆದೇಶದಲ್ಲಿ ಹಲವು ದೋಷಗಳು: ಇಂಗ್ಲೆಂಡ್ ಹೈಕೋರ್ಟ್ ನಲ್ಲಿ ವಿಜಯ್ ಮಲ್ಯ ಪರ ವಕೀಲೆ ವಾದ 

ಸುಮಾರು 9 ಸಾವಿರ ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಭಾರತಕ್ಕೆ ಹಸ್ತಾಂತರ ಆರೋಪ ಎದುರಿಸುತ್ತಿರುವ ಮದ್ಯ ದೊರೆ ವಿಜಯ್ ಮಲ್ಯ ಲಂಡನ್ ನ ರಾಯಲ್ ಕೋರ್ಟ್ ಆಫ್ ಜಸ್ಟೀಸ್ ಮುಂದೆ ವಿಚಾರಣೆಗೆ ಹಾಜರಾದರು.

ಲಂಡನ್: ಸುಮಾರು 9 ಸಾವಿರ ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಭಾರತಕ್ಕೆ ಹಸ್ತಾಂತರ ಆರೋಪ ಎದುರಿಸುತ್ತಿರುವ ಮದ್ಯ ದೊರೆ ವಿಜಯ್ ಮಲ್ಯ ಲಂಡನ್ ನ ರಾಯಲ್ ಕೋರ್ಟ್ ಆಫ್ ಜಸ್ಟೀಸ್ ಮುಂದೆ ವಿಚಾರಣೆಗೆ ಹಾಜರಾದರು. ವಿಚಾರಣೆ ವೇಳೆ ಮಲ್ಯ ಪರ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದಲ್ಲಿ ಹಲವು ದೋಷಗಳು ಆಗಿವೆ ಎಂದು ಪ್ರತಿಪಾದಿಸಿದರು.


64 ವರ್ಷದ ಕಿಂಗ್ ಫಿಶರ್ ಏರ್ ಲೈನ್ಸ್ ನ ಮಾಜಿ ಮಾಲೀಕ ವಿಜಯ್ ಮಲ್ಯ ವಿರುದ್ಧ 2017ರ ಏಪ್ರಿಲ್ ನಲ್ಲಿ ಭಾರತಕ್ಕೆ ಗಡೀಪಾರು ಮಾಡುವ ಕುರಿತು ಬಂಧನ ವಾರಂಟ್ ಜಾರಿಯಾಗಿತ್ತು. ಇದಕ್ಕೆ ವಿರುದ್ಧವಾಗಿ ಕೋರ್ಟ್ ಗೆ ಹೋಗಿ ಸದ್ಯ ಜಾಮೀನಿನಲ್ಲಿರುವ ವಿಜಯ್ ಮಲ್ಯ ನಿನ್ನೆ ಕೋರ್ಟ್ ಗೆ ಹೋಗುವಾಗ ಸುದ್ದಿಗಾರರ ಎಂದಿನ ಪ್ರಶ್ನೆಗಳ ಕಿರಿಕಿರಿಯನ್ನು ತಪ್ಪಿಸಿಕೊಂಡು ತಮ್ಮ ಪರ ವಕೀಲೆ ಜೊತೆ ಪ್ರತ್ಯೇಕವಾಗಿ ಕೋರ್ಟ್ ಒಳಗೆ ಹೋದರು.


ವಿಚಾರಣೆ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ನಾನು ಇಲ್ಲಿಗೆ ಕೇವಲ ವಿಚಾರಣೆಗೆ ಬಂದಿದ್ದೇನೆ ಎಂದು ಮಾತ್ರ ಹೇಳಿದರು. ಮಲ್ಯ ಅವರನ್ನು ಭಾರತಕ್ಕೆ ಗಡೀಪಾರು ಮಾಡಬೇಕೆಂದು 2018ರ ಡಿಸೆಂಬರ್ ನಲ್ಲಿ ಮುಖ್ಯ ಮ್ಯಾಜಿಸ್ಟ್ರೇಟ್ ಎಮ್ಮ ಅರ್ಜುಥ್ನಾಟ್ ನೀಡಿದ ತೀರ್ಪಿನಲ್ಲಿ ದೋಷವಿದ್ದು, ಭಾರತ ಸರ್ಕಾರ ಸಲ್ಲಿಸಿದ ಕೆಲವು ಸಾಕ್ಷಿ ಹೇಳಿಕೆಗಳನ್ನು ಸಹ ಮಲ್ಯ ಪರ ವಕೀಲರು ನಿನ್ನೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿದರು. 


ನಿನ್ನೆ ಕೋರ್ಟ್ ನಲ್ಲಿ ವಾದ ಮಂಡಿಸಿದ ಮಲ್ಯ ಪರ ವಕೀಲೆ ಕ್ಲೇರ್ ಮೊಂಟ್ಗೊಮರಿ, ವ್ಯಾಪಾರದಲ್ಲಿ ಕುಸಿಯುತ್ತಿದ್ದ ಕಿಂಗ್ ಫಿಶರ್ ಏರ್ ಲೈನ್ಸ್ ನ್ನು ಮೇಲೆತ್ತಲು ಮಲ್ಯ ಅವರು ಬ್ಯಾಂಕ್ ಸಾಲವನ್ನು ಪಡೆದಿದ್ದರೇ ಹೊರತು ಬ್ಯಾಂಕ್ ಸಾಲ ತೆಗೆದುಕೊಳ್ಳುವ ಸಮಯದಲ್ಲಿ ಅವರ ಮನಸ್ಸಿನಲ್ಲಿ ಯಾವ ದುರುದ್ದೇಶವೂ ಇರಲಿಲ್ಲ. ಆ ಸಮಯದಲ್ಲಿ ಅವರು ಶ್ರೀಮಂತ ಉದ್ಯಮಿಯಾಗಿದ್ದರು ಕೂಡ. ಯಾವುದೇ ವಂಚನೆಯ ಯೋಜನೆಗಳಲ್ಲಿ ಹೂಡಿಕೆ ಮಾಡುವುದು, ಅವ್ಯವಹಾರ ನಡೆಸುವ ಕೆಲಸ ಅವರು ಮಾಡಲಿಲ್ಲ, ಭಾರತದ ಇತರ ವಿಮಾನಯಾನ ಸಂಸ್ಥೆಗಳಂತೆ ಪ್ರತಿಷ್ಠಿತ ಏರ್ ಲೈನ್ ಆಗಿದ್ದ ಕಿಂಗ್ ಫಿಶರ್ ಆರ್ಥಿಕವಾಗಿ ಕುಸಿಯಿತು ಎಂದು ಹೇಳಿದರು.


ಈ ವಿಚಾರಣೆ ಮೂರು ದಿನಗಳಿಂದ ನಡೆಯುತ್ತಿದ್ದು ಭಾರತ ಸರ್ಕಾರದ ಪರವಾಗಿ ಇಂದು ಕ್ರೌನ್ ಪ್ರಾಸಿಕ್ಯೂಶನ್ ಸರ್ವಿಸ್(ಸಿಪಿಎಸ್) ಲಂಡನ್ ಕೋರ್ಟ್ ನಲ್ಲಿ ಪ್ರತಿವಾದ ಮಂಡಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ