ಅಮೆರಿಕ-ತಾಲಿಬಾನ್ ಶಾಂತಿ ಒಪ್ಪಂದಕ್ಕೂ ಮುನ್ನ ಅಫ್ಘಾನಿಸ್ತಾನಕ್ಕೆ ಭಾರತದ ಅಧಿಕಾರಿ ಭೇಟಿ! 
ವಿದೇಶ

ಅಮೆರಿಕ-ತಾಲಿಬಾನ್ ಶಾಂತಿ ಒಪ್ಪಂದಕ್ಕೂ ಮುನ್ನ ಅಫ್ಘಾನಿಸ್ತಾನಕ್ಕೆ ಭಾರತದ ಅಧಿಕಾರಿ ಭೇಟಿ!

ಅಮೆರಿಕ-ತಾಲಿಬಾನ್ ಶಾಂತಿ ಒಪ್ಪಂದಕ್ಕೂ ಮುನ್ನ ಅಫ್ಘಾನಿಸ್ತಾನಕ್ಕೆ ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಭೇಟಿ ನೀಡಿದ್ದಾರೆ.

ಕಾಬೂಲ್: ಅಮೆರಿಕ-ತಾಲಿಬಾನ್ ಶಾಂತಿ ಒಪ್ಪಂದಕ್ಕೂ ಮುನ್ನ ಅಫ್ಘಾನಿಸ್ತಾನಕ್ಕೆ ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಭೇಟಿ ನೀಡಿದ್ದಾರೆ.

ಫೆ.29 ರಂದು ಅಮೆರಿಕ-ತಾಲಿಬಾನ್ ಶಾಂತಿ ಒಪ್ಪಂದ ನಡೆಯಲಿದ್ದು, ಇದಕ್ಕೆ ಒಂದು ದಿನ ಮುಂಚಿತವಾಗಿ ಅಫ್ಘಾನಿಸ್ತಾನದ ವಿದೇಶಾಂಗ ಸಚಿವರನ್ನು ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಈ ವೇಳೆ ಶಾಂತಿ ಒಪ್ಪಂದದ ಕುರಿತು ಭಾರತದ ನಿಲುವು, ಅಫ್ಘಾನಿಸ್ತಾನದ ಸಮಗ್ರ ಅಭಿವೃದ್ಧಿಗೆ ತನ್ನ ಬದ್ಧತೆಯನ್ನು ತಿಳಿಸಿದ್ದಾರೆ. ದ್ವಿಪಕ್ಷೀಯ ಮಾತುಕತೆ ಬಗ್ಗೆ ವಿದೇಶಾಂಗ ಇಲಾಖೆಯ ವಕ್ತಾರ ರವೀಶ್ ಕುಮಾರ್ ಮಾಹಿತಿ ನೀಡಿದ್ದು, ಉಭಯ ನಾಯಕರು ದ್ವಿಪಕ್ಷೀಯ ಕಾರ್ಯತಂತ್ರ ಪಾಲುದಾರಿಗೆ ಅಭಿವೃದ್ಧಿಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ದೋಹಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಬಿಳಲಿದ್ದು, ಪರಿಣಾಮ 18 ವರ್ಷಗಳ ಬಳಿಕ ಅಫ್ಘಾನಿಸ್ತಾನದಿಂದ ಅಮೆರಿಕಾದ ಸೇನಾ ತುಕಡಿಗಳು ವಾಪಸ್ ತೆರಳಲಿವೆ. ಭಾರತ ಅಫ್ಘಾನಿಸ್ತಾನದ ಜನತೆಗೆ ಸುಸ್ಥಿರ ಶಾಂತಿ, ಭದ್ರತೆ ಅಭಿವೃದ್ಧಿ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಲಿದೆ ಎಂಬ ಸಂದೇಶವನ್ನು ವಿದೇಶಾಂಗ ಕಾರ್ಯದರ್ಶಿ ರವಾನೆ ಮಾಡಿದ್ದಾರೆ ಎಂದು ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. 

ಅಫ್ಘಾನಿಸ್ತಾನ ಶಾಂತಿ ಹಾಗೂ ಸಾಮರಸ್ಯ ಪ್ರಕ್ರಿಯೆಗೆ ಮಧ್ಯಸ್ಥಿಕೆ ವಹಿಸುವಲ್ಲಿ ಭಾರತದ ಪಾತ್ರ ಪ್ರಮುಖವಾಗಿದೆ. ಶಾಂತಿ ಒಪ್ಪಂದದ ವೇಳೆ ಕತಾರ್ ನಲ್ಲಿರುವ ಭಾರತದ ರಾಯಭಾರಿ ಪಿ.ಕುಮಾರನ್ ಸಹ ಭಾಗಿಯಾಗಲಿದ್ದಾರೆ. ತಾಲಿಬಾನ್ ಉಪಸ್ಥಿತಿ ಇರುವ ಒಪ್ಪಂದದಲ್ಲಿ ಇದೇ ಮೊದಲ ಬಾರಿಗೆ ಭಾರತದ ಅಧಿಕಾರಿಯೊಬ್ಬರು ಅಧಿಕೃತವಾಗಿ ಭಾಗಿಯಾಗುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT