ವಿದೇಶ

ದಯವಿಟ್ಟು ನಿಮ್ಮ ಹಣ ತೆಗೆದುಕೊಳ್ಳಿ: ಬ್ಯಾಂಕುಗಳಿಗೆ ಉದ್ಯಮಿ ವಿಜಯ್ ಮಲ್ಯ ಅಲವತ್ತು

ನನಗೆ ನಿಮ್ಮ ಹಣ ಬೇಡ ಸಾಲ ಕಟ್ಟದೆ ಮೊಸ ಮಾಡುವ ವ್ಯಕ್ತಿ ನಾನಲ್ಲ ಅದು ನನ್ನ ಜಾಯಮಾನವೂ ಅಲ್ಲ ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು, ಪ್ರಮಾದ ಎಸಗಿಲ್ಲ ಬ್ಯಾಂಕ್ ಗಳೇ, ನಿಮಗೆ ಕೊಡಬೇಕಿರುವ, ಬಾಕಿ ಇರುವ, ನೀವು ನೀಡಿದ ಮೂಲ ಹಣವನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಬೆಂಗಳೂರು ಮೂಲದ ಮದ್ಯ ಉದ್ಯಮಿ ವಿಜಯ್ ಮಲ್ಯ ಅಲವತ್ತುಕೊಂಡಿದ್ದಾರೆ. 

ಲಂಡನ್: ನನಗೆ ನಿಮ್ಮ ಹಣ ಬೇಡ ಸಾಲ ಕಟ್ಟದೆ ಮೊಸ ಮಾಡುವ ವ್ಯಕ್ತಿ ನಾನಲ್ಲ ಅದು ನನ್ನ ಜಾಯಮಾನವೂ ಅಲ್ಲ ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು, ಪ್ರಮಾದ ಎಸಗಿಲ್ಲ ಬ್ಯಾಂಕ್ ಗಳೇ, ನಿಮಗೆ ಕೊಡಬೇಕಿರುವ, ಬಾಕಿ ಇರುವ, ನೀವು ನೀಡಿದ ಮೂಲ ಹಣವನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಬೆಂಗಳೂರು ಮೂಲದ ಮದ್ಯ ಉದ್ಯಮಿ ವಿಜಯ್ ಮಲ್ಯ ಅಲವತ್ತುಕೊಂಡಿದ್ದಾರೆ. 


ಭಾರತಕ್ಕೆ ಗಡೀಪಾರು ಮಾಡುವ ಆದೇಶದ ವಿರುದ್ಧ ಬ್ರಿಟನ್ ಹೈಕೋರ್ಟ್ ನಲ್ಲಿ ಸಲ್ಲಿಸಿದ ಮೇಲ್ಮನವಿಯ ಮೂರು ದಿನಗಳ ವಿಚಾರಣೆಯ ನಂತರ ಈ ಕೋರಿಕೆ ಮುಂದಿಟ್ಟಿದ್ದಾರೆ. 


ಬ್ಯಾಂಕ್ ಗಳಿಂದ ಪಡೆದ 9 ಸಾವಿರ ಕೋಟಿ ರೂಪಾಯಿ ವಾಪಾಸು ಮಾಡದೇ ವಂಚಿಸಿದ ಆರೋಪ ಎದುರಿಸುತ್ತಿರುವ ಕಿಂಗ್ ಫಿಶರ್ಸ್ ಸಮೂಹದ ಮುಖ್ಯಸ್ಥ, "ಕಾನೂನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಒಂದೇ ಆಸ್ತಿಗಾಗಿ ಜಗಳವಾಡುತ್ತಿವೆ. ಆದರೆ ಈ ಪ್ರಕ್ರಿಯೆಯಲ್ಲಿ ನನ್ನನ್ನು ವಿವೇಚನಾಯುಕ್ತವಾಗಿ, ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಆಪಾದಿಸುತ್ತಿದ್ದಾರೆ. 


ಬ್ಯಾಂಕುಗಳು ನೀಡಿದ ಸಾಲದ ಹಣವನ್ನು ವಾಪಾಸು ತೆಗೆದುಕೊಳ್ಳುವಂತೆ ನಾನು ಕೈಮುಗಿದು ಮನವಿ ಮಾಡುತ್ತೇನೆ ಎಂದು ಲಂಡನ್ ನಲ್ಲಿರುವ ರಾಯಲ್ ಕೋರ್ಟ್ ಆಫ್ ಜೆಸ್ಟೀಸ್ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಹೇಳಿದರು. 


ನಾನು ಹಣ ಮರುಪಾವತಿ ಮಾಡಿಲ್ಲ ಎಂಬ ಬ್ಯಾಂಕ್ ಗಳ ದೂರಿನ ಆಧಾರದಲ್ಲಿ ಜಾರಿ ನಿರ್ದೇಶನಾಲಯ ನನ್ನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಆದರೆ ಇಡಿ ಸ್ವಯಂಪ್ರೇರಿತವಾಗಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು, ಅಪರಾಧ ಮಾಡಿಲ್ಲ ಎಂದು ಮಲ್ಯ ಸಮರ್ಥಿಸಿಕೊಳ್ಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT