ಬರ್ನಿ ಸ್ಯಾಂಡರ್ಸ್(ಸಂಗ್ರಹ ಚಿತ್ರ) 
ವಿದೇಶ

ಭಾರತದೊಂದಿಗೆ ರಕ್ಷಣಾ ಒಪ್ಪಂದವೇ ಏಕೆ..? ಟ್ರಂಪ್ ನಡೆ ಟೀಕಿಸಿದ ಅಮೆರಿಕ ಸೆನೆಟರ್

ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಬರೊಬ್ಬರಿ 3 ಬಿಲಿಯನ್ ಮೌಲ್ಯದ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದೇ ವಿಚಾರವಾಗಿ ಅಮೆರಿಕ ಸೆನೆಟರ್ ಒಬ್ಬರು ಟ್ರಂಪ್ ವಿರುದ್ಧ ಕಿಡಿಕಾರಿದ್ದಾರೆ.

ವಾಷಿಂಗ್ಟನ್: ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಬರೊಬ್ಬರಿ 3 ಬಿಲಿಯನ್ ಮೌಲ್ಯದ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದೇ ವಿಚಾರವಾಗಿ ಅಮೆರಿಕ ಸೆನೆಟರ್ ಒಬ್ಬರು ಟ್ರಂಪ್ ವಿರುದ್ಧ ಕಿಡಿಕಾರಿದ್ದಾರೆ.

ಅಮೆರಿಕದ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಎಂದೇ ಹೇಳಲಾಗುತ್ತಿರುವ ಬರ್ನಿ ಸ್ಯಾಂಡರ್ಸ್ ಭಾರತ ಮತ್ತು ಅಮೆರಿಕ ನಡುವಿನ ರಕ್ಷಣಾ ಒಪ್ಪಂದದ ಕುರಿತು ಕಿಡಿಕಾರಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಇಡೀ ಜಗತ್ತು ಜಾಗತಿಕ ತಾಪಮಾನ ಏರಿಕೆಯಿಂದ ದುಷ್ಪರಿಣಾಮ ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತದೊಂದಿಗೆ ರಕ್ಷಣಾ ಒಪ್ಪಂದ ಮಾಡಿಕೊಳ್ಳುವ ಮೂಲಕ ಡೊನಾಲ್ಡ್ ಟ್ರಂಪ್ ವಿಶ್ವಕ್ಕೆ ಯಾವ ಸಂದೇಶ ನೀಡುತ್ತಿದ್ದಾರೆಯೋ ತಿಳಿಯುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

3 ಬಿಲಿಯನ್ ಮೊತ್ತದ ಬೃಹತ್ ರಕ್ಷಣಾ ಒಪ್ಪಂದದ ಬದಲಿಗೆ, ಟ್ರಂಪ್ ಭಾರತವನ್ನೂ ಕೂಡ ಜಾಗತಿಕ ತಾಪಮಾನ ಏರಿಕೆ ಹೋರಾಟದಲ್ಲಿ ಪಾಲುದಾರರನ್ನಾಗಿ ಮಾಡಿಕೊಳ್ಳಬಹುದಿತ್ತು. ಆದರೆ ಟ್ರಂಪ್ ಭಾರತಕ್ಕೆ ರೇಥಿಯಾನ್, ಬೋಯಿಂಗ್ ಮತ್ತು ಲಾಕ್ಹೀಡ್ ಸಂಸ್ಥೆಗಳ ಯುದ್ಧೋಪಕರಣಗಳು ಮತ್ತು ಯುದ್ಧ ವಿಮಾನಗಳ ಮಾರಾಟದ ಕುರಿತು ಒಪ್ಪಂದ ಮಾಡಿಕೊಂಡಿದ್ದಾರೆ. ಇದು ಸರಿಯಲ್ಲ. ನಾವು ಒಗ್ಗೂಡಿ ವಾಯುಮಾಲಿನ್ಯವನ್ನು ತಡೆಯಬಹುದು. ಅಲ್ಲದೆ ಉತ್ತಮ ನವೀಕರಿಸಬಹುದಾದ ಇಂಧನ ಮೂಲಗಳನ್ನು ಸಂಶೋಧಿಸಿ, ಉದ್ಯೋಗಗಳ ಸೃಷ್ಟಿ ಮಾಡಬಹುದು. ಆ ಮೂಲಕ ಈ ಭೂಮಿಯನ್ನು ಉಳಿಸಬಹುದು ಎಂದು ಸ್ಯಾಂಡರ್ಸ್ ಅಭಿಪ್ರಾಯಪಟ್ಟಿದ್ದಾರೆ.

78 ವರ್ಷ ವಯಸ್ಸಿನ ಬರ್ನಿ ಸ್ಯಾಂಡರ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಚುನಾವಣೆಯ ಪ್ರಮುಖ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಟ್ರಂಪ್ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಸ್ಯಾಂಡರ್ಸ್ ಟ್ರಂಪ್ ಸರ್ಕಾರದ ಪ್ರಮುಖ ಟೀಕಾಕಾರಾಗಿದ್ದಾರೆ. ಟ್ರಂಪ್ ಸರ್ಕಾರದ ನೀತಿಗಳನ್ನು ನೇರವಾಗಿಯೇ ಸ್ಯಾಂಡರ್ಸ್ ವಿರೋಧಿಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT