ಸಂಗ್ರಹ ಚಿತ್ರ 
ವಿದೇಶ

ಎನ್ಆರ್ ಸಿ ಎಫೆಕ್ಟ್: 2 ತಿಂಗಳಲ್ಲಿ 445 ಬಾಂಗ್ಲಾದೇಶಿಯರು ಸ್ವದೇಶಕ್ಕೆ ವಾಪಸ್!

ಭಾರತದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ಪರಿಣಾಮ ಕಳೆದ 2 ತಿಂಗಳಲ್ಲಿ ಭಾರತದಿಂದ ಸುಮಾರು 445 ಬಾಂಗ್ಲಾದೇಶೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ಪರಿಣಾಮ ಕಳೆದ 2 ತಿಂಗಳಲ್ಲಿ ಭಾರತದಿಂದ ಸುಮಾರು 445 ಬಾಂಗ್ಲಾದೇಶೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ ನಿರ್ದೇಶಕ ಜನರಲ್ ಮೊಹಮದ್ ಶಫೀನುಲ್ ಇಸ್ಲಾಮ್ ಅವರು ಮಾಹಿತಿ ನೀಡಿದ್ದು, ಕಳೆದ 2 ತಿಂಗಳಲ್ಲಿ ಭಾರತದಿಂದ 445 ಬಾಂಗ್ಲಾದೇಶೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ. ಅಂತೆಯೇ 2019ರಲ್ಲಿ ಭಾರತದಿಂದ ಬಾಂಗ್ಲಾದೇಶಕ್ಕೆ ಅಕ್ರಮವಾಗಿ ನುಸುಳಿದ ಆರೋಪದ ಮೇರೆಗೆ ಸುಮಾರು 1000 ಮಂದಿ ನಿರಾಶ್ರಿತರನ್ನು ಬಂಧಿಸಲಾಗಿದೆ. 445 ಮಂದಿ ಬಾಂಗ್ಲಾದೇಶೀಯರ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಅವರೆಲ್ಲರೂ ಬಾಂಗ್ಲಾದೇಶಿಯರೇ ಆಗಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಭಾರತದ ಪೌರತ್ವ ನೋಂದಣಿ ಕುರಿತು ಮಾತನಾಡಿದ ಅವರು, ಎನ್ ಆರ್ ಸಿ ಭಾರತದ ಆಂತರಿಕ ವಿಚಾರ. ನೆರೆಯ ರಾಷ್ಟ್ರಗಳ ಹಿತಾಸಕ್ತಿಗೆ ಧಕ್ಕೆಯಾಗದ ರೀತಿಯಲ್ಲಿ ಭಾರತ ಕಾನೂನು ರಚನೆ ಮಾಡಲಿದೆ ಎಂಬ ವಿಶ್ವಾಸವಿದೆ. ಆದರೆ ಗಡಿಯಲ್ಲಿ ಉಭಯ ದೇಶದಗಳ ಸೈನಿಕರ ನಡುವೆ ಪರಸ್ಪರ ಸಹಕಾರ ಮುಖ್ಯ. ಅಂತೆಯೇ ಗಡಿಯಲ್ಲಿ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ) ತನ್ನ ಕಾರ್ಯ ಮುಂದುವರೆಸಲಿದ್ದು, ಗಡಿಯಾಚೆಗಿನ ಸ್ಮಗ್ಲಿಂಗ್ ಮತ್ತು ಇತರೆ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಡಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT